spot_img

ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಸಭೆ

Date:

spot_img

ನಿಂಜೂರು : ನಿಂಜೂರು ಗ್ರಾಮದ ಬೂತ್ ಸಂಖ್ಯೆ -63 ಬೂತ್ ಸಮಿತಿಯ ಸಭೆಯು ದಿನಾಂಕ-30/06/2025 ಸೋಮವಾರ ಸಂಜೆ ಘಂಟೆ 5.30ಕ್ಕೆ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಾನ್ಯ ಶ್ರೀ ವಿಲ್ಸನ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಬೂತ್ ಸಂಖ್ಯೆ-63 ಸಮಿತಿಯ ಸೇವಾದಳದ ಅಧ್ಯಕ್ಷರಾದ ನಿಂಜೂರು ಪಾತಾವು ಶ್ರೀ ರೋನಾಲ್ಡ್ (ರೋನಿ) ಡಿಸೋಜ ಅವರ ಹಾಲ್ ನಲ್ಲಿ ನಡೆಯಿತು.

ಬೈಲೂರು ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಪಕ್ಷದ ಉಸ್ತುವಾರಿ, ರಾಜ್ಯ ಕೃಷಿ ಘಟಕದ ಕಾರ್ಯದರ್ಶಿ, ಪ್ರಸ್ತುತ ಕುಕ್ಕುಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಉದಯ್ ಶೆಟ್ಟಿ ಕುಕ್ಕುಂದೂರು ಅವರು ಪಕ್ಷ‌ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿದರು ಹಾಗೂ ನೇಮಕ ಮಾಡಿದ ಬೂತ್ ಸಮಿತಿಯ ವಿವಿಧ ಘಟಕಗಳ ನೂತನ ಅಧ್ಯಕ್ಷರ ಜವಾಬ್ದಾರಿಯನ್ನು‌‌ ತಿಳಿಸಿದರು. ನಂತರ ಪಕ್ಷದ ಕಾರ್ಯಕರ್ತರ ಹಾಗೂ ಸ್ಥಳೀಯ ಸಮಸ್ಯೆಗಳನ್ನು ಬಹಳ ವಿನಮ್ರತೆಯಿಂದ ಆಲಿಸಿ, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಹಾಗೂ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಶುಭದ್ ರಾವ್ ಅವರಿಗೆ ತಿಳಿಸಿ ಸೂಕ್ತ ಪರಿಹಾರವನ್ನು ಆದಷ್ಟು ಬೇಗ ಮಾಡುವ ಭರವಸೆಯನ್ನು ನೀಡಿದರು. ಕಾರ್ಕಳ ಬ್ಲಾಕ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ಹಾಗೂ ಕಾರ್ಕಳ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾದ ರೆಹಮುತುಲ್ಲಾ ಸಮಯೋಚಿತವಾಗಿ ಮಾತನಾಡಿದರು.

ವೇದಿಕೆಯಲ್ಲಿ ಬೈಲೂರು ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಜತೆ ಉಸ್ತುವಾರಿ ಅಂತೋನಿ ಮಿರಾಂದ, ಕಾಂಗ್ರೆಸ್ ಸ್ಥಳೀಯ ಹಿರಿಯ ನಾಯಕರಾದ, ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಕೃಷಿ ಘಟಕದ ಅಧ್ಯಕ್ಷರಾದ ಸುಬ್ಬಯ್ಯ ಶೆಟ್ಟಿ, ಮಾಜಿ ಮಂಡಲ ಪ್ರಧಾನರಾದ ಚಂದ್ರಶೇಖರ ಶೆಟ್ಟಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ವಿಶ್ವನಾಥ ಭಂಡಾರಿ, ಬೂತ್ ಅಧ್ಯಕ್ಷ ಸಂತೋಷ್ ಪೂಜಾರಿ, ಪಳ್ಳಿ- ನಿಂಜೂರು ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸುಜೀತ್ ಪೂಜಾರಿ ಹಾಗೂ ಸೇವಾದಳದ ಬೂತ್ ಅಧ್ಯಕ್ಷ ರೋನಾಲ್ಡ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.ಪಳ್ಳಿ ಬೂತ್ ಸಂಖ್ಯೆ- 123ರ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ನಿಂಜೂರು ಬೂತ್-63 ಸಮಿತಿಯ ಸದಸ್ಯರೆಲ್ಲರೂ ಹಾಗು ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗು ಸಕ್ರೀಯ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ದಿನಕರ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಕಾರ್ಕಳ ಗ್ಯಾರಂಟಿ ಸಮಿತಿಯ ಸದಸ್ಯರಾದ ಸಂತೋಷ್ ಶೆಟ್ಟಿ ನಿಂಜೂರು ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸದ್ಭಾವನಾ ದಿವಸ್

ಇಂದು ದೇಶಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಯ ಮಹತ್ವವನ್ನು ಎತ್ತಿ ಹಿಡಿಯುವ ಸದ್ಭಾವನಾ ದಿವಸವನ್ನು ಆಚರಿಸಲಾಗುತ್ತದೆ

1995 ರ ನಂತರದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲು ಗಮನ ಸೆಳೆಯುವ ಸೂಚನೆ ಮಂಡಿಸಿ ಯಶಸ್ವಿಯಾದ ವಿ ಪ ಸದಸ್ಯ ಶಶೀಲ್ ಜಿ ನಮೋಶಿ

1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಗಮನ ಸೆಳೆಯುವ ಸೂಚನೆ ಮಂಡಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಂದ ಅನುದಾನ ನೀಡುವ ಭರವಸೆ ಪಡೆಯುವಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಯಶಸ್ವಿಯಾದರು.

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌ ಮಾಡಿದ್ದಾರೆ.

ಹೈಪೊಗ್ಲಿಸಿಮಿಯಾ: ಹಠಾತ್ ರಕ್ತದ ಸಕ್ಕರೆ ಇಳಿಕೆ ಅತ್ಯಂತ ಅಪಾಯಕಾರಿ – ತಜ್ಞರ ಎಚ್ಚರಿಕೆ

ಇದ್ದಕ್ಕಿದ್ದಂತೆ ರಕ್ತದಲ್ಲಿ ಸಕ್ಕರೆಯ ಪ್ರಮಾಣ ನಿಯಮಿತ ಮಟ್ಟಕ್ಕಿಂತಲೂ ಕಡಿಮೆಯಾದರೆ ಅದು ಹೆಚ್ಚು ಅಪಾಯಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು.