ನಿಟ್ಟೆ ಇನ್‌ಕ್ರಿಡಿಯಾ-2026 ತಾಂತ್ರಿಕ-ಸಾಂಸ್ಕೃತಿಕ ಹಬ್ಬ ಉದ್ಘಾಟನೆ

Date:

spot_img

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ (NMAMIT) ಪ್ರತಿವರ್ಷದಂತೆ ಈ ಬಾರಿಯೂ ರಾಷ್ಟ್ರೀಯ ಮಟ್ಟದ ಬೃಹತ್ ತಾಂತ್ರಿಕ ಮತ್ತು ಸಾಂಸ್ಕೃತಿಕ ಮಹೋತ್ಸವ ‘ಇನ್‌ಕ್ರಿಡಿಯಾ-2026’ ಕ್ಕೆ ಮಾಚ್ ೫ ರಂದು ಸಂಜೆ ಅದ್ದೂರಿ ಚಾಲನೆ ನೀಡಲಾಯಿತು.

ಉದ್ಘಾಟನೆ ಮತ್ತು ಇತಿಹಾಸ: ನಿಟ್ಟೆಯ ಬಿಸಿ ಆಳ್ವ ಕ್ರೀಡಾ ಸಂಕೀರ್ಣದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಿಟ್ಟೆ ಸಮೂಹ ಸಂಸ್ಥೆಗಳ ಹಿತೈಷಿ ಹಾಗೂ ಉದ್ಯಮಿ ಅಶೋಕ್ ಅಡ್ಯಂತಾಯ ಅವರು ದೀಪ ಬೆಳಗಿಸುವ ಮೂಲಕ ಉತ್ಸವವನ್ನು ಉದ್ಘಾಟಿಸಿದರು. ಈ ಹಿಂದೆ ತಾಂತ್ರಿಕ ಹಬ್ಬವನ್ನು ‘ಟೆಕ್ನಿದರ್ಶನ’ ಮತ್ತು ಸಾಂಸ್ಕೃತಿಕ ಹಬ್ಬವನ್ನು ‘ಆನಂದೋತ್ಸವ’ ಎಂದು ಪ್ರತ್ಯೇಕವಾಗಿ ಆಚರಿಸಲಾಗುತ್ತಿತ್ತು. ಆದರೆ, ಕಳೆದ ೮ ವರ್ಷಗಳಿಂದ ದೇಶದ ವಿವಿಧ ತಾಂತ್ರಿಕ ಕಾಲೇಜುಗಳ ವಿದ್ಯಾರ್ಥಿ ಪ್ರತಿಭೆಗಳನ್ನು ಒಂದೇ ವೇದಿಕೆಗೆ ತರುವ ಉದ್ದೇಶದಿಂದ ಇವೆರಡನ್ನೂ ವಿಲೀನಗೊಳಿಸಿ ‘ಇನ್‌ಕ್ರಿಡಿಯಾ’ ಹೆಸರಿನಲ್ಲಿ ಆಚರಿಸಲಾಗುತ್ತಿದೆ.

ಕಾರ್ಯಕ್ರಮದ ವಿವರಗಳು: ಮಾರ್ಚ್ ೫ ರಿಂದ ೮ ರವರೆಗೆ ನಡೆಯಲಿರುವ ಈ ಸಂಭ್ರಮದಲ್ಲಿ ಒಟ್ಟು ೪೦ಕ್ಕೂ ಹೆಚ್ಚು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅವುಗಳ ವಿವರ ಇಲ್ಲಿದೆ:

  • ತಾಂತ್ರಿಕ ಸ್ಪರ್ಧೆಗಳು: ರೋಬೋವಾರ್ಸ್‌, ರೋಬೋ ರೇಸ್‌, ಕೋಡ್ ರಿಲೇ, ಎಸ್ಕೇಪ್ ರೂಂ, ಶೆರ್‌ಲಾಕ್-ಡ್‌, ಲಾಜಿಸೈಡ್‌ ಸೇರಿದಂತೆ ಹತ್ತು ಹಲವು ಸ್ಪರ್ಧೆಗಳು ತಾಂತ್ರಿಕ ಕೌಶಲಕ್ಕೆ ಒರೆಹಚ್ಚಲಿವೆ.
  • ಸಾಂಸ್ಕೃತಿಕ ಸ್ಪರ್ಧೆಗಳು: ಬ್ಯಾಟಲ್ ಆಫ್ ಬ್ಯಾಂಡ್ಸ್‌, ಕೊಟ್ಯೂರ್ (ಫ್ಯಾಶನ್ ಶೋ)‌, ನವರಸ, ಸ್ಟಾಂಪ್ ದಾಟ್‌ ಹಾಗೂ ತುಳು ಸಂಸ್ಕೃತಿಯನ್ನು ಬಿಂಬಿಸುವ ‘ತುಳು ತುಲಿಪು’ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಿವೆ.
  • ಇತರ ಆಕರ್ಷಣೆಗಳು: ಆಟೋ-ಎಕ್ಸ್ಪೋ (ವಾಹನ ಪ್ರದರ್ಶನ), ವೈವಿಧ್ಯಮಯ ಆಹಾರ ಮಳಿಗೆಗಳು, ವಿಶೇಷ ಪ್ರದರ್ಶನಗಳು ಹಾಗೂ ವಿದ್ಯಾರ್ಥಿಗಳ ನೆಚ್ಚಿನ ‘ಪ್ರೋ-ನೈಟ್‌’ (Pro-Night) ಸಂಗೀತ ಸಂಜೆಗಳು ನಡೆಯಲಿವೆ.

ಉದ್ಘಾಟನಾ ದಿನದ ವಿಶೇಷ: ಉದ್ಘಾಟನಾ ಸಮಾರಂಭದ ನಂತರ ಸುರಮಣಿ ಮಹಾಲಕ್ಷ್ಮೀ ಶೆಣೈ ಮತ್ತು ತಂಡದವರಿಂದ ‘ವಿನಯ ನಮನ’ ಎಂಬ ಸಂಗೀತ ರಸಸಂಜೆ ಕಾರ್ಯಕ್ರಮ ಜರುಗಿತು. ಅಲ್ಲದೆ, ಕಾಲೇಜಿನ ವಿದ್ಯಾರ್ಥಿ ಕಲಾವಿದರಿಂದ ‘ದಶಾವತಾರ’ ನೃತ್ಯರೂಪಕವು ಪ್ರೇಕ್ಷಕರ ಮನಗೆದ್ದಿತು.

ದೇಶದ ವಿವಿಧ ಭಾಗಗಳಿಂದ ಸಾವಿರಾರು ವಿದ್ಯಾರ್ಥಿಗಳು ಈ ಮಹೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಹೆಚ್ಚಿನ ಮಾಹಿತಿಗಾಗಿ www.incridea.in ಅಥವಾ ಸಾಮಾಜಿಕ ಜಾಲತಾಣಗಳನ್ನು ಸಂಪರ್ಕಿಸಲು ಪ್ರಾಂಶುಪಾಲರು ಕೋರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮಿತಾಬ್ ಬಚ್ಚನ್ ಆರೋಗ್ಯ ಕುರಿತ ವದಂತಿಗಳಿಗೆ ತೆರೆ! ಬಿಗ್ ಬಿ ಸ್ಪಷ್ಟನೆ

ಅಮಿತಾಬ್ ಬಚ್ಚನ್ ಅವರ ಆರೋಗ್ಯದ ಕುರಿತು ಹಬ್ಬಿದ್ದ ಶಸ್ತ್ರಚಿಕಿತ್ಸೆಯ ವದಂತಿಗಳಿಗೆ ನಟ ಸ್ವತಃ ತೆರೆ ಎಳೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಾರುತಿ ಕಾರುಗಳ ಬೆಲೆ 30,000 ರೂ. ಏರಿಕೆ: ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಗರಿಷ್ಠ 30,000 ರೂ.ವರೆಗೆ ಏರಿಕೆಯಾಗಲಿದೆ. ಬೆಲೆ ಏರಿಕೆಗೆ ಕಾರಣವೇನು? ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.