spot_img

ಪಹಲ್ಗಾಮ್ ದಾಳಿ ಪ್ರಕರಣ : ಪಾಕಿಸ್ತಾನ ಸೇನೆಯ ಮಾಜಿ ಪ್ಯಾರಾ ಕಮಾಂಡೋ ಹಾಶಿಮ್ ಮೂಸಾ ಪ್ರಮುಖ ಶಂಕಿತ ಭಯೋತ್ಪಾದಕ

Date:

spot_img

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳ (ಎಸ್‌ಎಸ್‌ಜಿ) ಮಾಜಿ ಕಮಾಂಡೋ ಹಾಶಿಮ್ ಮೂಸಾ ಇರಬಹುದೆಂಬ ಅನುಮಾನವನ್ನು ಭದ್ರತಾ ಸಂಸ್ಥೆಗಳು ವ್ಯಕ್ತಪಡಿಸಿವೆ. ಲಷ್ಕರ್-ಎ-ತೈಬಾ (LeT) ಸಂಘಟನೆಯ ಪ್ರಮುಖವಾಗಿ ಮೂಸಾ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದ್ದು, ಅವನು ಪಾಕಿಸ್ತಾನ ಸೇನೆಯಿಂದ ವಜಾಗೊಳ್ಳುವ ಮುನ್ನ ಪ್ಯಾರಾ ಕಮಾಂಡೋ ಆಗಿದ್ದನು.

ಪಾಕಿಸ್ತಾನದ ಸೇನೆಯಿಂದ ಹೊರಗಾದ ನಂತರ, ಮೂಸಾ 2023ರ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ನುಸುಳಿ ಬಂದು ಲಷ್ಕರ್‌ ಸಂಘಟನೆಯ ಕಾಶ್ಮೀರ ಕಾರ್ಯಾಚರಣೆಗಳಲ್ಲಿ ತೊಡಗಿದ್ದ. ಮುಂಬೈ ಶೈಲಿಯ ತರಬೇತಿಯನ್ನು ಪಡೆದ ಈ ಕಮಾಂಡೋ, ಅಸಾಂಪ್ರದಾಯಿಕ ಯುದ್ಧ ಮತ್ತು ರಹಸ್ಯ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿದ್ದಾನೆ.

ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ತನಿಖಾ ಅಧಿಕಾರಿಗಳು ಈಗಾಗಲೇ ಮೂಸಾ ಸೇರಿದಂತೆ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಗುರುತಿಸಿದ್ದು, ಉಳಿದವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಯುತ್ತಿದೆ. ದಾಳಿಯಲ್ಲಿ ಸ್ಥಳೀಯರಾದ ಆದಿಲ್ ಥೋಕರ್ ಮತ್ತು ಆಸಿಫ್ ಶೇಖ್‌ ಕೂಡ ಭಾಗಿಯಾಗಿದ್ದರೆಂದು ತಿಳಿದುಬಂದಿದೆ. ಇದರಿಂದ ಲಷ್ಕರ್ ಸಂಘಟನೆಗೆ ಸ್ಥಳೀಯ ಬೆಂಬಲವೂ ಇರುವುದು ಸ್ಪಷ್ಟವಾಗಿದೆ.

ಈ ದಾಳಿಯಲ್ಲಿ ಕನಿಷ್ಠ 26 ಮಂದಿ ಸಾವಿಗೀಡಾಗಿದ್ದು, ಹೆಚ್ಚಿನವರು ಪ್ರವಾಸಿಗರಾಗಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದರು. “2019ರ ಪುಲ್ವಾಮಾ ದಾಳಿಯ ನಂತರದ ಅತ್ಯಂತ ಭೀಕರ ಘಟನೆ ಎನ್ನಲಾಗಿದೆ.”

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರೋಟಾನ್‌ನಿಂದ ‘ಲುಮೋ’ AI ಚಾಟ್‌ಬಾಟ್ ಬಿಡುಗಡೆ

ಸುರಕ್ಷಿತ ಇಮೇಲ್ ಮತ್ತು ವಿಪಿಎನ್‌ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!

ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.

ಕಾಂಗ್ರೆಸ್ ಸಿದ್ಧಾಂತ ಜನರಿಗೆ ತಲುಪಿಸಿ: ಯಶಸ್ಸು ತಾತ್ಕಾಲಿಕವಲ್ಲ ಎಂದ ಕಿಮ್ಮನೆ ರತ್ನಾಕರ್

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.