spot_img

ನಮ್ಮ ಪ್ರಧಾನಿ ನಮ್ಮ ಹೆಮ್ಮೆ.ಉಗ್ರರ ವಿರುದ್ಧದ ಆಪರೇಷನ್ ಸಿಂಧೂರ ಶ್ಲಾಘನೀಯ: ರಮಿತಾ ಶೈಲೇಂದ್ರ ಕಾರ್ಕಳ

Date:

spot_img

ಸಿಂಧೂರ ಹೇಳುವಂತದ್ದು ಭಾರತೀಯ ಮಹಿಳೆಯರ ಮುತ್ತೈದೆ ಸೌಭಾಗ್ಯ.

15 ದಿನಗಳ ಹಿಂದೆ ಪಹಲ್ಗಾಮನಲ್ಲಿ ಪ್ರವಾಸಕ್ಕೆ ತೆರಳಿದ್ದ ಭಾರತೀಯರ ಮೇಲೆ ನಡೆದಿರುವ ದಾಳಿಯಿಂದಾಗಿ 26 ತಾಯಂದಿರು ವಿಧವೆ ಆಗುವಂತಹ ಸನ್ನಿವೇಶ ಎದುರಾಗಿದ್ದು ಇದು ನಮ್ಮ ನೆರೆಯ ರಾಷ್ಟ್ರವಾಗಿರುವ ಪಾಕಿಸ್ತಾನದ ಷಡ್ಯಂತರವೆಂಬುವಂತದ್ದು ನಾಚಿಕೆಯ ವಿಷಯವಾಗಿತ್ತು. ಇಡೀ ಭಾರತದ ಜನತೆಗೆ ಇದು ಆತಂಕ ಕೆಡಿಸುವ ವಿಷಯವಾಗಿದ್ದರೂ ಸಮರ್ಥ ನಾಯಕನಿದ್ದರೆ ಪ್ರಜೆಗಳ ಹಿತಾಶಕ್ತಿಯನ್ನು ಬಯಸುವಂತಹ ಪ್ರಧಾನಿ ಇದಕ್ಕೆ ಪ್ರತ್ಯುತ್ತರವನ್ನು ನೀಡುವ ಮೂಲಕ ಸಿಂಧೂರ ಕಳಕೊಂಡವರ ಸಹೋದರನಾಗಿ ನಿಂತು ಭಾರತೀಯ ಸೇನೆಯಿಂದ ಉತ್ತರ ಕೊಟ್ಟಿದ್ದಾರೆ. ಇಡೀ ಭಾರತೀಯರು ಅಲ್ಲದೆ ಪ್ರಪಂಚದ ಇತರ ರಾಷ್ಟ್ರಗಳು ಭಾರತದತ್ತ ಒಮ್ಮೆ ತಿರುಗಿ ನೋಡುವಂತೆ ಮಾಡಿದ್ದಂತು ಸುಳ್ಳಲ್ಲ, ಪಾಕ್ ನ ಉಗ್ರರನ್ನು ಸದೆಬಡೆಯುವ ಮೂಲಕ ಭಾರತೀಯ ಸೇನೆಯ ಶೌರ್ಯವನ್ನು ತೋರಿಸಿಕೊಟ್ಟರೆ ,ಇನ್ನೊಂದು ಕಡೆಯಲ್ಲಿ ಭಾರತೀಯ ಹೆಣ್ಣುಮಕ್ಕಳ ತಂಟೆಗೆ ಬಂದಲ್ಲಿ ಅವರ ಸ್ಥಿತಿಗತಿಗಳು ಏನಾಗುತ್ತದೆ ಎಂಬುವಂತ ಪರಂಪರೆಯನ್ನು ಪುನರ್ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಭಾರತದ ಹೆಣ್ಣು ಮಕ್ಕಳ ನಾರಿ ಶಕ್ತಿಯನ್ನು ಯುದ್ಧದ ಮಾಹಿತಿ ಪತ್ರಿಕಾಗೋಷ್ಠಿಯಲ್ಲಿ ಸಿಂಹಿಣಿಯರ ಮೂಲಕ ಹೇಳಿಸಿರುವಂತದ್ದು ಭಾರತದ ಪ್ರತಿಯೊಂದು ಮಹಿಳೆಯು ಹೆಮ್ಮೆಪಡುವಂತಹ ವಿಷಯ. ನಮ್ಮ ಆಯ್ಕೆಗಳು ಸ್ಪಷ್ಟವಾಗಿದ್ದಲ್ಲಿ ಒಬ್ಬ ಸಮರ್ಥ ನಾಯಕ ದೇಶವನ್ನಾಳಲು ಸಾಧ್ಯ.

ರಮಿತಾ ಶೈಲೇಂದ್ರ ಕಾರ್ಕಳ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾಮಿನೋಸ್ ಪಿಜ್ಜಾಗೆ ದೊಡ್ಡ ದಂಡ: ಸಸ್ಯಾಹಾರಿ ಗ್ರಾಹಕನಿಗೆ ಮಾಂಸಾಹಾರ ನೀಡಿ ಭಾರೀ ಬೆಲೆ ತೆತ್ತ ಪಿಜ್ಜಾ ಕಂಪನಿ

ಸಸ್ಯಾಹಾರಿ ವ್ಯಕ್ತಿಯೊಬ್ಬರಿಗೆ ಮಾಂಸಾಹಾರಿ ಪಿಜ್ಜಾ ವಿತರಿಸಿದ ಪ್ರಕರಣದಲ್ಲಿ, ಧಾರವಾಡದ ಡಾಮಿನೋಸ್ ಪಿಜ್ಜಾ ಮಳಿಗೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ₹50,000 ದಂಡ ವಿಧಿಸಿದೆ.

ಜ್ಯಾಕ್ ಡಾರ್ಸೆ ಪರಿಚಯಿಸಿದ ‘ಬಿಟ್ಚಾಟ್’: ಇಂಟರ್ನೆಟ್ ಇಲ್ಲದೆ ಚಾಟ್ ಮಾಡುವ ಹೊಸ ಯುಗ!

ಟ್ವಿಟರ್ ಸಹ-ಸಂಸ್ಥಾಪಕ ಮತ್ತು ಬ್ಲಾಕ್ ಕಂಪನಿಯ ಸಿಇಒ ಜ್ಯಾಕ್ ಡಾರ್ಸೆ ಈಗ ಮತ್ತೊಂದು ಮಹತ್ವದ ತಂತ್ರಜ್ಞಾನ ಆವಿಷ್ಕಾರದೊಂದಿಗೆ ಮುಂಚೂಣಿಗೆ ಬಂದಿದ್ದಾರೆ. ಇಂಟರ್ನೆಟ್ ಅಥವಾ ಮೊಬೈಲ್ ನೆಟ್‌ವರ್ಕ್ ಇಲ್ಲದೆಯೂ ಸಂವಹನ ನಡೆಸಲು ಸಾಧ್ಯವಾಗುವ "ಬಿಟ್ಚಾಟ್" ಎಂಬ ಹೊಸ ಚಾಟ್ ಅಪ್ಲಿಕೇಶನ್ ಅನ್ನು ಅವರು ಅಭಿವೃದ್ಧಿಪಡಿಸಿದ್ದಾರೆ.

ರಾಷ್ಟ್ರೀಯ ಫುಟ್ಬಾಲ್ ದಿನ

ಪ್ರತಿ ವರ್ಷ ಜುಲೈ 19 ರಂದು ರಾಷ್ಟ್ರೀಯ ಫುಟ್‌ಬಾಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಅಮೆರಿಕನ್ ಫುಟ್‌ಬಾಲ್‌ನ ಶ್ರೀಮಂತ ಇತಿಹಾಸ, ಅದರ ಸಾಂಸ್ಕೃತಿಕ ಮಹತ್ವ ಮತ್ತು ಮುಂಬರುವ ಫುಟ್‌ಬಾಲ್ ಋತುವನ್ನು ಗೌರವಿಸುತ್ತದೆ.

ತೆರಿಗೆ ಇಲಾಖೆಯ ಬಿಗಿ ಕ್ರಮ: ಡಿಜಿಟಲ್ ಪಾವತಿ ವ್ಯಾಮೋಹದಿಂದ ನಗದು ವ್ಯವಹಾರಕ್ಕೆ ಮರಳಿದ ವ್ಯಾಪಾರಿಗಳು!

ಕೇಂದ್ರ ಸರ್ಕಾರದ 'ಅಚ್ಛೇ ದಿನ್' ಘೋಷಣೆಯೊಂದಿಗೆ ಡಿಜಿಟಲ್ ಇಂಡಿಯಾ ಕನಸು ಕಂಡಿದ್ದ ಸಣ್ಣ ವ್ಯಾಪಾರಿಗಳು ಇದೀಗ ತೆರಿಗೆ ಇಲಾಖೆಯ ಕಠಿಣ ಕ್ರಮಗಳಿಂದ ತತ್ತರಿಸಿದ್ದಾರೆ.