ಉಡುಪಿಯಲ್ಲಿ ಗರುಡ ಗ್ಯಾಂಗ್‌ನ ಕುಖ್ಯಾತ ಕ್ರಿಮಿನಲ್ ಸೆರೆ: ಸಿನಿಮೀಯ ರೀತಿಯಲ್ಲಿ ಪೊಲೀಸ್ ಕಾರ್ಯಾಚರಣೆ!

Date:

spot_img

ಉಡುಪಿ: ಮಣಿಪಾಲದಲ್ಲಿ ಗರುಡ ಗ್ಯಾಂಗ್‌ನ ಕುಖ್ಯಾತ ಸದಸ್ಯನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲು ಬಂದಿದ್ದ ನೆಲಮಂಗಲ ಪೊಲೀಸರನ್ನು ನೋಡಿ ಆರೋಪಿಯು ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆದರೆ, ಜಂಟಿ ಕಾರ್ಯಾಚರಣೆಯ ಮೂಲಕ ಮಣಿಪಾಲ ಪೊಲೀಸರು ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಮಣಿಪಾಲದ ಮಣ್ಣಪಳ್ಳದ ಬಳಿ ನಡೆದ ಈ ಚೇಸ್ ಚಿತ್ರಕಥೆಗೂ ಸೆಡ್ಡು ಹೊಡೆಯುವಂತೆ ನಡೆದಿದ್ದು, ಪರಾರಿಯಾಗಲು ಯತ್ನಿಸಿದ ಆರೋಪಿಯು ನಾಲ್ಕು ಕಾರುಗಳು ಮತ್ತು ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಆತಂಕ ಸೃಷ್ಟಿಸಿದ್ದ. ಈ ಸಂದರ್ಭದಲ್ಲಿ ಮಣಿಪಾಲ ಪೊಲೀಸ್ ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹಿಂಬಾಲಿಸಿ ಬಂಧಿಸಿದರು. ಆರೋಪಿಯು ಇಸಾಕ್ ಎಂಬಾತನಾಗಿದ್ದು, ಗರುಡ ಗ್ಯಾಂಗ್‌ನ ಪ್ರಮುಖ ಸದಸ್ಯನಾಗಿದ್ದಾನೆ.

ಈ ಘಟನೆಯ ವೇಳೆ ಆರೋಪಿಯ ಜೊತೆ ಕಾರಿನಲ್ಲಿ ಒಬ್ಬ ಯುವತಿಯೂ ಪತ್ತೆಯಾಗಿದ್ದು, ಈಕೆಯ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇಸಾಕ್ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದರಿಂದ ಈತನ ವಿಚಾರಣೆಯನ್ನು ಮಣಿಪಾಲ ಮತ್ತು ನೆಲಮಂಗಲ ಪೊಲೀಸರು ಜಂಟಿಯಾಗಿ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ