spot_img

ಧರ್ಮಸ್ಥಳ ಬಗ್ಗೆ ಆಗಲಿ, ಧರ್ಮಾಧಿಕಾರಿಯವರ ವಿರುದ್ಧ ಆಗಲಿ ಯಾರೂ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Date:

spot_img
spot_img
ramalinga reddy11

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಸ್‌ಐಟಿ ತನಿಖೆಯಲ್ಲಿ ಯಾವುದೇ ಸಾಕ್ಷ್ಯ ದೊರಕಿಲ್ಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ‘ಕ್ಲಾರಿಟಿ’ ಬೇಕು ಎಂಬ ಕಾರಣಕ್ಕೆ ಎಸ್‌ಐಟಿ ರಚನೆ ಮಾಡಲಾಗಿದೆ. ಎಸ್‌ಐಟಿ ತಂಡವು ಈವರೆಗೆ 14ರಿಂದ 15 ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದರೂ ಯಾವುದೇ ಸಾಕ್ಷ್ಯ ದೊರಕಿಲ್ಲ ಎಂದು ಹೇಳಿದರು. ಈ ಕುರಿತು ಸದನದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಾತನಾಡಲಿದ್ದಾರೆ ಎಂದರು.

ಬಿಜೆಪಿಯವರ ವಿರುದ್ಧ ವಾಗ್ದಾಳಿ

ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು. “ಬಿಜೆಪಿಯವರಿಗಿಂತ ಕಾಂಗ್ರೆಸ್‌ನಲ್ಲಿ ಧರ್ಮಸ್ಥಳದ ಭಕ್ತರಿದ್ದಾರೆ” ಎಂದು ಹೇಳಿದ ಅವರು, ಸೌಜನ್ಯ ಪ್ರಕರಣಕ್ಕೂ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಯೂಟ್ಯೂಬರ್‌ಗಳು ಅಪಪ್ರಚಾರ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ರಾಮಲಿಂಗಾರೆಡ್ಡಿ ಆಗ್ರಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರ ಜೊತೆ ರಾಸಲೀಲೆ ವಿಡಿಯೋ; ಗಂಡನ ಕರ್ಮಕಾಂಡ ನೋಡಿ ದಂಗಾದ ಹೆಂಡತಿ

ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ಇಟ್ಟುಕೊಂಡು ರಾಸಲೀಲೆ ನಡೆಸುತ್ತಿದ್ದ ಪತಿಯ ಕರ್ಮಕಾಂಡ ನೋಡಿ ಪತ್ನಿ ಶಾಕ್ ಆಗಿರುವ ಘಟನೆ ವರದಿಯಾಗಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹೊಸ ಕ್ರಾಂತಿ: ಇನ್ನು ಮುಂದೆ 1ನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ

: ರಾಜ್ಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಇನ್ನು ಮುಂದೆ ಒಂದನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಮುಂದಾಗಿದೆ.

ಬೆಂಗಳೂರಿನ ನಡುರಸ್ತೆಯಲ್ಲೇ ಖಾಸಗಿ ಬಸ್ಸಿನಲ್ಲಿ ಬೆಂಕಿ; ಮಹಿಳೆಯ ಸಮಯಪ್ರಜ್ಞೆಯಿಂದ 36 ಪ್ರಯಾಣಿಕರು ಪಾರು!

ನಗರದಿಂದ ರಾಯಚೂರಿಗೆ ಹೊರಟಿದ್ದ ಖಾಸಗಿ ಬಸ್‌ವೊಂದು ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ್ಲದಿನ್ನೆಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ತಡರಾತ್ರಿ 2:30ರ ಸುಮಾರಿಗೆ ಸಂಭವಿಸಿದೆ.

ಉಡುಪಿಯ ಅಂಬಲಪಾಡಿಯಲ್ಲಿ ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ!

ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ಯುವ ಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.