ಪೆರ್ಡೂರು ದೇವಸ್ಥಾನದ ನಗಾರಿ ಗೋಪುರ ಮರುನಿರ್ಮಾಣಕ್ಕೆ ಅಡೆತಡೆ ನಿವಾರಣೆ: ಶಿಲಾನ್ಯಾಸಕ್ಕೆ ಹೈಕೋರ್ಟ್ ಅನುಮತಿ

Date:

spot_img

ಉಡುಪಿ: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ನಗಾರಿ ಗೋಪುರವನ್ನು ಮರುನಿರ್ಮಾಣ ಮಾಡುವ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ಜುಲೈ 13 ರಂದು ಇಂದು ಶಿಲಾನ್ಯಾಸ ನಡೆಯುತ್ತಿದೆ. ಭಕ್ತಾದಿಗಳು ಯಾವುದೇ ರಾಜಕೀಯ ಉದ್ದೇಶಗಳನ್ನು ಬದಿಗಿಟ್ಟು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಮೋದ್ ರೈ ಪಳಜೆ ಮನವಿ ಮಾಡಿದ್ದಾರೆ.

ದೇವಸ್ಥಾನದ ನಗಾರಿ ಉಪ್ಪರಿಗೆಯು ಶಿಥಿಲಾವಸ್ಥೆಯಲ್ಲಿದ್ದ ಕಾರಣ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ಭಕ್ತರ ಕೋರಿಕೆಯ ಮೇರೆಗೆ ಸಮಿತಿಯು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿತ್ತು. ಲೋಕೋಪಯೋಗಿ ಇಲಾಖೆಯು ಈ ಕಟ್ಟಡ ಬಳಕೆಗೆ ಯೋಗ್ಯವಲ್ಲ ಎಂದು ವರದಿ ನೀಡಿತ್ತು. ಈ ವರದಿ ಆಧಾರದ ಮೇಲೆ, ಜಿಲ್ಲಾಧಿಕಾರಿಗಳ ಆದೇಶದಂತೆ ಭಕ್ತರ ಸಹಕಾರದೊಂದಿಗೆ ನಗಾರಿ ಗೋಪುರವನ್ನು ತೆರವುಗೊಳಿಸಲಾಗಿತ್ತು. ಈಗ ನಗಾರಿ ಗೋಪುರದ ಮರುನಿರ್ಮಾಣಕ್ಕೆ ಅಗತ್ಯ ವಿನ್ಯಾಸವನ್ನು ತಯಾರಿಸಿ, ಇಲಾಖೆಯ ಅನುಮತಿ ಪಡೆದು ಇಂದು ಶಿಲಾನ್ಯಾಸ ನಡೆಯುತ್ತಿದೆ.

ಈ ನಡುವೆ, ಜೂನ್ 30 ರಂದು ಸುರೇಶ್ ಸೇರ್ವೆಗಾರ್, ಲಾಲಾಜಿ ಮೆಂಡನ್, ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರು ರತ್ನಾಕರ ಹೆಗ್ಡೆ, ಜಿಯಾನಂದ ಹೆಗ್ಡೆ, ವಿದ್ಯಾಧರ ಶೆಟ್ಟಿ, ಸುಧಾಕರ ಶೆಟ್ಟಿ, ದೇವು ಪೂಜಾರಿ, ಶಂಭು ಶಂಕರ ಶೆಟ್ಟಿ ಇವರು ಜಿಲ್ಲಾಧಿಕಾರಿಗಳ ಆದೇಶ ಮತ್ತು ಜುಲೈ 13 ರ ಕಾರ್ಯಕ್ರಮಕ್ಕೆ ತಡೆ ನೀಡುವಂತೆ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದರ ಪರಿಣಾಮವಾಗಿ, ನ್ಯಾಯಾಲಯವು ತಾತ್ಕಾಲಿಕವಾಗಿ ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಗೊಳಿಸುವಂತೆ ದೇವಸ್ಥಾನದ ಸಮಿತಿಯು ವಕೀಲ ಬಿಪಿನ್ ಹೆಗ್ಡೆ ಮೂಲಕ ಉಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ.

ಜುಲೈ 8 ರಂದು ನ್ಯಾಯಾಲಯವು ಮಧ್ಯಂತರ ಆದೇಶ ನೀಡಿ, ಭಕ್ತರೆಲ್ಲರೂ ಸೇರಿ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಅನುಮತಿ ನೀಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.