spot_img

ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸುವಂತಿಲ್ಲ: ಸುಪ್ರೀಂಕೋರ್ಟ್ ಮಹತ್ವದ ಆದೇಶ

Date:

ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಸುಪ್ರೀಂಕೋರ್ಟ್, ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾದ ಕಲಂ 35ರಡಿ ವಾಟ್ಸಾಪ್ ಅಥವಾ ಇತರ ವಿದ್ಯುನ್ಮಾನ ವಿಧಾನಗಳ ಮೂಲಕ ಬಂಧನ-ಪೂರ್ವ ನೋಟಿಸ್‌ಗಳನ್ನು ಕಳುಹಿಸುವಂತಿಲ್ಲ ಎಂದು ಹೇಳಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಎಂ ಸುಂದರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ಪೀಠವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಆದೇಶಗಳನ್ನು ಆಯಾ ಪೊಲೀಸ್ ಇಲಾಖೆಗಳಿಗೆ ನೀಡುವಂತೆ ಸೂಚಿಸಿದ್ದು ಸಿಆರ್‌ಪಿಸಿ ಅಥವಾ ಬಿಎನ್‌ಎಸ್‌ಎಸ್ ಅಡಿಯಲ್ಲಿ ನಿಗದಿತ ಸೇವಾ ವಿಧಾನದ ಮೂಲಕ ಮಾತ್ರ ಅಂತಹ ಸೂಚನೆಗಳನ್ನು ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶಗಳನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ವಾಟ್ಸಾಪ್ ಅಥವಾ ಇತರ ವಿದ್ಯುನ್ಮಾನ ವಿಧಾನಗಳ ಮೂಲಕ ನೋಟಿಸ್‌ಗಳನ್ನು ಹೊರಡಿಸುವುದನ್ನು ಸಿಆರ್‌ಪಿಸಿ,1973/ಬಿಎನ್‌ಎಸ್‌ಎಸ್, 2023ಯಲ್ಲಿ ಗುರುತಿಸಲಾಗಿರುವ ಮತ್ತು ಸೂಚಿಸಲಾಗಿರುವ ವಿಧಾನಗಳಿಗೆ ಪರ್ಯಾಯವಾಗಿ ಅಥವಾ ಬದಲಿಯಾಗಿ ಪರಿಗಣಿಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಹೇಳಿತು.
ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರ ಅರ್ಜಿಯ ವಿಚಾರಣೆ ವೇಳೆ CrPC 1973 ರ ಸೆಕ್ಷನ್ 41-A ಅಡಿಯಲ್ಲಿ ನೋಟಿಸನ್ನು ವಾಟ್ಸಾಪ್ ಮೂಲಕ ಕಳುಹಿಸಲಾಗಿದೆ ಆದರೆ ಆರೋಪಿಗಳು ತನಿಖಾಧಿಕಾರಿಯ ಮುಂದೆ ಹಾಜರಾಗದ ಪ್ರಕರಣಗಳನ್ನು ಲುಥ್ರಾ ಹೈಲೈಟ್ ಮಾಡಿದ್ದು ಬಳಿಕ ಸುಪ್ರೀಂ ಕೋರ್ಟ್ ಈ ತೀರ್ಪನ್ನು ಹೊರಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.