ಸ್ಲಾಬ್ ಪರಿಶೀಲನೆ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯ ತಪ್ಪಿ ಬಿದ್ದು ಓರ್ವನ ಸಾವು, ಮಹಿಳೆ ಗಂಭೀರ

Date:

spot_img

ಉಡುಪಿ : ಉಡುಪಿಯ ಕೋರ್ಟ್ ಹಿಂಭಾಗದ ಲೋಕೋಪಯೋಗಿ ಇಲಾಖೆ (PWD) ಕಚೇರಿ ಬಳಿ ನಡೆದ ಕ್ರೇನ್ ದುರ್ಘಟನೆ ಒಂದರಲ್ಲಿ ಹಿರಿಯ ನಾಗರಿಕರು ಸಾವಿಗೀಡಾಗಿದ್ದು, ಜೊತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಫ್ರಾನ್ಸಿಸ್ ಫುರ್ಟಾಡೊ (65) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಶಾರದಾ (35) ಎಂಬ ಕೆಲಸದಾಕೆಯನ್ನು ತಕ್ಷಣವೇ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರಗಳ ಪ್ರಕಾರ, ಫ್ರಾನ್ಸಿಸ್ ಫುರ್ಟಾಡೊ ಅವರು ತಮ್ಮ ಸಹೋದರನ ಮನೆಯಲ್ಲಿ ಸ್ಲ್ಯಾಬ್ ಸೋರಿಕೆಯನ್ನು ಪರಿಶೀಲಿಸಲು ಕ್ರೇನ್ ಅನ್ನು ಕರೆಸಿದ್ದರು. ಅವರು ಕೆಲಸದಾಕೆ ಶಾರದಾ ಅವರೊಂದಿಗೆ ಕ್ರೇನ್ ತೊಟ್ಟಿಲಿಗೆ ಏರಿ ಮೇಲ್ಮಹಡಿಗೆ ಹೋಗಿದ್ದಾಗ, ತೊಟ್ಟಿಲಿನ ಬೆಲ್ಟ್ ತುಂಡಾಗಿ ವಾಲಿಕೊಂಡು , ಇಬ್ಬರೂ ಆಕಸ್ಮಿಕವಾಗಿ ನೆಲಕ್ಕುರುಳಿದರು.

ಘಟನೆ ಕುರಿತು ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ತಕ್ಷಣವೇ ತಮ್ಮ ಅಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದೊಯ್ದರು. ಆದರೆ ದಾರಿ ಮಧ್ಯೆ ಫ್ರಾನ್ಸಿಸ್ ಫುರ್ಟಾಡೊ ಅವರು ಮೃತರಾದರೆಂದು ವೈದ್ಯರು ದೃಢಪಡಿಸಿದರು. ಶಾರದಾ ಅವರ ಸ್ಥಿತಿಯು ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಘಟನೆಯ ನಂತರ ಕ್ರೇನ್ ಚಾಲಕ ಸ್ಥಳದಿಂದ ಪರಾರಿಯಾದ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಆತನು ಗಾಯಾಳುಗಳಿಗೆ ಸಹಾಯ ಮಾಡದೆ ಓಡಿ ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.