spot_img

ಉಡುಪಿಯಲ್ಲಿ ಆಟೋ ಚಾಲಕರ ಮತ್ತು ಮಾಲಕರ ಒಕ್ಕೂಟದ ಹೊಸ ನಿಯಮ: ಯಾವುದೇ ಆಟೋ ನಿಲ್ದಾಣಗಳಲ್ಲಿ ಬಾಡಿಗೆ ಮಾಡಲು ಮುಕ್ತ ಅವಕಾಶ

Date:

ಉಡುಪಿ : ಉಡುಪಿ ನಗರ ವ್ಯಾಪ್ತಿಯ ಆಟೋ ನಿಲ್ದಾಣಗಳಲ್ಲಿ ಸಾಮರಸ್ಯ ಹಾಗೂ ಬಿಕ್ಕಟ್ಟು ನಿವಾರಣೆಯ ದೃಷ್ಟಿಯಿಂದ ಚಾಲಕರ ಮತ್ತು ಮಾಲಕರ ಒಕ್ಕೂಟ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಯಾವುದೇ ನಿಲ್ದಾಣದಲ್ಲಿ 5 ರಿಕ್ಷಾಗಳಿಗಿಂತ ಕಡಿಮೆ ಆಟೋಗಳಿದ್ದಲ್ಲಿ, ಇತರ ನಿಲ್ದಾಣದ ಆಟೋಗಳು ಅಲ್ಲಿ ಬಾಡಿಗೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಇತ್ತೀಚೆಗೆ ಕೆಲವೊಂದು ನಿಲ್ದಾಣಗಳಲ್ಲಿ ನಡೆದ ಗಲಾಟೆಗಳಿಂದ ಚಾಲಕರಿಗೆ ತೊಂದರೆ ಉಂಟಾಗಿದ್ದ ಹಿನ್ನೆಲೆಯಲ್ಲಿ, ಪೊಲೀಸ್ ಕೇಸುಗಳು ಹೆಚ್ಚಾಗಿದ್ದವು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಒಕ್ಕೂಟವು ಒಗ್ಗಟ್ಟಿನಿಂದ ಹೊಸ ನಿಯಮವನ್ನು ಜಾರಿಗೆ ತರಲು ಬದ್ಧವಾಗಿದೆ.

ಸಭೆಯ ನಂತರ ಚಾಲಕರು ಕಾಲ್ನಡಿಗೆ ಮೂಲಕ ಎಸ್ಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಎಸ್ಪಿ ಹರಿರಾಮ್ ಶಂಕರ್ ಮಾತನಾಡಿ, ನಗರಸಭೆ, ಆರ್.ಟಿ.ಒ ಹಾಗೂ ಪೊಲೀಸ್ ಇಲಾಖೆ ಸೇರಿ ನಗರದಲ್ಲಿನ ಆಟೋ ನಿಲ್ದಾಣಗಳ ಸ್ಥಿತಿಗತಿಯ ಬಗ್ಗೆ ಸರ್ವೇ ನಡೆಸಲಾಗಿದೆ. ಹೊಸ ನಿಲ್ದಾಣ ನಿರ್ಮಾಣದ ಪ್ರಸ್ತಾವನೆ ಜಿಲ್ಲಾಡಳಿತದ ಮುಂದೆ ಇಡಲಾಗಿದ್ದು, ಶೀಘ್ರದಲ್ಲೇ ಅವುಗಳ ಅನುಮೋದನೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶೃಂಗೇರಿ ಮಠದ ಬಳಿ ಅನುಮಾನಾಸ್ಪದ ಜೋಡಿ: ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಹಸ್ತಾಂತರ

ಈ ಘಟನೆಗೆ ಪೊಲೀಸರು ತಕ್ಷಣ ಪ್ರತಿಕ್ರಿಯಿಸಿ, ಜೋಡಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ತನಿಖೆ ನಡೆಸುತ್ತಿದ್ದಾರೆ

ಜಿಲ್ಲೆಯ ಸಂಸದರು ಮತ್ತು ಶಾಸಕರೊಂದಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಮಾಲೋಚನೆ : ಜೂ.16ರಂದು ಜವಾಬ್ದಾರಿ ಸ್ವೀಕಾರ

ಜೂ.16ರಂದು ಬೆಳಿಗ್ಗೆ 11.30ಕ್ಕೆ ನೂತನ ಜಿಲ್ಲಾಧ್ಯಕ್ಷರ ಜವಾಬ್ದಾರಿ ಸ್ವೀಕಾರ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ

ನೀಟ್-2025ರ ಫಲಿತಾಂಶ ಜ್ಞಾನಸುಧಾದ 20 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಜನರಲ್ ಮೆರಿಟ್ ನಲ್ಲಿ ಹತ್ತು ಸಾವಿರದೊಳಗಿನ ರ‍್ಯಾಂಕ್

ವಿದ್ಯಾರ್ಥಿಗಳ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಪರಿಶ್ರಮವನ್ನು ಶ್ಲಾಘಸಿದ್ದಾರೆ.

ಹೋಂ ಮಿನಿಸ್ಟರ್ ಪರಮೇಶ್ವರ್ ಕೋಟ ಪೊಲೀಸ್ ಠಾಣೆಗೆ ಸರ್ಪ್ರೈಸ್ ವಿಸಿಟ್

ಗೃಹ ಸಚಿವರು ಠಾಣೆಯ ರಿಜಿಸ್ಟರ್ ಪುಸ್ತಕವನ್ನು ಪರಿಶೀಲಿಸಿ, ಅಲ್ಲಿ ದಾಖಲಾಗಿದ್ದ ಕೆಲವು ದೂರುಗಳ ಬಗ್ಗೆ ವಿವರ ತಿಳಿದುಕೊಂಡರು