ಕರ್ತವ್ಯ ಲೋಪ: ಕುಂದಾಪುರ ಉಪವಿಭಾಗಾಧಿಕಾರಿ ಕೆ. ಮಹೇಶ್ಚಂದ್ರ ಅಮಾನತು

Date:

spot_img

ಉಡುಪಿ: ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ, ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನಲೆಯಲ್ಲಿ, ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ವಹಿಸಲಾಗಿದೆ.

ಭೂ ಬಳಕೆ ಬದಲಾವಣೆಯಲ್ಲಿ ಗಂಭೀರ ಅಕ್ರಮ?
ಮಹೇಶ್ ಚಂದ್ರ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಾಗ, ಬಡಾನಿಡಿಯೂರು ಗ್ರಾಮದಲ್ಲಿ ವಾಣಿಜ್ಯ ರೆಸಾರ್ಟ್ ನಿರ್ಮಾಣ ಸಂಬಂಧ ಭೂ ಉಪಯೋಗ ಬದಲಾವಣೆಗೆ ಸಂಬಂಧಿಸಿದ ಕಡತದಲ್ಲಿ ಅಕ್ರಮ ದಾಖಲೆ ಸೃಷ್ಟಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಉಡುಪಿ ಶಾಸಕರು ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ಅಸಮಾಧಾನಕರ ಸಮಜಾಯಿಷಿ, ಅಮಾನತು ಆದೇಶ
ಇದೀಗ ಈ ಪ್ರಕರಣದ ಬಗ್ಗೆ ಮಹೇಶ್ ಚಂದ್ರರಿಂದ ಸಮಜಾಯಿಷಿ ಕೇಳಲಾಗಿತ್ತು. ಆದರೆ, ಅವರ ಉತ್ತರ ತೃಪ್ತಿಕರವಾಗಿಲ್ಲ ಎಂಬ ಕಾರಣದಿಂದ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಜಿಲ್ಲಾಧಿಕಾರಿಯವರ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮರು ನೇಮಕಗೊಂಡ ರಶ್ಮಿ
ಈ ಹಿಂದೆ ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಉಪವಿಭಾಗಾಧಿಕಾರಿ ರಶ್ಮಿ ಅವರನ್ನು ಸರಕಾರ ಪುನರ್ ನೇಮಕ ಮಾಡಲು ಆದೇಶ ಹೊರಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ