spot_img

‘ಈ ಐದು ವರ್ಷ ಅಲ್ಲ, ಮತ್ತೆ ಐದು ವರ್ಷವೂ ನಾನೇ ಸಿಎಂ’ – ಸಿದ್ದರಾಮಯ್ಯ

Date:

ಬೆಂಗಳೂರು: “ಮುಂದಿನ ಐದು ವರ್ಷವೂ ನಾನು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಮತ್ತೆ ಅದಾದ ಬಳಿಕವೂ ನಾನೇ ಸಿಎಂ ಆಗಿರುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲೇ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಗ್ಯಾರಂಟಿ ಯೋಜನೆ ಅನುಷ್ಠಾನದ ಬಗ್ಗೆ ಪ್ರಶ್ನಿಸುತ್ತಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು, “ಹೇ… ಆಶೋಕ ಬರೆದುಕೊ, ನಾನೇ ಪರ್ಮನೆಂಟು” ಎಂದು ಉತ್ತರಿಸಿದ್ದರು.

ಸಿದ್ದರಾಮಯ್ಯ ಅವರ ಈ ಮಾತುಗಳಿಗೆ ಪ್ರತಿಯಾಗಿ ಆರ್. ಅಶೋಕ್ ಅವರು, “ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸಲಿ ಎಂದು ನಾವು ಬಯಸುತ್ತೇವೆ” ಎಂದು ಹಾರೈಸಿದರು. ಈ ಮಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಹೌದು, ಈ ಐದು ವರ್ಷ ಮಾತ್ರವಲ್ಲ, ಮತ್ತೆ ಮುಂದಿನ ಐದು ವರ್ಷವೂ ನಾವು ಅಧಿಕಾರದಲ್ಲೇ ಇರುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಶಾಸಕರು “ಆಗಲೂ ನೀವೇ ಸಿಎಂ ಆಗಿರುತ್ತೀರಾ?” ಎಂದು ಪ್ರಶ್ನಿಸಿದ್ದಾಗ, “ಹೌದು, ನಾನೇ ಇರುತ್ತೇನೆ” ಎಂದು ಸ್ಪಷ್ಟವಾಗಿ ಹೇಳಿದರು.ಸಿದ್ದರಾಮಯ್ಯ ಅವರ ಈ ಹೇಳಿಕೆ ಬಿಜೆಪಿ ಶಾಸಕರ ಪ್ರಶ್ನೆಗೆ ತೀಕ್ಷ್ಣ ಉತ್ತರ ನೀಡಿದಂತಾಗಿದ್ದು, ಸಿಎಂ ಸ್ಥಾನಕ್ಕೆ ಆಕಾಂಕ್ಷೆ ಹೊಂದಿರುವ ಕಾಂಗ್ರೆಸ್ ನಾಯಕರಲ್ಲೂ ಹೊಸ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ