ಕಾರ್ಕಳ ಕ್ರಿಯೇಟಿವ್ ಪಿ.ಯು. ಕಾಲೇಜಿನಲ್ಲಿ ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ

Date:

spot_img

ಕಾರ್ಕಳ : ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 11 ಜುಲೈ 2025 ರಂದು 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು.
ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ರವರು ಮಾತನಾಡಿ ಎನ್.ಸಿ.ಸಿ ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ಎನ್.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, “ಯುವಜನತೆ ರಾಷ್ಟ್ರದ ಭವಿಷ್ಯ, ಅವರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ’ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಎಂ.ಎ ಮುಲ್ತಾನಿ, ಪಿ.ಐ ಸ್ಟಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಆಂಗ್ಲ ಭಾಷಾ ಉಪನ್ಯಾಸಕ ಮಹೇಶ್ ಆರ್. ಶೆಣೈ, ಕೆ. ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಸುದೀಕ್ಷಾ ಎಸ್. ಪೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.