“ಶ್ರೀರಾಮನ ಆದರ್ಶದಂತೆ ನಡೆದಿದ್ದೇವೆ”: ನಾಗರಿಕರಿಗೆ ಪತ್ರ ಬರೆದ ಪ್ರಧಾನಿ ಮೋದಿ; ಆಪರೇಷನ್ ಸಿಂದೂರ್ ಉಲ್ಲೇಖ

Date:

spot_img

ಹೊಸದಿಲ್ಲಿ: ದೀಪಾವಳಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಅ.21) ನಾಗರಿಕರಿಗೆ ಪತ್ರ ಬರೆದಿದ್ದು, ಈ ವರ್ಷದ ಹಬ್ಬವನ್ನು ರಾಷ್ಟ್ರೀಯ ಸಾಧನೆಗಳ ದೃಷ್ಟಿಯಿಂದ ವಿಶೇಷವೆಂದು ಬಣ್ಣಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಮೇ 7 ರಿಂದ 10 ರವರೆಗೆ ನಡೆಸಲಾದ ಆಪರೇಷನ್ ಸಿಂದೂರ್ (Operation Sindoor) ಕಾರ್ಯಾಚರಣೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, “ಆಪರೇಷನ್ ಸಿಂದೂರ ಸಮಯದಲ್ಲಿ ನಾವು ಇದರ ಜೀವಂತ ಉದಾಹರಣೆಯನ್ನು ನೋಡಿದ್ದೇವೆ. ಭಾರತವು ಸದಾಚಾರವನ್ನು ಎತ್ತಿಹಿಡಿದಿದ್ದು ಮಾತ್ರವಲ್ಲದೆ ಅನ್ಯಾಯಕ್ಕೆ ಪ್ರತೀಕಾರ ತೀರಿಸಿಕೊಂಡಿತು,” ಎಂದು ಹೇಳಿದರು.

“ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ನಿರ್ಮಾಣದ ನಂತರದ ಎರಡನೇ ದೀಪಾವಳಿ ಇದು. ಶ್ರೀರಾಮನು ನಮಗೆ ಸದಾಚಾರವನ್ನು ಎತ್ತಿಹಿಡಿಯಲು ಕಲಿಸುತ್ತಾನೆ; ಅನ್ಯಾಯದ ವಿರುದ್ಧ ಹೋರಾಡಲು ಧೈರ್ಯವನ್ನು ನೀಡುತ್ತಾನೆ,” ಎಂದು ಪತ್ರದಲ್ಲಿ ಬರೆದಿದ್ದಾರೆ.

ನಕ್ಸಲಿಸಂ ನಿರ್ಮೂಲನೆಯಿಂದ ಈ ದೀಪಾವಳಿ ವಿಶೇಷ

ಈ ವರ್ಷದ ದೀಪಾವಳಿಯು ವಿಶೇಷವಾಗಿದೆ ಎಂದು ಹೇಳಿದ ಪಿಎಂ ಮೋದಿ, ಅದಕ್ಕೆ ಕಾರಣವನ್ನು ತಿಳಿಸಿದರು: “ಮೊದಲ ಬಾರಿಗೆ, ತೀರ ಒಳನಾಡಿನ ಪ್ರದೇಶಗಳು ಸೇರಿದಂತೆ ದೇಶಾದ್ಯಂತ ಅನೇಕ ಜಿಲ್ಲೆಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ. ನಕ್ಸಲಿಸಂ ಮತ್ತು ಮಾವೋವಾದಿ ಭಯೋತ್ಪಾದನೆಯನ್ನು ಬೇರು ಸಮೇತ ನಿರ್ಮೂಲನೆ ಮಾಡಿದ ಜಿಲ್ಲೆಗಳು ಇವು.”

“ಇತ್ತೀಚಿನ ದಿನಗಳಲ್ಲಿ, ನಮ್ಮ ದೇಶದ ಸಂವಿಧಾನದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸಿ, ಹಿಂಸಾಚಾರದ ಮಾರ್ಗವನ್ನು ತ್ಯಜಿಸಿ ಅಭಿವೃದ್ಧಿಯ ಮುಖ್ಯವಾಹಿನಿಗೆ ಸೇರುವ ಅನೇಕ ವ್ಯಕ್ತಿಗಳನ್ನು ನಾವು ನೋಡಿದ್ದೇವೆ. ಇದು ರಾಷ್ಟ್ರದ ಒಂದು ಪ್ರಮುಖ ಸಾಧನೆಯಾಗಿದೆ,” ಎಂದು ಅವರು ಅಭಿಪ್ರಾಯಪಟ್ಟರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.