ಪಳ್ಳಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಆಂಗ್ಲ ಮಾಧ್ಯಮ ವಿಭಾಗದ ಉದ್ಘಾಟನೆ

Date:

spot_img

ಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಲಾಖೆಯ ಆದೇಶದಂತೆ ಒಂದನೇ ತರಗತಿಯ ದ್ವಿಭಾಷಾ ಆಂಗ್ಲ ಮಾಧ್ಯಮ ವಿಭಾಗವನ್ನು ಜುಲೈ 28, 2025 ರಂದು ಸೋಮವಾರ ಉದ್ಘಾಟಿಸಲಾಯಿತು. ಶಾಲೆಯ ಹಳೆಯ ವಿದ್ಯಾರ್ಥಿ ಮತ್ತು ಪ್ರಸ್ತುತ ಸಮಾಜ ಸೇವಕ ಶ್ರೀ ರಘುನಾಥ್ ಶೆಟ್ಟಿ ಅವರು ದೀಪ ಬೆಳಗಿಸಿ ಈ ವಿಭಾಗಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಅಂಚನ್ ಮತ್ತು ಸ್ಥಳೀಯ ಗಣ್ಯರಾದ ಶ್ರೀ ಜಗದೀಶ್ ಹೆಗ್ಡೆ ಅವರು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಆಂಗ್ಲ ಭಾಷೆಯ ಕಲಿಕೆಯ ಅನಿವಾರ್ಯತೆಯನ್ನು ವಿವರಿಸಿದರು. ಇಂಗ್ಲಿಷ್ ಮಾಧ್ಯಮ ವಿಭಾಗವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಉತ್ತಮ ಬುನಾದಿಯನ್ನು ಒದಗಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀ ಸಂತೋಷ್ ಶೆಟ್ಟಿ ಅವರು ಮಾತನಾಡಿ, ಇಲಾಖೆಯ ಹೊಸ ನೀತಿಯನ್ನು ಶ್ಲಾಘಿಸಿದರು. ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಭಾಷೆಯ ಕಲಿಕೆಯು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ ಎಂದು ತಿಳಿಸಿದರು. ಹಳೆಯ ವಿದ್ಯಾರ್ಥಿಗಳ ಸಂಘದ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಅವರ ನೆರವಿನಿಂದ ಆಂಗ್ಲ ಮಾಧ್ಯಮ ವಿಭಾಗಕ್ಕೆ ಶಿಕ್ಷಕರನ್ನು ನೇಮಿಸಿ ವೇತನವನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದು ಸಮುದಾಯದ ಸಹಭಾಗಿತ್ವಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷ ಶ್ರೀ ಪ್ರಭಾಕರ ಬಂಗೇರ, ಮುಖ್ಯ ಶಿಕ್ಷಕಿ ಶ್ರೀಮತಿ ನಾಗರತ್ನ, ದಾನಿಗಳಾದ ಶ್ರೀ ಶೇಖರ್ ಶೆಟ್ಟಿ, ಶ್ರೀ ಜಯಕರ ಶೆಟ್ಟಿ, ಶ್ರೀ ಮನೋಹರ್ ಶೆಟ್ಟಿ, ಪಂಚಾಯತ್ ಸದಸ್ಯರಾದ ವಿಜಯ್ ಎಂ. ಶೆಟ್ಟಿ, ಗೋವಿಂದ ಜೋಗಿ, ದಿನಕರ ಶೆಟ್ಟಿ, ಪ್ರಶಾಂತ್ ಶೆಟ್ಟಿ, ನಿಟ್ಟೆ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ಶಿವಾನಂದ ಕೆ., ಮತ್ತು ವಿದ್ಯಾರ್ಥಿ ನಾಯಕಿ ಸೌಮ್ಯ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಅವರು ಎಲ್ಲರನ್ನೂ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಚಿತ್ರಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಶಿಕ್ಷಕಿ ಶ್ರೀಮತಿ ಲಕ್ಷ್ಮೀ ಅವರು ವಂದನಾರ್ಪಣೆ ಮಾಡಿದರು. ಈ ಉಪಕ್ರಮದಿಂದ ಪಳ್ಳಿ ಶಾಲೆಯ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿದೆ ಎಂದು ಎಲ್ಲರೂ ಆಶಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.