
ನಿಟ್ಟೆ: “ಇಂದಿನ ತೀವ್ರ ಪೈಪೋಟಿ ಮತ್ತು ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ಹೊಸತನವನ್ನು ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಇಂತಹ ಸಾಂಸ್ಕೃತಿಕ ಸ್ಪರ್ಧೆಗಳು ಯುವಜನತೆಯ ಸೃಜನಶೀಲ ಯೋಚನೆಗಳಿಗೆ ವೇದಿಕೆಯಾಗಲಿವೆ,” ಎಂದು ಕಾರ್ಕಳ ಕ್ಷೇತ್ರದ ಶಾಸಕ ಶ್ರೀ ವಿ. ಸುನಿಲ್ ಕುಮಾರ್ ಅವರು ಅಭಿಪ್ರಾಯಪಟ್ಟರು.
ನಿಟ್ಟೆಯ ಡಾ. ಎನ್.ಎಸ್.ಎ.ಎಮ್ (NSAM) ಪ್ರಥಮ ದರ್ಜೆ ಕಾಲೇಜಿನ ಸದಾನಂದ ಸಭಾಂಗಣದಲ್ಲಿ ಫೆಬ್ರವರಿ 25ರ ಬುಧವಾರದಂದು ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ರಾಗ್ನಾರಾಕ್ ಎನ್ ಇಗ್ಮಾ 2026’ ಅನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಭಾರತದ ಯುವಶಕ್ತಿಯು ದೇಶದ ಅಭಿವೃದ್ಧಿಯ ಚಾಲಕಶಕ್ತಿಯಾಗಬೇಕು ಎಂದು ಅವರು ಇದೇ ವೇಳೆ ಕರೆ ನೀಡಿದರು.
ಕೌಶಲ್ಯಗಳೇ ಯಶಸ್ಸಿನ ಗುಟ್ಟು: ಸುಮಂತ್ ಪಡಿವಾಳ್
ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ್ದ ವಿಫ್ಲಿ ಇಂಡಿಯಾ ಕಾರ್ಯನಿರ್ವಾಹಕ ಮುಖ್ಯಸ್ಥ ಸುಮಂತ್ ಪಡಿವಾಳ್ ಮಾತನಾಡಿ, “ಆಧುನಿಕ ಕಂಪನಿಗಳು ಕೇವಲ ಅಂಕಗಳನ್ನು ಮಾತ್ರವಲ್ಲದೆ, ತಂಡವಾಗಿ ಕೆಲಸ ಮಾಡುವ ಕೌಶಲ್ಯ, ಸಂವಹನ ಕಲೆ ಮತ್ತು ಕುತೂಹಲವಿರುವ ಅಭ್ಯರ್ಥಿಗಳನ್ನು ನಿರೀಕ್ಷಿಸುತ್ತವೆ. ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಬಳಸಿಕೊಂಡು ತಮ್ಮ ವೃತ್ತಿಪರ ಗುಣಗಳನ್ನು ಬೆಳೆಸಿಕೊಳ್ಳಬೇಕು,” ಎಂದರು.
ಸಂದರ್ಭೋಚಿತ ಅವಕಾಶಗಳ ಬಳಕೆ
ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಫ್ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಯೋಗಿಶ್ ಹೆಗ್ಡೆ ಮಾತನಾಡಿ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳೊಳಗಿನ ವಿಭಿನ್ನ ಸಾಮರ್ಥ್ಯವನ್ನು ಗುರುತಿಸಲು ಇರುವ ಅತ್ಯುತ್ತಮ ಅವಕಾಶಗಳು ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಕುಮಾರಿ ಬಿ.ಕೆ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿ ಪರಿಷತ್ ಸಂಯೋಜಕಿ ಶ್ರೀಮತಿ ರೇಖಾ ವಂದಿಸಿದರು. ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿ ಶ್ರೀವತ್ಸ ವಿ. ಸ್ಪರ್ಧೆಯ ವಿವರಗಳನ್ನು ನೀಡಿದರು. ವೇದಿಕೆಯಲ್ಲಿ ಸಂಯೋಜಕಿ ಶ್ರೀಮತಿ ಮಾಲಿನಿ ಜೆ. ರಾವ್ ಮತ್ತು ಐಕ್ಯೂಎಸಿ ಸಂಯೋಜಕ ಪ್ರಕಾಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಭಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.



































