ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುವ ವೇದಿಕೆ ಎನ್. ಎಸ್. ಎಸ್ : ಕ್ರಿಯೇಟಿವ್ ಕಾಲೇಜಿನ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ಅತಿಥಿಗಳ ಸಂದೇಶ

Date:

spot_img

ಕಾರ್ಕಳ : ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು, ಕಾರ್ಕಳದಲ್ಲಿ 07 ಅಕ್ಟೋಬರ್ 2025 ರಂದು ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಮಾರುತಿ, ಜಿಲ್ಲಾ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಇವರು ಮಾತನಾಡಿ ‘ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ’ ಎಂದು ಕರೆ ನೀಡಿದರು.

ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ರವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ‘ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ಮುಖ್ಯ ಅತಿಥಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ರವರು ‘ಇಂದಿನ ಯುವಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಳ್ಳುವಲ್ಲಿ ಮುಂಚೂಣಿಯಲ್ಲಿರಬೇಕು. ಶಿಬಿರಗಳಲ್ಲಿ ಬೆಳೆದ ಅನುಭವವು ಭವಿಷ್ಯದ ನಾಯಕರಾಗಿ ರೂಪಗೊಳ್ಳಲು ಸಹಾಯಕವಾಗುತ್ತದೆ’ ಎಂದರು.

ಉದ್ಯಮಿ ವಿಜಯ್ ಶೆಟ್ಟಿ ರವರು ಮಾತನಾಡುತ್ತಾ ‘ವಿದ್ಯಾರ್ಥಿಗಳು ಕೇವಲ ಅಕಾಡೆಮಿಕ್ ಯಶಸ್ಸಿನಲ್ಲೇ ಅಲ್ಲ, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಾಗ ಮಾತ್ರ ನಿಜವಾದ ಶಿಕ್ಷಣದ ಅರ್ಥ ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಮತ್ತು ಇಸ್ರೋದ ನಿವೃತ್ತ ವಿಜ್ಞಾನಿ ಜನಾರ್ಧನ ಇಡ್ಯಾ ರವರು ‘ಜೀವನದಲ್ಲಿ ದೊಡ್ಡ ಸ್ಥಾನ ಪಡೆಯುವುದಕ್ಕಿಂತ, ಒಳ್ಳೆಯ ಮಾನವಿಯ ಮೌಲ್ಯಗಳನ್ನು ಅಳವಡಿಸಿಕೊಂಡು ನಾಗರಿಕನಾಗುವುದು ಮುಖ್ಯ. ಈ ಶಿಬಿರದ ಅನುಭವಗಳು ನಿಮ್ಮ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ’ ಎಂದರು.

ಶ್ರೀಮತಿ ನಂದಿನಿ ಶೆಟ್ಟಿ, ನ್ಯಾಯವಾದಿ ಮತ್ತು ನೋಟರಿ, ಕಾರ್ಕಳ ಇವರು ‘ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ವೇದಿಕೆ ಆಗಿದೆ’ ಎಂದು ಅಭಿಪ್ರಾಯಪಟ್ಟರು.

ಶ್ರೀವರ್ಮ ಅಜ್ರಿ, ವಿಶ್ರಾಂತ ಪ್ರಾಂಶುಪಾಲರು, ಎಂ.ಪಿ.ಎಂ ಕಾಲೇಜು, ಕಾರ್ಕಳ ಇವರು ‘ಯುವಕರು ರಾಷ್ಟ್ರದ ಶಕ್ತಿ. ಅವರಿಂದ ಪ್ರಾರಂಭವಾಗುವ ಪ್ರತಿಯೊಂದು ಸಣ್ಣ ಸೇವಾ ಚಟುವಟಿಕೆ ದೇಶದ ಅಭಿವೃದ್ಧಿಗೆ ದಾರಿ ತೋರಿಸಬಹುದು’ ಎಂದು ಹೇಳಿದರು.

ಶ್ರೀಮತಿ ಅನ್ನಪೂರ್ಣ ಕಾಮತ್, ಪ್ರಾಂಶುಪಾಲರು, ಸರಕಾರಿ ಪದವಿಪೂರ್ವ ಕಾಲೇಜು, ಕಾರ್ಕಳ ಇವರು ಎನ್.ಎಸ್.ಎಸ್ ಘಟಕದ ವತಿಯಿಂದ ನಡೆದ ಕಾರ್ಯವೈಖರಿಗಳನ್ನು ಶ್ಲಾಘಿಸಿ, ವಂದಿಸುತ್ತಾ ‘ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದ್ದು ಪ್ರಶಂಸನೀಯ. ಎನ್.ಎಸ್.ಎಸ್ ಕೇವಲ ಕಾರ್ಯಕ್ರಮವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠವಾಗಿದೆ’ ಎಂದರು.

ಪೌರ ಕಾರ್ಮಿಕರಿಗೆ ಸನ್ಮಾನ

ಸಮಾರೋಪ ಕಾರ್ಯಕ್ರಮದಲ್ಲಿ 25 ವರ್ಷಗಳಿಗಿಂತಲೂ ಸುದೀರ್ಘ ಅವಧಿಯಿಂದ ಪೌರಕಾರ್ಮಿಕರಾಗಿ ದುಡಿದು ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಸುಧೀರ್, ಪೂವಪ್ಪ, ರವಿ, ನಾಗೇಶ್, ಸಂಜೀವ ಇವರನ್ನು ಎನ್.ಎಸ್.ಎಸ್ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಅತಿಥಿಗಳ ಸಮ್ಮುಖದಲ್ಲಿ ಶಿಬಿರವಾಣಿಯನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳಾದ ಹಿತ ಮತ್ತು ಅಕ್ಷರ್ 7 ದಿನಗಳ ಎನ್.ಎಸ್.ಎಸ್ ಘಟಕದ ಅನುಭವಗಳ ಕುರಿತು ಮಾತನಾಡಿದರು. ಎಲ್ಲಾ ಅತಿಥಿಗಳನ್ನು ಕಾರ್ಯಕ್ರಮದ ಸವಿನೆನಪಿನ ದ್ಯೋತಕವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಬಿ, ವಿದ್ವಾನ್ ಗಣಪತಿ ಭಟ್, ಆದರ್ಶ ಎಂ.ಕೆ ರವರು ಗೌರವ ಉಪಸ್ಥಿತಿ ವಹಿಸಿದ್ದರು.

ಉಪನ್ಯಾಸಕರಾದ ಸಂತೋಷ್ ಸ್ವಾಗತಿಸಿ, ಶಿಬಿರಾಧಿಕಾರಿ ಉಮೇಶ್ ವಂದನಾರ್ಪಣೆಗೈದರು. ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ