spot_img

ಭಾರತದ ಆಪರೇಷನ್ ಸಿಂದೂರ ದಾಳಿಗೆ ಬೆದರಿದ ಪಾಕ್! ದಾಳಿ ನಿಲ್ಲಿಸಿದರೆ ನಾವೂ ನಿಲ್ಲಿಸುತ್ತೇವೆ ಎಂಬ ಸೂಚನೆ

Date:

ನವದೆಹಲಿ: ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ ಪಾಕ್ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರ ತಾಣಗಳ ವಿರುದ್ಧ ತೀವ್ರ ಕಾಳಜಿಯ ದಾಳಿಯಾಗಿ ಪರಿವರ್ತನೆಗೊಂಡಿದೆ. ಈ ಹೊಡೆತದಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ ಈಗ ಶಾಂತಿಯ ಮಾತುಕತೆಗೆ ಮುಂದಾಗಿದ್ದು, “ಭಾರತದ ದಾಳಿ ನಿಲ್ಲಿಸಿದರೆ, ಪಾಕಿಸ್ತಾನವೂ ಸಂಘರ್ಷ ನಿಲ್ಲಿಸಲು ತಯಾರಾಗಿದೆ” ಎಂದು ಪಾಕ್ ವಿದೇಶಾಂಗ ಸಚಿವ ಇಶಾಕ್ ದಾರ್ ಶನಿವಾರ ಘೋಷಿಸಿದ್ದಾರೆ.

ಸಿಎನ್‌ಎನ್-ನ್ಯೂಸ್ 18ಗೆ ನೀಡಿದ ಮಾಹಿತಿಯಲ್ಲಿ ಕೇಂದ್ರದ ಉನ್ನತ ಮೂಲಗಳು ತಿಳಿಸಿರುವ ಪ್ರಕಾರ, ಪಾಕ್‌ನ ಗಡಿಭಾಗದ ಉದ್ವಿಗ್ನ ಪರಿಸ್ಥಿತಿ ಮತ್ತು ಒಳರಾಜಕೀಯ ಅಶಾಂತತೆಯಿಂದಾಗಿ, ಭಾರತವೊಂದಿಗಿನ ಯುದ್ಧಸನ್ನಿವೇಶವನ್ನು ಕಡಿಮೆ ಮಾಡಲು ಪಾಕಿಸ್ತಾನ ತಾತ್ಕಾಲಿಕ ಚರ್ಚೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಮೊದಲ ಬಾರಿಗೆ ಭಾರತದ ವಿದೇಶಾಂಗ ಇಲಾಖೆ ಅಧಿಕಾರಿಗಳೊಂದಿಗೆ ದೂರವಾಣಿ ಸಂವಾದ ನಡೆಸಿದೆ ಎಂಬ ವರದಿಯೂ ಲಭ್ಯವಾಗಿದೆ.

ಇನ್ನು ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಅತಿಕ್ರಮಣ ಬೆಳೆಸಿದ ಹಿನ್ನೆಲೆಯಲ್ಲಿ, ಭಾರತದ ಏರ್ ಡಿಫೆನ್ಸ್ ಭದ್ರತೆ ಉನ್ನತ ಮಟ್ಟಕ್ಕೆ ಏರಿಸಲಾಯಿತು. ಪಾಕ್‌ನ ರಾಫಿಖಿ, ಮುರಿಡ್, ಚಾಕ್ಲಾಲಾ ಹಾಗೂ ರಹೀಂ ಯಾರ್ ಖಾನ್‌ನಂತಹ ಪ್ರಮುಖ ವಾಯುನೆಲೆಗಳ ಮೇಲೆ ಭಾರತ ವೈಮಾನಿಕ ದಾಳಿ ನಡೆಸಿ ಪಾಕ್ ಏರ್ ಡಿಫೆನ್ಸ್ ವ್ಯವಸ್ಥೆ ಧ್ವಂಸಗೊಳಿಸಿತು.

ಈ ಬೆನ್ನಲ್ಲೇ ಪಾಕ್ ರಕ್ಷಣಾ ಸಚಿವರು ಮೊದಲೇ ನೀಡಿದ “ನಾವಿರಬೇಕು ಇಲ್ಲವೇ ಯಾರೂ ಇರಬಾರದು” ಎಂಬ ಹೆಮ್ಮೆ ಭರಿತ ಹೇಳಿಕೆಯಿಂದ ಹಿಂದೇಟು ಹಾಕಿರುವುದು ಗಮನಾರ್ಹ.ಈಗ ಈ ಹೇಳಿಕೆಯಿಂದ ಸಂಪೂರ್ಣ ಯೂ-ಟರ್ನ್ ಹೊಡೆದು ಶಾಂತಿಯ ಭಾಷಣ ಆರಂಭಿಸಿದೆ . ಭಾರತ ತನ್ನ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದಂತಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸು ಫ್ರಮ್‌ ಸೋʼ ಚಿತ್ರ ಒಟಿಟಿಗೆ ಲಗ್ಗೆ: 7 ನಿಮಿಷಗಳ ದೃಶ್ಯಕ್ಕೆ ಕತ್ತರಿ?

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.