spot_img

ಮುಷ್ಕರದ ನಡುವೆಯೂ ಎಲ್‌ಪಿಜಿ ಸರಬರಾಜಿನಲ್ಲಿ ವ್ಯತ್ಯಯವಿಲ್ಲ! – ತೈಲ ಕಂಪನಿಗಳ ಭರವಸೆ

Date:

spot_img

ಚೆನ್ನೈ: ಬೃಹತ್ ಎಲ್‌ಪಿಜಿ ಸಾರಿಗೆದಾರರ ಮುಷ್ಕರದ ನಡುವೆ, ಐಒಸಿಎಲ್, ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ ತಮ್ಮ ಗ್ರಾಹಕರಿಗೆ ನಿರಂತರ ಎಲ್‌ಪಿಜಿ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತಿರುವುದಾಗಿ ಭರವಸೆ ನೀಡಿವೆ. ತೈಲ ಕಂಪನಿಗಳು ಬಾಟ್ಲಿಂಗ್ ಪ್ಲಾಂಟ್‌ಗಳಲ್ಲಿ ಸಾಕಷ್ಟು ಸ್ಟಾಕ್ ಹೊಂದಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಸಾರ್ವಜನಿಕರಿಗೆ ಮನವಿ ಮಾಡಿದೆ.

ಮುಷ್ಕರದ ನಡುವೆಯೂ ನಿರಂತರ ಪೂರೈಕೆ!
ಸಾರಿಗೆ ಮಾಲೀಕರ ಪ್ರಮುಖ ಬೇಡಿಕೆಗಳ ಬಗ್ಗೆ ಒಎಂಸಿಗಳು ಸಭೆ ನಡೆಸಿ, ಸೂಕ್ತ ಸ್ಪಷ್ಟೀಕರಣ ನೀಡಿದರೂ, ಸಾರಿಗೆದಾರರ ಒಂದು ವಿಭಾಗವು ಮುಷ್ಕರಕ್ಕೆ ಕರೆ ನೀಡಿದೆ. ಪ್ರಾಥಮಿಕವಾಗಿ ಸುರಕ್ಷತಾ ಉಲ್ಲಂಘನೆಗಳು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ದಂಡದ ಷರತ್ತುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದೆ.

ಸುರಕ್ಷತೆಗೆ ಪ್ರಥಮ ಆದ್ಯತೆ!
ಎಲ್‌ಪಿಜಿ ಸಾಗಣೆಯ ನಿರ್ವಹಣೆ, ಪೆಸೊ, ಪಿಎನ್‌ಜಿಆರ್‌ಬಿ ಮತ್ತು ಒಐಎಸ್‌ಡಿ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದ್ದು, ಒಟ್ಟಾರೆಯಾಗಿ ಇದು ಪಾಲುದಾರರು, ಟ್ಯಾಂಕರ್ ಮಾಲೀಕರು, ಚಾಲಕರು ಮತ್ತು ಗ್ರಾಹಕರ ಸುರಕ್ಷತೆಗಾಗಿ ಜಾರಿಗೆ ತರಲಾಗಿದೆ.

ಸಾರ್ವಜನಿಕರಿಗೆ ಆತಂಕ ಬೇಡ !
ತೈಲ ಕಂಪನಿಗಳು ಪ್ರಮುಖ ಸಾರಿಗೆದಾರರೊಂದಿಗೆ ಮಾತುಕತೆ ಮುಂದುವರಿಸಿಕೊಂಡು ಸಮಸ್ಯೆ ಇತ್ಯರ್ಥಕ್ಕೆ ತ್ವರಿತ ಕ್ರಮ ತೆಗೆದುಕೊಳ್ಳುತ್ತಿವೆ. “ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದು, ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ಇಂಡಿಯನ್ ಆಯಿಲ್ ದಕ್ಷಿಣ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

ಈ ಮಾಹಿತಿ ಶಿಬಿರದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಭಾಗವಹಿಸಲಿದ್ದು, ಉದ್ಯೋಗ ಮೇಳದ ಸಮಗ್ರ ವಿವರಗಳನ್ನು ನೀಡಲಿದ್ದಾರೆ.

ಮಂಗಳೂರು: ಔಷಧಿಯೆಂದು ಇಲಿಪಾಷಾಣ ಸೇವಿಸಿದ್ದ ಹೆಡ್ ಕಾನ್ಸ್‌ಟೇಬಲ್ ದುರ್ಮರಣ!

ಔಷಧಿಯೆಂದು ತಪ್ಪಾಗಿ ಭಾವಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಧರ್ಮಸ್ಥಳ : ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಬಳಕೆಯಾದರೂ ಸಿಗದ ಕಳೇಬರ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ,ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಯಂತ್ರವನ್ನು ಬಳಸಿದರೂ ಇದುವರೆಗೆ ಕಳೇಬರ ಪತ್ತೆಯಾಗಿಲ್ಲ.

ಮರವಂತೆಯಲ್ಲಿ ಮಳೆಗಾಲದಲ್ಲೂ ಅಪಾಯಕಾರಿ ಬೋಟಿಂಗ್: ಪ್ರವಾಸಿಗರ ಪ್ರಾಣದೊಂದಿಗೆ ಚೆಲ್ಲಾಟ!

ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.