spot_img

ಒನ್ ಸೈಡ್ ಲವ್‌ನ ಸೇಡು: ದೇಶದ 12 ರಾಜ್ಯಗಳಿಗೆ ಹುಸಿ ಬಾಂಬ್ ಇಮೇಲ್ ಕಳುಹಿಸಿದ ಯುವತಿ ಬಂಧನ

Date:

spot_img

ಅಹಮದಾಬಾದ್ : ಸಹೋದ್ಯೋಗಿಯೊಬ್ಬ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ, ಆತನ ಮೇಲೆ ಸೇಡು ತೀರಿಸಿಕೊಳ್ಳಲು ದೇಶದ 12 ರಾಜ್ಯಗಳಿಗೆ ಹುಸಿ ಬಾಂಬ್ ಬೆದರಿಕೆಯ ಇಮೇಲ್ ಕಳುಹಿಸಿದ ಯುವತಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬಂಧಿತೆಯನ್ನು ಚೆನ್ನೈನ ಡೆಲಾಯ್ಟ್ ಕಂಪನಿಯಲ್ಲಿ ಹಿರಿಯ ಸಲಹೆಗಾರರಾಗಿರುವ ರೆನೆ ಜೋಶಿಲ್ಲಾ ಎಂದು ಗುರುತಿಸಲಾಗಿದೆ. ಆಕೆ ದೇಶದ ವಿವಿಧ ರಾಜ್ಯಗಳ ಆಸ್ಪತ್ರೆಗಳು, ಶಾಲೆಗಳು, ಕ್ರೀಡಾಂಗಣಗಳು ಸೇರಿದಂತೆ ಒಟ್ಟು 21 ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕರ್ನಾಟಕದ ಉಡುಪಿ ಜಿಲ್ಲೆಯ ಶಾಲೆಯೊಂದಕ್ಕೂ ಇಮೇಲ್ ಕಳುಹಿಸಿರುವುದು ಸ್ಪಷ್ಟವಾಗಿದೆ.

ಪ್ರೇಮದ ನಿರಾಕರಣೆಯಿಂದ ಮನನೊಂದ ರೆನೆ ಜೋಶಿಲ್ಲಾ :
ರೆನೆ ಜೋಶಿಲ್ಲಾ ತಮ್ಮ ಸಹೋದ್ಯೋಗಿ ದಿವಿಜ್ ಪ್ರಭಾಕರ್ ಅವರನ್ನು ಪ್ರೀತಿಸುತ್ತಿದ್ದರು.ಬೆಂಗಳೂರಿನಲ್ಲಿ ನಡೆದ ಕಾನ್ಫರೆನ್ಸ್‌ನಲ್ಲಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರೂ ದಿವಿಜ್ ಒಪ್ಪಿರಲಿಲ್ಲ. ಈ ನಿರಾಕರಣೆ ಆಕೆಯ ಮನಸ್ಸಿಗೆ ತೀವ್ರ ಆಘಾತವನ್ನುಂಟುಮಾಡಿತು. ಕೊನೆಗೆ, ದಿವಿಜ್ ಅವರ ಮದುವೆಯ ಸುದ್ದಿಯಿಂದ ಮತ್ತಷ್ಟು ಕೆರಳಿದ ರೆನೆ, ಅವರ ಹೆಸರನ್ನು ಬಳಸಿಕೊಂಡು ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲು ಮುಂದಾದದ್ದು ತನಿಖೆಯಿಂದ ತಿಳಿದು ಬಂದಿದೆ.

ಅಷ್ಟರಲ್ಲೇ ನಿಲ್ಲದೇ, ಇಬ್ಬರು ಮದುವೆಯಾಗಿರುವಂತೆ ಕೃತಕ ಫೋಟೋಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದರು, ಈ ಸಂಬಂಧ ದಿವಿಜ್ ರವರು ಸೈಬರ್ ಪೊಲೀಸರಿಗೆ ದೂರು ಸಲ್ಲಿಸಿದ್ದರು.

12 ರಾಜ್ಯಗಳಲ್ಲಿ ಬೆದರಿಕೆ:
ಫೆಬ್ರವರಿ ಮತ್ತು ಜೂನ್ 2025ರ ನಡುವೆ ರೆನೆ ಜೋಶಿಲ್ಲಾ ಅವರು ಗುಜರಾತ್, ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿದಂತೆ 12 ರಾಜ್ಯಗಳ ವಿವಿಧ ಸಂಸ್ಥೆಗಳಿಗೆ ದಿವಿಜ್ ಅವರ ಹೆಸರಿನಲ್ಲಿ ಬೆದರಿಕೆ ಇಮೇಲ್ ಕಳುಹಿಸಿದ್ದಾಗಿ ಪೊಲೀಸ್ ತನಿಖೆಯಲ್ಲಿ ಖಚಿತವಾಗಿದೆ. ಇದೀಗ ಸಂಬಂಧಿತ ಎಲ್ಲಾ ರಾಜ್ಯಗಳಿಗೆ ಮಾಹಿತಿ ಕಳುಹಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಾದ ಸಿಂಘಾಲ್ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಲಕ್ಷಾಂತರ ರೂ. ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಕಲಾಪದ ವೇಳೆ ಮೊಬೈಲ್‌ನಲ್ಲಿ ‘ರಮ್ಮಿ’ ಆಟದಲ್ಲಿ ಮುಳುಗಿದ ಕೃಷಿ ಸಚಿವ

ಮಹಾರಾಷ್ಟ್ರ ವಿಧಾನಸಭೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಓರ್ವ ಸಚಿವರು ತಮ್ಮ ಮೊಬೈಲ್ ಫೋನ್‌ನಲ್ಲಿ 'ರಮ್ಮಿ' ಗೇಮ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಆಧಾರ್ ಕಾರ್ಡ್‌ಗೆ ಅವಧಿ ಇದೆಯೇ? ನಿಮ್ಮ ಆಧಾರ್ ಸಿಂಧುತ್ವವನ್ನು ಪರಿಶೀಲಿಸುವುದು ಹೇಗೆ?

ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ನಂತಹ ಗುರುತಿನ ಚೀಟಿಗಳಿಗೆ ನಿರ್ದಿಷ್ಟ ಅವಧಿ ಇರುತ್ತದೆ. ಆದರೆ, ಬಹುತೇಕರಿಗೆ ಆಧಾರ್ ಕಾರ್ಡ್‌ಗೆ ಎಕ್ಸ್‌ಪೈರಿ ದಿನಾಂಕದ ಬಗ್ಗೆ ಗೊಂದಲವಿದೆ.

ಉಪರಾಷ್ಟ್ರಪತಿ ಧಂಖರ್: ಭಾರತದ ಸಾರ್ವಭೌಮತೆಗೆ ಸವಾಲಿಲ್ಲ, ವಿದೇಶಿ ಹಸ್ತಕ್ಷೇಪ ಅಸಾಧ್ಯ

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ