spot_img

ಪೇಜಾವರ ಶ್ರೀಗಳಿಗೆ ಸನಾತನ ರತ್ನ ಬಿರುದು ಸಹಿತ ಸಂಮಾನ

Date:

ಆಂಧ್ರಪ್ರದೇಶದ ನೆಲ್ಲೂರಿನ ಪ್ರತಿಷ್ಠಿತ ಆದಿಶಂಕರ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಹಾಲಂಡಿನ ಮಹರ್ಷಿ ವೇದಿಕ್ ಯುನಿವರ್ಸಿಟಿ ಇವುಗಳ ವತಿಯಿಂದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸನಾತನ ರತ್ನ ಬಿರುದನ್ನಿತ್ತು ಸಂಮಾನಿಸಲಾಗಿದೆ‌.

ಪೆರಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನೆರವೇರಿದ ಭಕ್ತಿ ಸಿದ್ಧಾಂತೋತ್ಸವ ಮತ್ತು ರಾಮೋತ್ಸವದ ಧರ್ಮ ಸಭೆಯಲ್ಲಿ ಆದಿಶಂಕರ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ ವಂಕಿ ಪಂಚಾಲಯ್ಯ ದಂಪತಿಗಳು ಈ ಗೌರವವನ್ನು ಶ್ರೀಪಾದರಿ್ಗೆ ಸಮರ್ಪಿಸಿದರು.

ಶ್ರೀಗಳ ಸರಳತೆ , ವಿದ್ವತ್ತು , ಸನಾತನ ಧರ್ಮ ರಕ್ಷಣೆಗಾಗಿ ನಿರಂತರವಾಗಿ ದೇಶಾದ್ಯಂತ ಸಂಚರಿಸುತ್ತಾ ಜಾಗೃತಿಕಾರ್ಯ ನಡೆಸುತ್ತಿರುವುದು , ಹಿಂದು ವಿರೋಧಿ ಕೃತ್ಯಗಳ ವಿರುದ್ಧ ಧ್ವನಿ , ಗೋರಕ್ಷಣೆ , ಪೇಜಾವರ ನೂರಾರು ಸಂಸ್ಥೆಗಳ ಯಶಸ್ವಿ ನಿರ್ವಹಣೆ ಅಯೋಧ್ಯೆ ರಾಮ ಮಂದಿರದ ಟ್ರಸ್ಟಿಯಾಗಿ ಸಕ್ರಿಯ ಕರ್ತವ್ಯ ಮತ್ತು ರಾಮನ ಪ್ರತಿಷ್ಠಾಪನಾ ಕಾರ್ಯದಲ್ಲೂ ಮುಂಚೂಣಿಯ ಪಾತ್ರ ಹೀಗೆ ಸನಾತನ ಧರ್ಮ ಸಂರಕ್ಷಣೆಗಾಗಿ ಶ್ರೀಗಳು ನಡೆಸುತ್ತಿರುವ ಬಹುವಿಧದ ಕೈಂಕರ್ಯಗಳಿಗಾಗಿ ಈ ಗೌರರವನ್ನು ನೀಡಲಾಗಿದೆ ಎಂದು ಅಭಿವಂದನ ಬಿನ್ನ ವತ್ತಳೆಯಲ್ಲಿ ಉಲ್ಲೇಖಿಸಲಾಗಿದೆ . ಹಿರಿಯ ವಿದ್ವಾಂಸರಾದ ಎ ಹರಿದಾಸ ಭಟ್ , ಪ್ರದ್ಯುಮ್ನಾಚಾರ್ಯ ಜೋಷಿ ವೇಂಕಟೇಶಾಚಾರ್ಯ ಉಪಸ್ಥಿತರಿದ್ದರು . ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

ಸದ್ರಿ ಸಂಸ್ಥೆಯ ಅಧೀನದಲ್ಲಿರುವ ನೆಲ್ಲೂರು ಸಮೀಪದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಗುಡಿಯಲ್ಲಿ ಇತ್ತೀಚೆಗೆ ಶ್ರೀಗಳು ಶ್ರೀ ವೇಂಕಟೇಶ್ವರ ಸ್ವಾಮಿಯ ಪ್ರಾಣಪ್ರತಿಷ್ಠೆಯನ್ನು ನೆರವೇರಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನಕ್ಕೆ ಒಂದು ಲೋಟ ಹಾಲು: ಆರೋಗ್ಯಕ್ಕೆ ಹತ್ತಿರದ ಅಮೃತ!

ಅತ್ಯಮೂಲ್ಯ ಪೋಷಕಾಂಶಗಳಿಂದ ತುಂಬಿರುವ ಹಾಲು, ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಅಮೃತತುಲ್ಯ ಪಾನೀಯ.

ಗರ್ಭಿಣಿ ಹಸುವನ್ನು ಕೊಂದು, ಕರುವನ್ನು ಚೀಲದಲ್ಲಿ ಎಸೆದ ಅಮಾನವೀಯತೆ: ಭಟ್ಕಳದಲ್ಲಿ ಆರೋಪಿ ಬಂಧನ

ಗರ್ಭಿಣಿ ಹಸುವನ್ನು ಕ್ರೂರವಾಗಿ ಕೊಂದು, ಅದರ ಹೊಟ್ಟೆಯಲ್ಲಿ ಇದ್ದ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂಧನ ಬೆಲೆ ಏರಿಕೆ ಖಂಡಿಸಿ ಎ.26ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ: ಅನುಮಾನಾಸ್ಪದ ಸಾವು!

ಧಾರ್ಮಿಕ ಹಾಗೂ ಪ್ರವಾಸಿ ತಾಣವಿರುವ ಕುಂದಾದ್ರಿ ಬೆಟ್ಟದ ಮೆಟ್ಟಿಲು ರಸ್ತೆಯ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯ ಮಾನವ ದೇಹವೊಂದು ಪತ್ತೆಯಾಗಿದೆ. ಈ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.