spot_img

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ: ಜನ ಪರ್ಯಾಯ ಮಾರ್ಗಗಳತ್ತ ಮುಖ!

Date:

ಬೆಂಗಳೂರು: ಮೆಟ್ರೋ ದರ ಹೆಚ್ಚಳದ ಬಿಸಿ ನೇರವಾಗಿ ಪ್ರಯಾಣಿಕರಿಗೆ ತಟ್ಟಿದ್ದು, 6 ಲಕ್ಷಕ್ಕೂ ಹೆಚ್ಚು ಜನ ಮೆಟ್ರೋ ಪ್ರಯಾಣ ತ್ಯಜಿಸಿದ್ದಾರೆ. ಫೆಬ್ರವರಿ 9 ರಿಂದ ದರ ಹೆಚ್ಚಳ ಜಾರಿಗೆ ಬಂದಿದ್ದು,ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲ ಮಾರ್ಗಗಳಲ್ಲಿ ದರವನ್ನು ಸ್ವಲ್ಪ ಕಡಿಮೆ ಮಾಡಲಾಯಿತಾದರೂ, ಜನರ ಅಸಮಾಧಾನ ಇನ್ನೂ ಕಡಿಮೆಯಾಗಿಲ್ಲ.

ಬಿಎಂಆರ್‌ಸಿಎಲ್ ನೀಡಿದ ಅಂಕಿಅಂಶಗಳ ಪ್ರಕಾರ, ಪರಿಷ್ಕೃತ ದರ ಜಾರಿಗೆ ಬಂದ ನಂತರ (ಫೆಬ್ರವರಿ.10 ರಿಂದ ಫೆಬ್ರವರಿ.14 ರ ವರೆಗೆ ) ಮೆಟ್ರೋ ದಿನನಿತ್ಯದ ಸರಾಸರಿ ಪ್ರಯಾಣಿಕರ ಸಂಖ್ಯೆ 7.72 ಲಕ್ಷಕ್ಕೆ ಕುಸಿದಿದೆ. ಇದಕ್ಕಿಂತ ಹಿಂದಿನ ವಾರ (ಫೆಬ್ರವರಿ.4 ರಿಂದ ಫೆಬ್ರವರಿ.8 ರ ವರೆಗೆ ) ಈ ಸಂಖ್ಯೆಯು 8.62 ಲಕ್ಷವಾಗಿತ್ತು. ಇದು ದರ ಹೆಚ್ಚಳದ ಪರಿಣಾಮ ಮೆಟ್ರೋ ಜನಪ್ರಿಯತೆ ಕಡಿಮೆಯಾಗುತ್ತಿರುವುದನ್ನು ತೋರಿಸುತ್ತದೆ.

ಪ್ರಯಾಣದ ಖರ್ಚು ಹೆಚ್ಚಾದ ಹಿನ್ನೆಲೆಯಲ್ಲಿ ನಿತ್ಯ ಮೆಟ್ರೋ ಅವಲಂಬಿಸಿದ್ದ ಪ್ರಯಾಣಿಕರು ಇದೀಗ ಬಸ್, ಟೂ ವೀಲರ್ ಹಾಗೂ ಶೇರ್ ರೈಡಿಂಗ್ ಗಳನ್ನು ಆಯ್ಕೆ ಮಾಡುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.