ಪಾಲ್ಕಾಡ್ ರೈಲು ನಿಲ್ದಾಣದಲ್ಲಿ ನಡೆದ ವಿಚಿತ್ರ ಘಟನೆ : ಆಕಳಿಸಿದ ಬಾಯಿಯನ್ನು ಮುಚ್ಚಲಾಗದೆ ಪರದಾಡಿದ ರೈಲು ಪ್ರಯಾಣಿಕ

Date:

spot_img

ಪಾಲ್ಕಾಡ್ (ಕೇರಳ): ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತ ಕುಳಿತಿದ್ದ ಯುವ ಪ್ರಯಾಣಿಕನೊಬ್ಬ ಆಕಳಿಸಿದ ಬಳಿಕ ಬಾಯಿಯನ್ನು ಮುಚ್ಚಲಾಗದೆ ಪರದಾಡಿದ ವಿಚಿತ್ರ ಘಟನೆ ಪಾಲ್ಕಾಡ್ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ಕುರಿತಾದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರೈಲು ನಿಲ್ದಾಣದಲ್ಲಿ ಕುಳಿತಿದ್ದ ಈ ಯುವಕ ಆಕಳಿಸಿದ ಬಳಿಕ ಬಾಯಿ ಮುಚ್ಚಲು ಸಾಧ್ಯವಾಗದೆ ನೋವಿನಿಂದ ಬಳಲುತ್ತಾ ಪರದಾಡಿದ್ದಾನೆ. ಇದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ತಕ್ಷಣ ವೈದ್ಯಕೀಯ ನೆರವು ನೀಡಿದ್ದಾರೆ.

ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಯುವಕನಿಗೆ ಚಿಕಿತ್ಸೆ ನೀಡಿದ್ದಾರೆ. ಯುವಕನ ಬಾಯಿ ಮುಚ್ಚಲು (ತಾತ್ಕಾಲಿಕ ಜಡತ್ವಕ್ಕೆ ಒಳಗಾಗಿದ್ದ ದವಡೆಗೆ) ನೆರವಾಗಿದ್ದಾರೆ. ಆಕಳಿಕೆ ಸಂದರ್ಭದಲ್ಲಿ ದವಡೆ ಸ್ಥಾನಪಲ್ಲಟಗೊಂಡಾಗ (Dislocation) ಈ ರೀತಿಯಾಗುವ ಸಾಧ್ಯತೆಗಳಿರುತ್ತವೆ.

ಸಮಯಪ್ರಜ್ಞೆ ಮೆರೆದು ತಕ್ಷಣ ವೈದ್ಯಕೀಯ ಸೇವೆ ನೀಡಿದ ರೈಲ್ವೆ ಇಲಾಖೆಯ ಕಾರ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.