ಪರಶುರಾಮ ಹಿತರಕ್ಷಣಾ ವೇದಿಕೆಯೋ ಅಥವಾ ಉದಯ ಶೆಟ್ಟಿ ರಕ್ಷಣಾ ವೇದಿಕೆಯೋ? – ಸಚ್ಚಿದಾನಂದ ಶೆಟ್ಟಿ ಪ್ರಶ್ನೆ

Date:

spot_img

ಕಾರ್ಕಳ : ಪರಶುರಾಮ ಹಿತರಕ್ಷಣಾ ಸಮಿತಿಯೋ ಅಥವಾ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ರಕ್ಷಣಾ ವೇದಿಕೆಯೋ ಎಂದು ಬೈಲೂರಿನ ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದನಾಂದ ಶೆಟ್ಟಿ ಪ್ರಶ್ನಿಸಿದ್ದಾರೆ.

ಪರಶುರಾಮ ಹಿತರಕ್ಷಣಾ ಸಮಿತಿ ವಿಸರ್ಜನೆ ಕುರಿತು ಪ್ರತಿಕ್ರಿಯಿಸಿರುವ ಅವರು ಸಮಿತಿಯ ನಿಜ ಬಣ್ಣ ಈಗ ಬಯಲಾಗಿದೆ. ಸಮಿತಿ ಪ್ರವಾಸೋದ್ಯಮ ಉಳಿವು, ಜನರ ಹಿತರಕ್ಷಣೆಗಾಗಿ ಅಸ್ತಿತ್ವಕ್ಕೆ ಬಾರದೆ , ಇದರ ಅಸ್ತಿತ್ವವೂ ವಿಸರ್ಜನೆಯೂ ಉದಯ ಶೆಟ್ಟಿಯ ರಾಜಕೀಯ ಲಾಭಕ್ಕಾಗಿ ಹುಟ್ಟಿಕೊಂಡಿತ್ತು. ಕಾಂಗ್ರೆಸ್ ನ ಮುಖವಾಣಿಯಾಗಿಯೇ ಅಂದಿನಿಂದ ಇಂದಿನವರೆಗೂ ಕೆಲಸ ಮಾಡಿಕೊಂಡು ಬಂದಿತ್ತು. ಎನ್ನುವ ಸತ್ಯ ಸಾರ್ವಜನಿಕವಾಗಿ ಬಹಿರಂಗಗೊಂಡಿದೆ ಎಂದು ಆರೋಪಿಸಿದರು.

ಪ್ರವಾಸೋದ್ಯಮವಾಗಿದ್ದ ಥೀಂ ಪಾರ್ಕ್ ಕಾಮಗಾರಿಗೆ ನಾನಾ ತರಹ ಅಡ್ಡಿ ಪಡಿಸಿ, ತಡೆದು ಕಳೆದೆರಡು ವರ್ಷ ನಾಟಕವಾಡಿ ಪ್ರವಾಸೋದ್ಯಮಕ್ಕೆ ನಷ್ಟ ಮಾಡಿದರಲ್ಲ? ಆದ ಕೋಟ್ಯಾಂತರ ರೂಪಾಯಿ ನಷ್ಟಕ್ಕೆ ಸಮಿತಿಯವರು ಹಾಗೂ ಕಾಂಗ್ರೆಸ್ ನಾಯಕ ಉದಯ ಶೆಟ್ಟಿಯೇ ನೇರ ಹೊಣೆಗಾರರು.

ಅಂದು “ರಸ್ತೆಗೆ ಮಣ್ಣು ಹಾಕಿ ಕಾಮಗಾರಿ ಅಡ್ಡಿಪಡಿಸಿದ್ದು ಯಾರ ಹಿತಕ್ಕಾಗಿ? ಜನರ ಹಿತಕ್ಕಾಗಿ ಅಲ್ಲ, ಕಾಂಗ್ರೆಸ್ ಲಾಭ ಪಡೆಯುವುದರ ಹಿತಕ್ಕಾಗಿ” ಎಂದು ಹೇಳಿದ ಅವರು, ದಿನಕ್ಕೊಂದು ನಾಟಕ ಮಾಡಿ ಥೀಂ ಪಾರ್ಕ್ ಅನ್ನು ರಾಜಕೀಯವಾಗಿ ಮುಗಿಸುವುದೇ ಇವರ ಗುರಿ ಎಂದು ಆರೋಪಿಸಿದರು.

“ರಾಜಕೀಯ ರಹಿತ” ಎಂದು ಹೇಳಿಕೊಂಡಿದ್ದ ಸಮಿತಿ ವಾಸ್ತವದಲ್ಲಿ ಕಾಂಗ್ರೆಸ್ ಸ್ವಹಿತಕ್ಕಾಗಿ ಮಾತ್ರ ಕೆಲಸ ಮಾಡಿದ ಕಾಂಗ್ರೆಸ್ ನ ಅಂಗ ಸಂಸ್ಥೆಯಾಗಿತ್ತು. ಕಾಂಗ್ರೆಸ್ ನ ನಕಲಿ ಹೋರಾಟದಂತೆ ಇದು ಕೂಡ ಒಂದು ನಕಲಿ ಹಿತರಕ್ಷಾಣಾ ಸಮಿತಿ ಆಗಿ ಕಾರ್ಯನಿರ್ವಹಿಸಿತ್ತು ಎಂದು ಬೈಲೂರಿನ ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದನಾಂದ ಶೆಟ್ಟಿ ಆರೋಪಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.