spot_img

ಪೆರ್ಡೂರು ದೇವಸ್ಥಾನದ ನಗಾರಿ ಗೋಪುರ ಮರುನಿರ್ಮಾಣಕ್ಕೆ ಅಡೆತಡೆ ನಿವಾರಣೆ: ಶಿಲಾನ್ಯಾಸಕ್ಕೆ ಹೈಕೋರ್ಟ್ ಅನುಮತಿ

Date:

spot_img

ಉಡುಪಿ: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ನಗಾರಿ ಗೋಪುರವನ್ನು ಮರುನಿರ್ಮಾಣ ಮಾಡುವ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ಜುಲೈ 13 ರಂದು ಇಂದು ಶಿಲಾನ್ಯಾಸ ನಡೆಯುತ್ತಿದೆ. ಭಕ್ತಾದಿಗಳು ಯಾವುದೇ ರಾಜಕೀಯ ಉದ್ದೇಶಗಳನ್ನು ಬದಿಗಿಟ್ಟು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಮೋದ್ ರೈ ಪಳಜೆ ಮನವಿ ಮಾಡಿದ್ದಾರೆ.

ದೇವಸ್ಥಾನದ ನಗಾರಿ ಉಪ್ಪರಿಗೆಯು ಶಿಥಿಲಾವಸ್ಥೆಯಲ್ಲಿದ್ದ ಕಾರಣ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ಭಕ್ತರ ಕೋರಿಕೆಯ ಮೇರೆಗೆ ಸಮಿತಿಯು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿತ್ತು. ಲೋಕೋಪಯೋಗಿ ಇಲಾಖೆಯು ಈ ಕಟ್ಟಡ ಬಳಕೆಗೆ ಯೋಗ್ಯವಲ್ಲ ಎಂದು ವರದಿ ನೀಡಿತ್ತು. ಈ ವರದಿ ಆಧಾರದ ಮೇಲೆ, ಜಿಲ್ಲಾಧಿಕಾರಿಗಳ ಆದೇಶದಂತೆ ಭಕ್ತರ ಸಹಕಾರದೊಂದಿಗೆ ನಗಾರಿ ಗೋಪುರವನ್ನು ತೆರವುಗೊಳಿಸಲಾಗಿತ್ತು. ಈಗ ನಗಾರಿ ಗೋಪುರದ ಮರುನಿರ್ಮಾಣಕ್ಕೆ ಅಗತ್ಯ ವಿನ್ಯಾಸವನ್ನು ತಯಾರಿಸಿ, ಇಲಾಖೆಯ ಅನುಮತಿ ಪಡೆದು ಇಂದು ಶಿಲಾನ್ಯಾಸ ನಡೆಯುತ್ತಿದೆ.

ಈ ನಡುವೆ, ಜೂನ್ 30 ರಂದು ಸುರೇಶ್ ಸೇರ್ವೆಗಾರ್, ಲಾಲಾಜಿ ಮೆಂಡನ್, ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರು ರತ್ನಾಕರ ಹೆಗ್ಡೆ, ಜಿಯಾನಂದ ಹೆಗ್ಡೆ, ವಿದ್ಯಾಧರ ಶೆಟ್ಟಿ, ಸುಧಾಕರ ಶೆಟ್ಟಿ, ದೇವು ಪೂಜಾರಿ, ಶಂಭು ಶಂಕರ ಶೆಟ್ಟಿ ಇವರು ಜಿಲ್ಲಾಧಿಕಾರಿಗಳ ಆದೇಶ ಮತ್ತು ಜುಲೈ 13 ರ ಕಾರ್ಯಕ್ರಮಕ್ಕೆ ತಡೆ ನೀಡುವಂತೆ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದರ ಪರಿಣಾಮವಾಗಿ, ನ್ಯಾಯಾಲಯವು ತಾತ್ಕಾಲಿಕವಾಗಿ ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಗೊಳಿಸುವಂತೆ ದೇವಸ್ಥಾನದ ಸಮಿತಿಯು ವಕೀಲ ಬಿಪಿನ್ ಹೆಗ್ಡೆ ಮೂಲಕ ಉಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ.

ಜುಲೈ 8 ರಂದು ನ್ಯಾಯಾಲಯವು ಮಧ್ಯಂತರ ಆದೇಶ ನೀಡಿ, ಭಕ್ತರೆಲ್ಲರೂ ಸೇರಿ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಅನುಮತಿ ನೀಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರು ರೈತರ ಆತ್ಮಹತ್ಯೆ

ಕಳೆದ 24 ಗಂಟೆಗಳ ಅಂತರದಲ್ಲಿ ಸಂಭವಿಸಿದ ಈ ದುರಂತಗಳು ಗ್ರಾಮದಲ್ಲಿ ತೀವ್ರ ಆತಂಕ ಮತ್ತು ಶೋಕದ ವಾತಾವರಣವನ್ನು ಸೃಷ್ಟಿಸಿವೆ.

ಬೈಂದೂರು: ಅಕ್ರಮ ಗೋ ಸಾಗಾಟ ಜಾಲ ಭೇದನೆ, ಇಬ್ಬರ ಬಂಧನ, 4 ಜಾನುವಾರುಗಳ ರಕ್ಷಣೆ

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚಾಗಿದ್ದ ಜಾನುವಾರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಗಳು ಕಾರ್ಯಾಚರಣೆಗಿಳಿದು ಪ್ರಮುಖ ಯಶಸ್ಸು ಸಾಧಿಸಿವೆ

ಕಿನ್ನಿಗೋಳಿ: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ, ಉದ್ಯಮಿ ರಾಕೀ ಪಿಂಟೋ ಸೆರೆ

ಕಿನ್ನಿಗೋಳಿ ಪ್ರದೇಶದಲ್ಲಿ ಸಂಚಲನ ಮೂಡಿಸಿರುವ ಪ್ರಕರಣವೊಂದರಲ್ಲಿ, ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಕಿನ್ನಿಗೋಳಿಯ ಪಿಂಟೋ ಗಾರ್ಡನ್ ಮಾಲೀಕ, ಉದ್ಯಮಿ ರಾಕೀ ಪಿಂಟೋ (68) ಅವರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.

ಯುಪಿಐ ವಹಿವಾಟು: ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ಸ್ಪಷ್ಟನೆ- ವಾರ್ಷಿಕ 40 ಲಕ್ಷ ರೂ. ಮೀರಿದರೆ ನೋಂದಣಿ ಕಡ್ಡಾಯ!

ನಿಮ್ಮ ವಾರ್ಷಿಕ ವಹಿವಾಟು 40 ಲಕ್ಷ ರೂಪಾಯಿಗಳನ್ನು ಮೀರಿದರೆ ಸರಕು ಮತ್ತು ಸೇವಾ ತೆರಿಗೆ (GST) ನೋಂದಣಿ ಕಡ್ಡಾಯವಾಗುತ್ತದೆ ಎಂದು ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.