spot_img

ಭಾರತದ ಕ್ಷಿಪಣಿ ದಾಳಿಗೆ ಬೆಚ್ಚಿಬಿದ್ದ ಪಾಕಿಸ್ತಾನ !ಪಾಕ್ ನ ಎಲ್ಲಾ ವಿಮಾನ ಸಂಚಾರ ಸ್ಥಗಿತ!

Date:

spot_img

ಹೊಸದಿಲ್ಲಿ: ಪಾಕಿಸ್ತಾನ ಭಾರತದ ಗಡಿ ರಾಜ್ಯಗಳಾದ ಜಮ್ಮು-ಕಾಶ್ಮೀರ, ರಾಜಸ್ಥಾನ, ಪಂಜಾಬ್ ಮತ್ತು ಗುಜರಾತ್‌ನ 26 ಗಡಿ ನಗರಗಳನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ, ಭಾರತ ಶನಿವಾರ ಮುಂಜಾನೆ ಪಾಕಿಸ್ತಾನಕ್ಕೆ ತೀವ್ರ ಪ್ರತಿದಾಳಿ ನಡೆಸಿದೆ.

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ಗೆ ಕೇವಲ 10 ಕಿಲೋಮೀಟರ್ ದೂರದಲ್ಲಿರುವ, ದೇಶದ ಪ್ರಮುಖ ಸೇನಾ ನೆಲೆಗಳ ಪೈಕಿ ಒಂದಾದ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ, ಮತ್ತು ಚಕ್ವಾಲ್ ಜಿಲ್ಲೆಯ ಮುರಿದ್ ವಾಯುನೆಲೆ, ಜಾಂಗ್ ಜಿಲ್ಲೆಯ ರಫಿಕಿ ವಾಯುನೆಲೆ ಸೇರಿದಂತೆ ನಾಲ್ಕು ವಾಯುನೆಲೆಗಳ ಮೇಲೆ ಭಾರತವು ಕ್ಷಿಪಣಿ ದಾಳಿ ನಡೆಸಿದ ಮಾಹಿತಿ ಬಂದಿದೆ.

ಈ ದಾಳಿಯಿಂದ ಪಾಕಿಸ್ತಾನದಲ್ಲಿ ಭಾರಿ ಆತಂಕ ಉಂಟಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳಲ್ಲಿ, ನೂರ್ ಖಾನ್ ವಾಯುನೆಲೆಯಲ್ಲಿ ಸ್ಫೋಟ, ಬೆಂಕಿ, ಜನರ ಗದ್ದಲಗಳು, ಹಾಗೂ ಸತತ ಸ್ಫೋಟಗಳ ದೃಶ್ಯಗಳು ಕಾಣಿಸುತ್ತಿವೆ. ಈ ಘಟನೆಯ ಬಳಿಕ ಪಾಕಿಸ್ತಾನ ತಕ್ಷಣವೇ ತನ್ನ ಇಸ್ಲಾಮಾಬಾದ್, ಲಾಹೋರ್, ಸಿಯಾಲ್‌ಕೋಟ್, ರಹೀಮ್ ಖಾನ್ ವಾಯುನೆಲೆಗಳಲ್ಲಿ ನಾಗರಿಕ ಮತ್ತು ವಾಣಿಜ್ಯ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ನೂರ್ ಖಾನ್ ವಾಯುನೆಲೆ, ಹಿಂದಿನ ಚಕ್ಲಾಲಾ ಏರ್‌ಬೇಸ್, ಪಾಕಿಸ್ತಾನದ ಅತ್ಯಂತ ಪ್ರಮುಖ ಮತ್ತು ರಹಸ್ಯ ಮಿಲಿಟರಿ ನೆಲೆಗಳಲ್ಲಿ ಒಂದಾಗಿದ್ದು, ಇತರ ಮಿಲಿಟರಿ ಘಟಕಗಳ ಜೊತೆಗೆ ವಿಐಪಿ ವಿಮಾನ ಸಂಚಾರಕ್ಕೂ ಬಳಸಲಾಗುತ್ತದೆ.

ಡ್ರೋನ್ ದಾಳಿಯ ನೇರ ಪರಿಣಾಮವಾಗಿ ಭಾರತದ ವಾಣಿಜ್ಯ ವಿಮಾನಗಳನ್ನು ಗುರಿಯಾಗಿಸಲಾಗುತ್ತಿದೆ ಎಂದು ಪಾಕ್ ಆರೋಪಿಸಿದ್ದ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿರುವುದರಿಂದ, ಎರಡು ರಾಷ್ಟ್ರಗಳ ನಡುವಿನ ವಾತಾವರಣ ಮತ್ತಷ್ಟು ಉದ್ವಿಗ್ನವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರೋಟಾನ್‌ನಿಂದ ‘ಲುಮೋ’ AI ಚಾಟ್‌ಬಾಟ್ ಬಿಡುಗಡೆ

ಸುರಕ್ಷಿತ ಇಮೇಲ್ ಮತ್ತು ವಿಪಿಎನ್‌ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!

ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.

ಕಾಂಗ್ರೆಸ್ ಸಿದ್ಧಾಂತ ಜನರಿಗೆ ತಲುಪಿಸಿ: ಯಶಸ್ಸು ತಾತ್ಕಾಲಿಕವಲ್ಲ ಎಂದ ಕಿಮ್ಮನೆ ರತ್ನಾಕರ್

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.