ಪರ್ಕಳದಲ್ಲಿ ಮುಂಜಾನೆ ಮಂಜಿನಿಂದ ನಿಯಂತ್ರಣ ತಪ್ಪಿ ಅಯ್ಯಪ್ಪ ಭಕ್ತರ ವಾಹನಕ್ಕೆ ಕಾರು ಡಿಕ್ಕಿ

Date:

spot_img

ಉಡುಪಿ : ಪರ್ಕಳದ ಕೆನರಾ ಬ್ಯಾಂಕ್ ಸಮೀಪದ ತಿರುವಿನಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಚಾಲಕರೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.

ಪರ್ಕಳ ಪರಿಸರದಲ್ಲಿ ಇಂದು ಬೆಳಗ್ಗಿನ ಜಾವ ಅತಿಯಾದ ಮಂಜು ಕವಿದಿತ್ತು. ಹಿರಿಯಡಕ ಕಡೆಯಿಂದ ಉಡುಪಿ ಕಡೆಗೆ ವೇಗವಾಗಿ ಬರುತ್ತಿದ್ದ ಕಾರಿನ ಚಾಲಕನಿಗೆ ಮಂಜಿನ ಕಾರಣದಿಂದ ರಸ್ತೆಯ ತಿರುವು ಸರಿಯಾಗಿ ಗೋಚರಿಸಿಲ್ಲ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಬಲಬದಿಗೆ ನುಗ್ಗಿ, ಎದುರಿನಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ (TT) ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಗೊಳಗಾದ ಟಿಟಿ ವಾಹನದಲ್ಲಿ ತೆಲಂಗಾಣ ಮೂಲದ ಅಯ್ಯಪ್ಪ ಮಾಲೆಧಾರಿಗಳು ಪ್ರಯಾಣಿಸುತ್ತಿದ್ದರು. ಅವರು ಉಡುಪಿಯಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್ ವಾಹನದಲ್ಲಿದ್ದ ಭಕ್ತರೆಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಗಾಯಗೊಂಡ ಕಾರು ಚಾಲಕನನ್ನು ತಕ್ಷಣವೇ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಜು ಕವಿದ ಸಮಯದಲ್ಲಿ ಚಾಲಕರು ಹೆಚ್ಚಿನ ಜಾಗರೂಕತೆ ವಹಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.