spot_img

‘ಆಪರೇಷನ್ ಸಿಂಧೂರ’ ಯಶಸ್ವಿ: ಕಂದಹಾರ್ ಹೈಜಾಕ್ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ಹತ

Date:

ಇಸ್ಲಾಮಾಬಾದ್: ಭಾರತದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮಹತ್ವದ ಯಶಸ್ಸು ಗಳಿಸಿದ್ದು, 1999ರ ಕಂದಹಾರ್ ವಿಮಾನ ಹೈಜಾಕ್‌ನ ಪ್ರಮುಖ ಸಂಚಾಲಕರಾಗಿದ್ದ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿದ್ದಾನೆ ಎಂಬುದನ್ನು ಭಾರತೀಯ ಗುಪ್ತಚರ ಇಲಾಖೆ ಅಧಿಕೃತವಾಗಿ ದೃಢಪಡಿಸಿದೆ.

ಪಾಕಿಸ್ತಾನದ ಬಹವಾಲ್ಪುರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯು ನಡೆಸಿದ ಏರ್‌ಸ್ಟ್ರೈಕ್‌ನಲ್ಲಿ ಜೈಶ್-ಎ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ ಸದಸ್ಯರನ್ನು ಗುರಿಯಾಗಿಸಲಾಗಿತ್ತು. ಈ ದಾಳಿಯಲ್ಲಿ ಮಸೂದ್ ಅಜರ್‌ನ ಸಹೋದರ ಅಬ್ದುಲ್ ರೌಫ್ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ಒಳಪಟ್ಟಿದ್ದ. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾನೆ ಎಂಬ ಮಾಹಿತಿ ಗುಪ್ತಚರ ಮೂಲಗಳಿಂದ ಲಭ್ಯವಾಗಿದೆ.

ಹಲವಾರು ಭಯೋತ್ಪಾದಕ ದಾಳಿಗಳ ರೂವಾರಿ
ಅಬ್ದುಲ್ ರೌಫ್ ಅಜರ್ ಕೇವಲ ಕಂದಹಾರ್ ಹೈಜಾಕ್ ಮಾತ್ರವಲ್ಲದೆ, ಉರಿ, ಪುಲ್ವಾಮಾ, ಪಠಾಣ್‌ಕೋಟ್, 2001ರ ಸಂಸತ್ ದಾಳಿ ಮತ್ತು ಅಕ್ಷರಧಾಮ ದಾಳಿಯ ಪ್ರಮುಖ ಸಂಚಾಲಕನಾಗಿಯೂ ಕಾರ್ಯನಿರ್ವಹಿಸಿದ್ದ. ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದ ಈತನ ವಿರುದ್ಧ ಭಾರತದಲ್ಲಿ ಹಲವು ಕೇಸುಗಳು ದಾಖಲಾಗಿದ್ದು, ಅತಿದೊಡ್ಡ ಭಯೋತ್ಪಾದಕನಾಗಿದ್ದ.

ಅವನ ಸಾವಿನಿಂದ ಭಯೋತ್ಪಾದಕ ಚಟುವಟಿಕೆಗಳಿಗೆ ಭಾರಿ ಹಿನ್ನಡೆಯಾಗಲಿದೆ ಎಂಬ ನಂಬಿಕೆ ಭಾರತೀಯ ಭದ್ರತಾ ವಲಯದಲ್ಲಿದೆ. ಗುಪ್ತಚರ ಮೂಲಗಳ ಪ್ರಕಾರ, ಈ ಕಾರ್ಯಾಚರಣೆಯು ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ವಿರುದ್ಧ ನಿರಂತರ ನಡೆಯುತ್ತಿರುವ ತೀವ್ರ ಕ್ರಮದ ಭಾಗವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸು ಫ್ರಮ್‌ ಸೋʼ ಚಿತ್ರ ಒಟಿಟಿಗೆ ಲಗ್ಗೆ: 7 ನಿಮಿಷಗಳ ದೃಶ್ಯಕ್ಕೆ ಕತ್ತರಿ?

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.