ಪೋಕ್ಸೋ ಕೇಸ್: 23 ವರ್ಷ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಪರಾಧಿ ಪರಾರಿ!

Date:

spot_img
court

ಕೊಲ್ಲಂ (ಕೇರಳ): ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯವು ಶಿಕ್ಷೆಯ ಪ್ರಮಾಣ ಪ್ರಕಟಿಸುತ್ತಿದ್ದಂತೆಯೇ ಜೈಲು ಕಟಕಟೆಯಲ್ಲಿದ್ದ ಅಪರಾಧಿಯೊಬ್ಬ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಶಾಲಾ ಬಾಲಕಿಯನ್ನು ಅಪಹರಿಸಿ ನಿರಂತರ ಅತ್ಯಾಚಾರ ಎಸಗಿದ್ದ ಸಿರಾಜುಲ್ ಹಕ್ ಎಂಬಾತನೇ ಪೊಲೀಸರ ಕಣ್ಣುತಪ್ಪಿಸಿ ಪರಾರಿಯಾದ ದೋಷಿ. ಕರುನಾಗಪಲ್ಲಿಯ ಪೋಕ್ಸೋ ತ್ವರಿತಗತಿ ನ್ಯಾಯಾಲಯವು ಈತನಿಗೆ 23 ವರ್ಷಗಳ ಸುದೀರ್ಘ ಜೈಲು ಶಿಕ್ಷೆ ಮತ್ತು 2,10,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡುವ ಸಂದರ್ಭದಲ್ಲೇ ಈ ಘಟನೆ ಸಂಭವಿಸಿದೆ.

ಮೈನಾಂಗಪಲ್ಲಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಿರಾಜುಲ್ ಹಕ್, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಆಕೆ ತನ್ನ ಪತ್ನಿ ಎಂದು ಸುಳ್ಳು ಹೇಳಿ ದೌರ್ಜನ್ಯ ಎಸಗಿದ್ದನು. ಬಾಲಕಿಯ ಪೋಷಕರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಈತನನ್ನು ಶಾಸ್ತಾಂಕೋಟ ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದ ಈತನನ್ನು ವಿಚಾರಣೆಗಾಗಿ ಪೊಲೀಸರು ಕೋರ್ಟ್‌ಗೆ ಕರೆತಂದಿದ್ದರು. ನ್ಯಾಯಾಧೀಶರು ತೀರ್ಪು ಓದುತ್ತಿದ್ದಾಗ ಎಲ್ಲರ ಗಮನ ನ್ಯಾಯಪೀಠದ ಕಡೆ ಇದ್ದದ್ದನ್ನು ಬಳಸಿಕೊಂಡ ಅಪರಾಧಿ, ಕ್ಷಣಾರ್ಧದಲ್ಲಿ ನ್ಯಾಯಾಲಯದ ಆವರಣದಿಂದ ನಾಪತ್ತೆಯಾಗಿದ್ದಾನೆ. ಪೊಲೀಸರು ತಮ್ಮ ತನಿಖೆಗೆ ಜಯ ಸಿಕ್ಕಿತು ಎಂದು ಸಂಭ್ರಮಿಸುವಷ್ಟರಲ್ಲೇ ಅಪರಾಧಿ ಕೈಕೊಟ್ಟಿದ್ದು, ಸದ್ಯ ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ