spot_img

ಪೇಜಾವರ ಶ್ರೀಗಳಿಗೆ ಸನಾತನ ರತ್ನ ಬಿರುದು ಸಹಿತ ಸಂಮಾನ

Date:

spot_img

ಆಂಧ್ರಪ್ರದೇಶದ ನೆಲ್ಲೂರಿನ ಪ್ರತಿಷ್ಠಿತ ಆದಿಶಂಕರ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಹಾಲಂಡಿನ ಮಹರ್ಷಿ ವೇದಿಕ್ ಯುನಿವರ್ಸಿಟಿ ಇವುಗಳ ವತಿಯಿಂದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸನಾತನ ರತ್ನ ಬಿರುದನ್ನಿತ್ತು ಸಂಮಾನಿಸಲಾಗಿದೆ‌.

ಪೆರಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನೆರವೇರಿದ ಭಕ್ತಿ ಸಿದ್ಧಾಂತೋತ್ಸವ ಮತ್ತು ರಾಮೋತ್ಸವದ ಧರ್ಮ ಸಭೆಯಲ್ಲಿ ಆದಿಶಂಕರ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ ವಂಕಿ ಪಂಚಾಲಯ್ಯ ದಂಪತಿಗಳು ಈ ಗೌರವವನ್ನು ಶ್ರೀಪಾದರಿ್ಗೆ ಸಮರ್ಪಿಸಿದರು.

ಶ್ರೀಗಳ ಸರಳತೆ , ವಿದ್ವತ್ತು , ಸನಾತನ ಧರ್ಮ ರಕ್ಷಣೆಗಾಗಿ ನಿರಂತರವಾಗಿ ದೇಶಾದ್ಯಂತ ಸಂಚರಿಸುತ್ತಾ ಜಾಗೃತಿಕಾರ್ಯ ನಡೆಸುತ್ತಿರುವುದು , ಹಿಂದು ವಿರೋಧಿ ಕೃತ್ಯಗಳ ವಿರುದ್ಧ ಧ್ವನಿ , ಗೋರಕ್ಷಣೆ , ಪೇಜಾವರ ನೂರಾರು ಸಂಸ್ಥೆಗಳ ಯಶಸ್ವಿ ನಿರ್ವಹಣೆ ಅಯೋಧ್ಯೆ ರಾಮ ಮಂದಿರದ ಟ್ರಸ್ಟಿಯಾಗಿ ಸಕ್ರಿಯ ಕರ್ತವ್ಯ ಮತ್ತು ರಾಮನ ಪ್ರತಿಷ್ಠಾಪನಾ ಕಾರ್ಯದಲ್ಲೂ ಮುಂಚೂಣಿಯ ಪಾತ್ರ ಹೀಗೆ ಸನಾತನ ಧರ್ಮ ಸಂರಕ್ಷಣೆಗಾಗಿ ಶ್ರೀಗಳು ನಡೆಸುತ್ತಿರುವ ಬಹುವಿಧದ ಕೈಂಕರ್ಯಗಳಿಗಾಗಿ ಈ ಗೌರರವನ್ನು ನೀಡಲಾಗಿದೆ ಎಂದು ಅಭಿವಂದನ ಬಿನ್ನ ವತ್ತಳೆಯಲ್ಲಿ ಉಲ್ಲೇಖಿಸಲಾಗಿದೆ . ಹಿರಿಯ ವಿದ್ವಾಂಸರಾದ ಎ ಹರಿದಾಸ ಭಟ್ , ಪ್ರದ್ಯುಮ್ನಾಚಾರ್ಯ ಜೋಷಿ ವೇಂಕಟೇಶಾಚಾರ್ಯ ಉಪಸ್ಥಿತರಿದ್ದರು . ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

ಸದ್ರಿ ಸಂಸ್ಥೆಯ ಅಧೀನದಲ್ಲಿರುವ ನೆಲ್ಲೂರು ಸಮೀಪದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಗುಡಿಯಲ್ಲಿ ಇತ್ತೀಚೆಗೆ ಶ್ರೀಗಳು ಶ್ರೀ ವೇಂಕಟೇಶ್ವರ ಸ್ವಾಮಿಯ ಪ್ರಾಣಪ್ರತಿಷ್ಠೆಯನ್ನು ನೆರವೇರಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಬನ್ನಂಜೆ ಗೋವಿಂದಾಚಾರ್ಯರ 90ನೇ ಜನ್ಮ ವರ್ಷಾಚರಣೆಗೆ ವಿಜೃಂಭಣೆಯ ಚಾಲನೆ; ಗಣ್ಯರಿಂದ ನಮನ

ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರ 90ನೇ ಜನ್ಮ ವರ್ಷಾಚರಣೆಗೆ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಶನಿವಾರ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ರಾಮನಗರ ಜಿಲ್ಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ವರಮಹಾಲಕ್ಷ್ಮಿ ಪೂಜೆ ಆಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್)ದ ರಾಮನಗರ ಘಟಕದ ವತಿಯಿಂದ ವರಮಹಾಲಕ್ಷ್ಮಿ ಪೂಜೆಯನ್ನು ಜಿಲ್ಲಾ ಕಚೇರಿಯಲ್ಲಿ ಭವ್ಯವಾಗಿ ಆಚರಿಸಲಾಯಿತು.

ನಟ ಅನಿರುದ್ಧ್ ವಿಷಾದ: “ವಿಷ್ಣುವರ್ಧನ್ ಸ್ಮಾರಕ ಧ್ವಂಸ ನಮ್ಮ ಕುಟುಂಬಕ್ಕೂ ಬೇಸರ ತಂದಿದೆ”

ದಿವಂಗತ ನಟ ಡಾ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರಿಗೆ ಆಘಾತ ತಂದಿರುವ ಅಭಿಮಾನ್ ಸ್ಟುಡಿಯೋದಲ್ಲಿನ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಹಾಗೂ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಅವರು ಸ್ಪಷ್ಟನೆ ನೀಡಿದ್ದಾರೆ

ಪ್ರಧಾನಿ ಮೋದಿ ಬೆಂಗಳೂರಿಗೆ: ವಂದೇ ಭಾರತ್ ರೈಲು ಸೇವೆಗೆ ಚಾಲನೆ, ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆಗಸ್ಟ್ 10) ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ರಾಜ್ಯದ ರಾಜಧಾನಿಯಲ್ಲಿ ಹಲವಾರು ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ