ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: ಅನ್ಯಕೋಮಿನ ಯುವಕನ ಮನೆ ಮೇಲೆ ಕಲ್ಲು ತೂರಾಟ!

Date:

spot_img

ಬೆಳಗಾವಿ: ನರ್ಸಿಂಗ್ ಓದುತ್ತಿದ್ದ ಯುವತಿ ನಾಪತ್ತೆಯಾಗಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅನ್ಯಕೋಮಿನ ಯುವಕನ ಮನೆ ಮೇಲೆ ಕುಟುಂಬಸ್ಥರಿಂದ ಕಲ್ಲು ತೂರಾಟ ನಡೆದಿದೆ.

ಈ ಘಟನೆ ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಡೆದಿದ್ದು, ಫೆಬ್ರವರಿ 19 ರಂದು ರಾಧಿಕಾ ಮುಚ್ಚಂಡಿ ಎಂಬ ಯುವತಿ ನಾಪತ್ತೆಯಾಗಿದ್ದಳು. 15 ದಿನಗಳಾದರೂ ಹುಡುಕಾಟಕ್ಕೆ ಸಫಲತೆ ಸಿಗದ ಕಾರಣ, ಸದ್ರುದ್ದೀನ್ ಬೇಪಾರಿ ಯುವತಿಯನ್ನು ಅಪಹರಿಸಿದ್ದಾನೆ ಎಂಬ ಆರೋಪದ ಮೇರೆಗೆ ಆತನ ಮನೆ ಮೇಲೆ ಯುವತಿಯ ಕುಟುಂಬಸ್ಥರು ಕಲ್ಲು ತೂರಾಟ ನಡೆಸಿದ್ದಾರೆ.

ಗೃಹೋಪಕರಣಗಳು ನಾಶ, ಗಲಾಟೆ ಬಳಿಕ ಪರಾರಿಯಾದ ಕುಟುಂಬಸ್ಥರು
ಯುವತಿಯ ಸಂಬಂಧಿಕರು, ಯುವಕನ ಮನೆಯ ಬಾಗಿಲು, ಕಿಟಕಿ ಒಡೆದು, ಒಳ ನುಗ್ಗಿ ಗಲಾಟೆ ನಡೆಸಿದ್ದಾರೆ. ಅಲ್ಲದೇ, ಮನೆಯಲ್ಲಿದ್ದ ಸಾಮಾನು, ಪಾತ್ರೆಗಳು ಹಾನಿಗೊಳಗಾಗಿವೆ. ಗಲಾಟೆ ನಡೆದ ನಂತರ ಯುವತಿಯ ಸಂಬಂಧಿಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ಗೋಪುರ-ದರ್ಗಾಗೆ ಹಾನಿ, ಮತ್ತೊಂದು ದೂರು ದಾಖಲು
ಈ ಘಟನೆ ಬೆನ್ನಲ್ಲೇ 10ಕ್ಕೂ ಹೆಚ್ಚು ಯುವಕರ ತಂಡ ಗ್ರಾಮದ ಹೊರವಲಯದಲ್ಲಿ ಈದ್ಯಾದ ಗೋಪುರ, ದರ್ಗಾದ ಕಂಬಗಳಿಗೆ ಹಾನಿ ಮಾಡಿದೆ. ಇದು ಕಿಡಿಗೇಡಿಗಳ ಕೃತ್ಯ ಎಂದು ಗ್ರಾಮಸ್ಥರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.