spot_img

ಪರಶುರಾಮನ ಪ್ರತಿಮೆ ಕಂಚಿನದ್ದು ಅಲ್ಲ ಎಂದು ಸಾಬೀತಾದರೂ ಸಮರ್ಥನೆ ಧರ್ಮ ದ್ರೋಹಕ್ಕೆ ಸಮಾನ ! – ಧೈರ್ಯವಿದ್ದರೆ ಬೈಲೂರು ಮಾರಿಗುಡಿಯಲ್ಲಿ ಪ್ರಮಾಣಿಸಲಿ, ನಾವು ಸಿದ್ದ; ಆರೋಪ ಪ್ರತ್ಯಾರೋಪದ ಹೇಳಿಕೆಗಳು ಇಂದೇ ಕೊನೆಯಾಗಲಿ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಸವಾಲು

Date:

shubad-rao11

ಕಾರ್ಕಳ : ಪರಶುರಾಮನ ಪ್ರತಿಮೆ‌ ಕಂಚಿನಿಂದ ನಿರ್ಮಾಣ ಮಾಡದೆ ವಂಚಿಸಲಾಗಿದೆ, ಅದರ ಅರ್ಧ ಮೇಲ್ಭಾಗ ನಾಲ್ಕು ತಿಂಗಳ ಕಾಲ ಬೇರೆ ಸ್ಥಳದಲ್ಲಿ ಅಡಗಿಸಿಟ್ಟು ಓಳಸಂಚು ರೂಪಿಸಲಾಗಿತ್ತು ಎಂದು ವಂಚನೆ, ನಂಬಿಕೆ ದ್ರೋಹ, ಒಳಸಂಚು ಹಾಗೂ ಸಾಕ್ಷಿನಾಶ ಎಂಬ ಗಂಬೀರ ಆರೋಪ ಹೋರಿಸಿ ಪೋಲೀಸರು ನ್ಯಾಯಾಲಕ್ಕೆ ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದರಿಂದ ಪ್ರತಿಮೆಯ ನೈಜ್ಯತೆಯ ಬಗ್ಗೆ ಇರುವ ಗೊಂದಲಕ್ಕೆ ಸಾಕ್ಷೀ ಸಹಿತವಾದ ಉತ್ತರ ಸಿಕ್ಕಿದೆ. ಆದರೆ ಬಿಜೆಪಿ ಕೆಲ ನಾಯಕರು ಇನ್ನೂ ಸಮರ್ಥನೆ ಮಾಡುತ್ತಿದ್ದು ಇದು ಧರ್ಮ ದ್ರೋಹದ ಕೆಲಸವಾಗಿದೆ. ಅವರಿಗೆ ಇನ್ನೂ ಮಾನ ಉಳಿದಿದ್ದರೆ ಬೈಲೂರಿನ ಮಾರಿಗುಡಿಗೆ ಬಂದು ಪ್ರಮಾಣಿಸಲಿ ನಾವೂ ಸಿದ್ದರಿದ್ದೇವೆ ಎಂದು ಶುಭದರಾವ್ ಸವಾಲು ಹಾಕಿದ್ದಾರೆ.

ಪ್ರತಿಮೆ ಕಂಚಿನಿಂದಲೇ ಮಾಡಿದ್ದರೆ ವಂಚನೆ, ನಂಬಿಕೆ ದ್ರೋಹ, ಒಳಸಂಚು, ಮತ್ತು ಸಾಕ್ಷಿನಾಶದಂತಹ ಗಂಬೀರ ಆರೋಪಗಳು ಯಾಕೆ ಬರುತಿದ್ದವು? ಕೇವಲ ಒಂದು ಕಂಚಿನ ಪ್ರತಿಮೆ ನಿರ್ಮಾಣವಾಗಿದ್ದರೆ ಬೆಟ್ಟದ ಮೇಲೊಂದು ಠಾಣೆಯಲ್ಲಿ ಮತ್ತೊಂದು ಇರಲು ಹೇಗೆ ಸಾದ್ಯ? ಹಾಗೂ ಅದನ್ನು ಕಂಚಿನಿಂದಲೇ ಮಾಡಿದ್ದರೆ ರಾತ್ರಿ ಕಳ್ಳರ ಹಾಗೆ ಕೊಂಡೊಯ್ದು ನಾಲ್ಕು ತಿಂಗಳ ಕಾಲ ಅಡಗಿಸಿ ಇಡುವ ಅಗತ್ಯವಿತ್ತೇ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಡಗಿಸಿ ಇಡಲಾಗಿದ್ದ ಪ್ರತಿಮೆಯ ಮೇಲಿನ ಅರ್ಧ ಭಾಗ ಯಾವುದರಿಂದ ಮಾಡಲಾಗಿತ್ತು ಎನ್ನುವ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಸಾಕ್ಷಿ ನಾಶವೆಂದರೆ ಆ ಅರ್ಧ ಭಾಗ ಏನು ಮಾಡಲಾಗಿದೆ ಎನ್ನುವ ಬಗ್ಗೆಯೇ ಅಲ್ಲವೇ? ಅದು ಪತ್ತೆಯಾದರೆ ಅದರ ಸತ್ಯಾಸತ್ಯತೆ ಇನ್ನೂ ಆಶ್ಚರ್ಯಕರವಾಗಿರಬೇಕಲ್ಲವೇ?

ರಾಜ್ಯದ ಮುಖ್ಯಮಂತ್ರಿಗಳು ಅಂದು ಉದ್ಘಾಟಿಸಿದ್ದ ಪ್ರತಿಮೆ ಕಂಚಿನದ್ದು ಆಗಿರಲೇ ಇಲ್ಲ ಎನ್ನುವುದು ನಮ್ಮ ಆರೋಪವಾಗಿತ್ತು, ಈಗ ಅದೇ ಸತ್ಯವಾಗಿದೆ. ಬಿಜೆಪಿಯ ನಾಯಕರು ಅನಾವಶ್ಯಕ ಹೇಳಿಕೆಗಳನ್ನು ಕೊಡುವ ಬದಲು ಪ್ರತಿಮೆ ಕಂಚಿನದ್ದೇ ಎಂದು ದೃಡ ನಂಬಿಕೆ ಮತ್ತು ಧೈರ್ಯವಿದ್ದರೆ ಬೈಲೂರು ಮಾರಿಗುಡಿಗೆ ಬಂದು ಪ್ರಮಾಣಿಸಲಿ ನಾವು ಸಿದ್ದರಿದ್ದೇವೆ. ಪ್ರತಿಮೆ ಕಂಚಿನದ್ದು ಅಲ್ಲ ಪೈಬರ್ ಬಳಸಲಾಗಿತ್ತು ಎಂದು ನಾವು ಹೇಳಲು ಸಿದ್ದ. ಪ್ರತಿಮೆ‌ ಕಂಚಿನಿಂದಲೇ ಮಾಡಲಾಗಿತ್ತು ಪೈಬರ್ ಬಳಸಿಲ್ಲ ಎಂದು ದೇವರ ಮುಂದೆ ಹೇಳಲು ನೀವು ಸಿದ್ದರಿದ್ದೀರಾ? ಎಂದು ಸವಾಲು ಹಾಕಿದ್ದಾರೆ. ಎರಡು ವರ್ಷದಲ್ಲಿ ಪ್ರತಿಮೆ‌ ಕಂಚಿನದ್ದು ಅಲ್ಲವೆಂದು ಜಗತ್ತಿಗೆ ತಿಳಿಯಿತು. ಇನ್ನೂ ಸ್ವಲ ದಿನದಲ್ಲಿ ಉಳಿದ ಅರ್ಧ ಕಾಣೆಯಾದ ಪ್ರತಿಮೆ ಪೈಬರ್ ನಿಂದಲೇ ಮಾಡಲಾಗಿತ್ತು ಎನ್ನುವುದೂ ಸಾಬೀತಾಗುತ್ತದೆ ಎಂದರು. ಕಾರ್ಯಕರ್ತರ ಸಮಾದಾನಕ್ಕೆ ನೀಡುವ ಹೇಳಿಕೆಗಳಿಂದ ಸತ್ಯ ಬದಲಾಗುವುದಿಲ್ಲ. ಆದರೆ ಪ್ರಮಾಣದಿಂದ ಪ್ರತಿಮೆಯ ಬಗ್ಗೆ ಇರುವ ಆರೋಪ ಪ್ರತ್ಯಾರೋಪಗಳು ಇಂದೇ ಕೊನೆಯಾಗಲಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಸೈಬರ್ ಸೆಕ್ಯೂರಿಟಿ ಬಗೆಗಿನ ಸೆಂಟರ್ ಆಫ್ ಎಕ್ಸಲೆನ್ಸ್

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಅತ್ಯಾಧುನಿಕ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ಜಪಾನ್ ನ ವಿಲ್ ಡಿಸೈನ್ ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.

ಪಾಸ್‌ವರ್ಡ್ ಇಲ್ಲದೆ ಇನ್​ಸ್ಟಾಗ್ರಾಮ್‌ಗೆ ಲಾಗಿನ್ ಆಗುವುದು ಹೇಗೆ? ಇಲ್ಲಿದೆ ಸುಲಭ ಟ್ರಿಕ್

ಪದೇ ಪದೇ ಪಾಸ್‌ವರ್ಡ್ ನಮೂದಿಸಿ ಲಾಗಿನ್ ಆಗುವ ತಾಪತ್ರಯದಿಂದ ಮುಕ್ತಿ ನೀಡಲು, ಇನ್​ಸ್ಟಾಗ್ರಾಮ್ ಒಂದು ಉಪಯುಕ್ತ ಆಯ್ಕೆಯನ್ನು ಹೊಂದಿದೆ.

ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘದ ರಜತ ಪೂರ್ತಿ: ಲೋಕ ಕಲ್ಯಾಣಾರ್ಥ ದಶಾವತಾರ ಮಂತ್ರ ಹೋಮದ ಆಯೋಜನೆ

ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘ ಉಡುಪಿ ಇವರ ರಜತ ಪೂರ್ತಿ ಸಂಭ್ರಮದ ಸಂದರ್ಭದಲ್ಲಿ ಮನೆ , ಮಠ , ಮಂದಿರ , ದೇವಸ್ಥಾನದಲ್ಲಿ ನಮ್ಮ ಮನೆ , ಗೋವು , ನಮ್ಮ ಗ್ರಾಮ , ನಮ್ಮ ರಾಜ್ಯ , ರಾಷ್ಟ್ರದ ರಕ್ಷಣೆಗಾಗಿ ದಶಾವತಾರ ಮಂತ್ರ ಹೋಮವನ್ನು ಹಮ್ಮಿಕೊಳ್ಳಲಾಗಿದೆ.

ಹಿರಿಯಡ್ಕದ ಕೆಪಿಎಸ್ ತಂಡಕ್ಕೆ ಥ್ರೋ ಬಾಲ್‌ನಲ್ಲಿ ಪ್ರಥಮ ಸ್ಥಾನ: ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ತೋರಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹಿರಿಯಡ್ಕದ ವಿದ್ಯಾರ್ಥಿಗಳು, ಉಡುಪಿ ತಾಲ್ಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.