spot_img

ಸುದ್ದಿ ವಾಹಿನಿಯ ಕ್ಯಾಮರಾ ಮ್ಯಾನ್ ಸಂದೀಪ್ ಪೂಜಾರಿ ನಿಧನ

Date:

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮತ್ತು ಈಟಿವಿ ಭಾರತ್‌ನ ಜಿಲ್ಲಾ ವರದಿಗಾರರಾದ ಸಂದೀಪ್ ಪೂಜಾರಿ (37) ಅವರು ಏಪ್ರಿಲ್ 20ರಂದು ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.

ಮಾರ್ಚ್ 29ರಂದು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ತೀವ್ರವಾಗಿ ಗಾಯಗೊಂಡಿದ್ದು, ಬೆನ್ನು ಹುರಿಗೆ (ಸ್ಪೈನಲ್ ಕಾಡ್) ಗಂಭೀರ ಪೆಟ್ಟು ಬಿದ್ದಿತ್ತು. ನಿರಂತರ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಉಡುಪಿ ಜಿಲ್ಲೆಯ ಶಿರ್ವ ನಿವಾಸಿಯಾದ ಸಂದೀಪ್, ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಪಬ್ಲಿಕ್ ಟಿವಿ, ಸ್ಪಂದನಾ ನ್ಯೂಸ್‌, ಬಿ ಟಿವಿ ವಾಹಿನಿಗಳಲ್ಲಿ ಕ್ಯಾಮೆರಮೆನ್ ಹಾಗೂ ವರದಿಗಾರರಾಗಿ ಕೆಲಸ ಮಾಡಿದ ಅವರು, ಇತ್ತೀಚೆಗೆ ಈಟಿವಿ ಭಾರತ್‌ನಲ್ಲಿ ವರದಿಗಾರರಾಗಿದ್ದರು. ಅಲ್ಲದೇ, ಸಿ4ಯು ಮತ್ತು ಪ್ರೈಮ್ ಕಾರ್ಲ ಲೈವ್ ವಾಹಿನಿಗಳಲ್ಲಿ ತಂತ್ರಜ್ಞರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ತಂದೆ-ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿರುವ ಅವರು ಮಾಧ್ಯಮ ಕ್ಷೇತ್ರದಲ್ಲಿ ಶ್ರಮಿಸಿ ಹೆಸರು ಮಾಡಿದ್ದರು. ಅವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.