spot_img

ಕೊರೊನಾ ಸೋಂಕಿನಿಂದ ಪೀಟರ್ ಮಥಾಯಸ್ ನಿಧನ: ತಹಶೀಲ್ದಾರ್ ಭೇಟಿನೀಡಿ ಸಾಂತ್ವನ

Date:

spot_img

ಉಡುಪಿ: ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಮಥಾಯಸ್ (65) ಅವರು ಕೋವಿಡ್-19 ಪಾಸಿಟಿವ್ ದೃಢಪಟ್ಟ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೂನ್ 2 ರಂದು ನಿಧನರಾದರು.

ಮೃತರು ಕರುಳಿನ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಮೇ 29ರಂದು ಉಲ್ಬಣವಾದ ರಕ್ತದೊತ್ತಡಕ್ಕೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಘಟನೆ ಹಿನ್ನೆಲೆ ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಜೂನ್ 3 ರಂದು ಮೃತರ ಮನೆಯವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅವರಿಗೇನೂ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲವೆಂದು ವೈದ್ಯರು ತಿಳಿಸಿದರು.

ಅಂತ್ಯಕ್ರಿಯೆಯನ್ನು ಜೂನ್ 6ರಂದು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ನೆರವೇರಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

ತಾಲೂಕು ವೈದ್ಯಾಧಿಕಾರಿ ಡಾ. ವಾಸುದೇವ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಡಾ. ಸುಬ್ರಹ್ಮಣ್ಯ ರಾವ್, ಡಾ. ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ ಹಾಗೂ ಗ್ರಾಮ ಆಡಳಿತಾಧಿಕಾರಿ ಪ್ರದೀಪ್ ಮೊದಲಾದವರು ಮನೆಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇಂಟೆಲ್‌ನ ಕೋರ್ 5 120 ಮತ್ತು 120F: ಹಳೆಯ ವಾಸ್ತುಶಿಲ್ಪ, ಹೊಸ ಲೇಬಲ್, ಹೆಚ್ಚಿನ ಬೆಲೆ

ಇಂಟೆಲ್ ತನ್ನ ಹೊಸ Core5 120U ಮತ್ತು 120F ಪ್ರೊಸೆಸರ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳು ಇಂಟೆಲ್‌ನ ಹೊಸ 'ಸರಣಿ 1' ಹೆಸರಿನಲ್ಲಿ ಬಿಡುಗಡೆಯಾಗಿದ್ದರೂ, ಇದರ ವಾಸ್ತುಶಿಲ್ಪವು ಹಳೆಯ ರಾಪ್ಟರ್ ಲೇಕ್ ಮತ್ತು ಆಲ್ಡರ್ ಲೇಕ್ ವಿನ್ಯಾಸಗಳನ್ನು ಆಧರಿಸಿದೆ. ಇದು ತಂತ್ರಜ್ಞಾನ ತಜ್ಞರ ಹಾಗೂ ಗ್ರಾಹಕರ ಗಮನ ಸೆಳೆದಿದೆ.

ಪ್ರತಿದಿನ ಬೆಳಿಗ್ಗೆ ತುಪ್ಪ ಬೆರೆಸಿದ ಬಿಸಿ ನೀರು ಕುಡಿದರೆ ಇಷ್ಟೆಲ್ಲಾ ಲಾಭ: ಆರೋಗ್ಯ ತಜ್ಞರಿಂದ ಸಲಹೆ

ಬಿಸಿನೀರಿಗೆ ಅರ್ಧ ಚಮಚ ತುಪ್ಪ ಬೆರೆಸಿ ಕುಡಿಯುವುದರಿಂದ ಇನ್ನಷ್ಟು ಉತ್ತಮ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿದಂತೆ 6 ಮಂದಿ ಸಾವು

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.

ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.