ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಸಭೆ

Date:

spot_img

ನಿಂಜೂರು : ನಿಂಜೂರು ಗ್ರಾಮದ ಬೂತ್ ಸಂಖ್ಯೆ -63 ಬೂತ್ ಸಮಿತಿಯ ಸಭೆಯು ದಿನಾಂಕ-30/06/2025 ಸೋಮವಾರ ಸಂಜೆ ಘಂಟೆ 5.30ಕ್ಕೆ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಾನ್ಯ ಶ್ರೀ ವಿಲ್ಸನ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಬೂತ್ ಸಂಖ್ಯೆ-63 ಸಮಿತಿಯ ಸೇವಾದಳದ ಅಧ್ಯಕ್ಷರಾದ ನಿಂಜೂರು ಪಾತಾವು ಶ್ರೀ ರೋನಾಲ್ಡ್ (ರೋನಿ) ಡಿಸೋಜ ಅವರ ಹಾಲ್ ನಲ್ಲಿ ನಡೆಯಿತು.

ಬೈಲೂರು ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಪಕ್ಷದ ಉಸ್ತುವಾರಿ, ರಾಜ್ಯ ಕೃಷಿ ಘಟಕದ ಕಾರ್ಯದರ್ಶಿ, ಪ್ರಸ್ತುತ ಕುಕ್ಕುಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಉದಯ್ ಶೆಟ್ಟಿ ಕುಕ್ಕುಂದೂರು ಅವರು ಪಕ್ಷ‌ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿದರು ಹಾಗೂ ನೇಮಕ ಮಾಡಿದ ಬೂತ್ ಸಮಿತಿಯ ವಿವಿಧ ಘಟಕಗಳ ನೂತನ ಅಧ್ಯಕ್ಷರ ಜವಾಬ್ದಾರಿಯನ್ನು‌‌ ತಿಳಿಸಿದರು. ನಂತರ ಪಕ್ಷದ ಕಾರ್ಯಕರ್ತರ ಹಾಗೂ ಸ್ಥಳೀಯ ಸಮಸ್ಯೆಗಳನ್ನು ಬಹಳ ವಿನಮ್ರತೆಯಿಂದ ಆಲಿಸಿ, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಹಾಗೂ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಶುಭದ್ ರಾವ್ ಅವರಿಗೆ ತಿಳಿಸಿ ಸೂಕ್ತ ಪರಿಹಾರವನ್ನು ಆದಷ್ಟು ಬೇಗ ಮಾಡುವ ಭರವಸೆಯನ್ನು ನೀಡಿದರು. ಕಾರ್ಕಳ ಬ್ಲಾಕ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ಹಾಗೂ ಕಾರ್ಕಳ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾದ ರೆಹಮುತುಲ್ಲಾ ಸಮಯೋಚಿತವಾಗಿ ಮಾತನಾಡಿದರು.

ವೇದಿಕೆಯಲ್ಲಿ ಬೈಲೂರು ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಜತೆ ಉಸ್ತುವಾರಿ ಅಂತೋನಿ ಮಿರಾಂದ, ಕಾಂಗ್ರೆಸ್ ಸ್ಥಳೀಯ ಹಿರಿಯ ನಾಯಕರಾದ, ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಕೃಷಿ ಘಟಕದ ಅಧ್ಯಕ್ಷರಾದ ಸುಬ್ಬಯ್ಯ ಶೆಟ್ಟಿ, ಮಾಜಿ ಮಂಡಲ ಪ್ರಧಾನರಾದ ಚಂದ್ರಶೇಖರ ಶೆಟ್ಟಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ವಿಶ್ವನಾಥ ಭಂಡಾರಿ, ಬೂತ್ ಅಧ್ಯಕ್ಷ ಸಂತೋಷ್ ಪೂಜಾರಿ, ಪಳ್ಳಿ- ನಿಂಜೂರು ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸುಜೀತ್ ಪೂಜಾರಿ ಹಾಗೂ ಸೇವಾದಳದ ಬೂತ್ ಅಧ್ಯಕ್ಷ ರೋನಾಲ್ಡ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.ಪಳ್ಳಿ ಬೂತ್ ಸಂಖ್ಯೆ- 123ರ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ನಿಂಜೂರು ಬೂತ್-63 ಸಮಿತಿಯ ಸದಸ್ಯರೆಲ್ಲರೂ ಹಾಗು ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗು ಸಕ್ರೀಯ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ದಿನಕರ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಕಾರ್ಕಳ ಗ್ಯಾರಂಟಿ ಸಮಿತಿಯ ಸದಸ್ಯರಾದ ಸಂತೋಷ್ ಶೆಟ್ಟಿ ನಿಂಜೂರು ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.