ಪಂಚನಬೆಟ್ಟುವಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಧಾಕೃಷ್ಣ ವೇಷ ಸ್ಪರ್ಧೆಯ ಸಂಭ್ರಮ

Date:

spot_img

ಪಂಚನಬೆಟ್ಟು: ಪಂಚನಬೆಟ್ಟುವಿನ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 16, 2025 ರ ಶನಿವಾರದಂದು ರಾಧಾ ಮತ್ತು ಕೃಷ್ಣ ವೇಷಭೂಷಣ ಸ್ಪರ್ಧೆಯನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ಶಾಲಾ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಸಂತೋಷ್ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಟ್ರಸ್ಟ್‌ನ ಉಪಾಧ್ಯಕ್ಷರಾದ ಶ್ರೀ ವಾಸುದೇವ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ವಿಶೇಷ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಸಚಿನ್ ಪ್ರಭು ಮತ್ತು ಬಂಟಕಲ್ಲು ಕೃಷ್ಣ ಅವರು ಮಕ್ಕಳಿಗೆ ಭಗವಾನ್ ಶ್ರೀಕೃಷ್ಣನ ಸಂದೇಶಗಳನ್ನು ತಿಳಿಸಿ ಸ್ಫೂರ್ತಿ ನೀಡಿದರು. ಸ್ಪರ್ಧೆಯ ತೀರ್ಪುಗಾರರಾಗಿ ಶ್ರೀ ಸಂದೀಪ್ ಪ್ರಭು, ಶ್ರೀ ದೇವೇಂದ್ರ ನಾಯ್ಕ್, ಮತ್ತು ಶ್ರೀಮತಿ ಶಾಂತ ಭಟ್ (ನೆಕ್ಕರೆ ಪಲ್ಕೆ) ಭಾಗವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶ್ಯಾಮಲಾ ನಾಯ್ಕ್, ಶ್ರೀಮತಿ ಅಶ್ವಿನಿ ನಾಯ್ಕ್, ಮತ್ತು ಶ್ರೀ ವಿಶ್ವನಾಥ್ ನಾಯಕ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

4️⃣ ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ 60 ಕ್ಕೂ ಹೆಚ್ಚು ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಪ್ರತಿ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಪ್ರಶಂಸಾ ಪತ್ರದ ಜೊತೆ ನೀಡಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರೋತ್ಸಾಹಕ ಬಹುಮಾನ ಮತ್ತು ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜ್ಯೋತಿ ಅವರ ಸಮರ್ಥ ಮಾರ್ಗದರ್ಶನ ಮತ್ತು ಎಲ್ಲ ಶಿಕ್ಷಕಿಯರ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಶ್ರೀಮತಿ ಪೂರ್ಣಿಮಾ ಮತ್ತು ಶ್ರೀಮತಿ ಚೈತ್ರ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಶಾಲಾ ಉಸ್ತುವಾರಿ ಶ್ರೀ ನರಸಿಂಹ ನಾಯಕ್ ಅವರು ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಈ ಕಾರ್ಯಕ್ರಮವು ಪೋಷಕರು, ಹಳೆಯ ವಿದ್ಯಾರ್ಥಿಗಳು, ಶಾಲಾ ಹಿತೈಷಿಗಳು ಹಾಗೂ ಊರಿನವರ ಸಂಪೂರ್ಣ ಸಹಕಾರದಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.