ಬುಲ್ತಾನಾ ಜಿಲ್ಲೆಯಲ್ಲಿ ಹೊಸ ಆತಂಕ: ಕೂದಲಿನ ಬಳಿಕ ಈಗ ಉಗುರು ಉದುರುವಿಕೆ!

Date:

spot_img

ಮಹಾರಾಷ್ಟ್ರ : ಮಹಾರಾಷ್ಟ್ರದ ಬುಲ್ತಾನಾ ಜಿಲ್ಲೆಯಲ್ಲಿ ಆರೋಗ್ಯ ಸಮಸ್ಯೆಯ ಹೊಸ ರೂಪವೇ ಬೆಳಕಿಗೆ ಬಂದಿದೆ. ಕೆಲ ತಿಂಗಳ ಹಿಂದೆ ಹಳ್ಳಿಗಳಲ್ಲಿ ಕೂದಲು ಉದುರುವಿಕೆಯ ಪ್ರಕರಣಗಳು ಹೆಚ್ಚಾಗಿದ್ದವು. ಇದೀಗ, ಈ ಕೂದಲು ಉದುರಿದವರಲ್ಲಿಯೇ ಸುಮಾರು 10-12 ಜನರು ತಮ್ಮ ಉಗುರುಗಳನ್ನು ಕಳೆದುಕೊಳ್ಳುತ್ತಿರುವ ಘಟನೆ ವರದಿಯಾಗಿದೆ.

ಈ ಅಪರೂಪದ ಸ್ಥಿತಿಯ ಬಗ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಂಡವು ಆಗಲೇ ಈ ಹಳ್ಳಿಗಳನ್ನು ಭೇಟಿ ನೀಡಿ ವಿವಿಧ ಮಾದರಿಗಳನ್ನು ಸಂಗ್ರಹಿಸಿತ್ತು. ಪ್ರಾಥಮಿಕ ವರದಿಯ ಪ್ರಕಾರ, ದೇಹದಲ್ಲಿ ಸೆಲೆನಿಯಮ್ ಅಂಶದ ಪ್ರಮಾಣ ಹೆಚ್ಚಾಗಿರುವುದೇ ಈ ಸಮಸ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಗ್ರಾಮಸ್ಥರು ಈಗ ಮತ್ತಷ್ಟು ಆತಂಕದಲ್ಲಿದ್ದು, ತಮ್ಮ ಆರೋಗ್ಯದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾ ಆರೋಗ್ಯ ಇಲಾಖೆ ತುರ್ತಾಗಿ ಸ್ಥಳಕ್ಕೆ ಧಾವಿಸಿ ಹೊಸದಾಗಿ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಿದೆ.

ಸ್ಥಳೀಯರು ಈ ಸ್ಥಿತಿಗೆ ಸ್ಪಷ್ಟನೆ ನೀಡುವಂತೆ ಅಧಿಕಾರಿಗಳ ಗಮನ ಸೆಳೆದಿದ್ದು, ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಚೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಚೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ಹಸ್ತಾಂತರ: ಹೈಕೋರ್ಟ್ ಸೂಚನೆ

ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವನ್ಯಜೀವಿಗಳ ರಕ್ಷಣೆ ಬಗ್ಗೆ ಹೈಕೋರ್ಟ್ ನೀಡಿರುವ ಸಂಪೂರ್ಣ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ವಿವಾದ: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವ ಧರ್ಮೇಂದ್ರ ಪ್ರಧಾನ್

ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್. ಪೂರ್ಣ ಮಾಹಿತಿ ಇಲ್ಲಿದೆ ಓದಿ