ಪರಶುರಾಮ ಪ್ರತಿಮೆ ಮರುಸ್ಥಾಪನೆ ಪಿಐಎಲ್‌: ಅರ್ಜಿದಾರ 5 ಲಕ್ಷ ರೂ. ಠೇವಣಿ ಇಡಲು ಹೈಕೋರ್ಟ್ ಸೂಚನೆ

Date:

spot_img
Parashurama_Theme_Park11

ಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರದ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ₹5 ಲಕ್ಷ ಠೇವಣಿ ಇರಿಸುವಂತೆ ಸೂಚಿಸಿದೆ.

ಪ್ರತಿಮೆ ನಿರ್ಮಾಣಕ್ಕೆ ನಿಮ್ಮ ವೈಯಕ್ತಿಕ ಕಾಣಿಕೆ ಏನು?

ಉಡುಪಿಯ ಉದಯ ಶೆಟ್ಟಿ ಮುನಿಯಾಲು ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಹಾಗೂ ನ್ಯಾಯಮೂರ್ತಿ ಸಿ.ಎಮ್. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರತಿಮೆ ನಿರ್ಮಾಣದಿಂದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂಬ ಅರ್ಜಿದಾರರ ವಾದಕ್ಕೆ, ನ್ಯಾಯಪೀಠವು, “ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ವಾದಿಸುತ್ತಿದ್ದೀರಿ. ಹಾಗಾದರೆ ಪ್ರತಿಮೆ ನಿರ್ಮಾಣಕ್ಕೆ ನಿಮ್ಮ ವೈಯಕ್ತಿಕ ಕಾಣಿಕೆ ಏನು?” ಎಂದು ಪ್ರಶ್ನಿಸಿತು.

muniyalu1

ನ್ಯಾಯಪೀಠದ ಪ್ರಶ್ನೆಗೆ ಅರ್ಜಿದಾರರ ವಕೀಲರು ₹5 ಲಕ್ಷ ಠೇವಣಿ ಇಡುವುದಾಗಿ ಸಮ್ಮತಿ ಸೂಚಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಈ ಮೊತ್ತವನ್ನು 2 ವಾರಗಳಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್‌ ಬಳಿ ಠೇವಣಿ ಇಡಬೇಕು ಎಂದು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿತು.

ಪರಶುರಾಮನನ್ನು ಕರಾವಳಿ ಪ್ರದೇಶದ ಸೃಷ್ಟಿಕರ್ತ ಎಂದು ನಂಬಲಾಗಿದ್ದು, ಈ ಪ್ರಕರಣ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.