spot_img

ಮುಂಬೈ ವಿಮಾನ ನಿಲ್ದಾಣದಲ್ಲಿ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

Date:

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಘಟನೆ ಬೆಚ್ಚಿಬೀಳಿಸುವಂತಾಗಿದೆ.

ಮಂಗಳವಾರ (ಮಾರ್ಚ್ 26) ರಾತ್ರಿ 1.30ರ ಸುಮಾರಿಗೆ ವಿಮಾನ ನಿಲ್ದಾಣದ ಸಿಬ್ಬಂದಿ ಶವ ಪತ್ತೆಯಾದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಸಹರ್ ಪೊಲೀಸ್ ಅಧಿಕಾರಿಗಳು, ಶಿಶುವಿನ ದೇಹವನ್ನು ಪರಿಶೀಲಿಸಿ, ಹೆಚ್ಚಿನ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ದುರ್ಘಟನೆ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಮಗುವನ್ನು ತ್ಯಜಿಸಲು ಕಾರಣರಾದವರ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚಿನ್ನಯ್ಯ ತಂದ ‘ಬುರುಡೆ’ಯ ರಹಸ್ಯ ಬಯಲು: ವಿಠಲಗೌಡರ ಮೇಲೆ ಎಸ್‌ಐಟಿ ಕಣ್ಣು, ಬಂಧನ ಖಚಿತವೇ?

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ.

ಐಟಿಆರ್ ಸಲ್ಲಿಕೆ ಗಡುವಿನತ್ತ ತೀವ್ರ ಕುತೂಹಲ: ಸರ್ಕಾರದಿಂದ ಮತ್ತಷ್ಟು ವಿಸ್ತರಣೆ ನಿರೀಕ್ಷೆ?

ಭಾರತದಾದ್ಯಂತ ತೆರಿಗೆ ಪಾವತಿದಾರರಿಗೆ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವ ಸಮಯ ಹತ್ತಿರವಾಗುತ್ತಿದೆ.

ಹೆಬ್ರಿಯಲ್ಲಿ ಅದ್ಧೂರಿ ಶಾರದೋತ್ಸವಕ್ಕೆ ಮುಹೂರ್ತ: ಆಮಂತ್ರಣ ಪತ್ರಿಕೆ ಬಿಡುಗಡೆ

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅದ್ದೂರಿಯಾಗಿ ಆಯೋಜಿಸಿರುವ 6ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಬಿಡುಗಡೆ ಮಾಡಿದರು.

ಜಿಎಸ್‌ಟಿ ಇಳಿಕೆ ಪರಿಣಾಮ: ಮಹೀಂದ್ರ, ಟಾಟಾ, ಟೊಯೊಟಾ ಕಾರುಗಳ ಬೆಲೆಯಲ್ಲಿ ಭಾರಿ ಕಡಿತ

ಜಿಎಸ್‌ಟಿ ಪರಿಷ್ಕರಣೆಯ ನಂತರ, ಮಹೀಂದ್ರ, ಟಾಟಾ, ಟೊಯೊಟ ಮತ್ತು ರೆನೊ ಸೇರಿದಂತೆ ಹಲವಾರು ಪ್ರಮುಖ ವಾಹನ ತಯಾರಕ ಕಂಪನಿಗಳು ತಮ್ಮ ಕಾರುಗಳ ಬೆಲೆಯನ್ನು ಗಮನಾರ್ಹವಾಗಿ ಇಳಿಕೆ ಮಾಡಿವೆ.