spot_img

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: 10 ದಿನಗಳಲ್ಲಿ ಜಾಮೀನು ಅರ್ಜಿ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ!

Date:

spot_img

ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಮಾಜಿ ಸಂಸದರಾಗಿರುವ ಪ್ರಜ್ವಲ್ ರೇವಣ್ಣ, ಹೊಳೆನರಸೀಪುರದ ತಮ್ಮ ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಗೊಳಿಸಿದೆ.

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ (ವಿಚಾರಣಾಧೀನ ನ್ಯಾಯಾಲಯ) ಸಲ್ಲಿಸುವಂತೆ ಸೂಚನೆ ನೀಡಿದೆ. ಅಷ್ಟೇ ಅಲ್ಲದೆ, ಪ್ರಜ್ವಲ್ ರೇವಣ್ಣ ಸಲ್ಲಿಸುವ ಜಾಮೀನು ಅರ್ಜಿಯನ್ನು 10 ದಿನಗಳೊಳಗೆ ಇತ್ಯರ್ಥಪಡಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಹೈಕೋರ್ಟ್‌ನ ಈ ನಿರ್ದೇಶನ ಪ್ರಜ್ವಲ್ ರೇವಣ್ಣಗೆ ಸಣ್ಣಮಟ್ಟಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಯಾಕೆಂದರೆ, ಅವರ ಜಾಮೀನು ಅರ್ಜಿ ವಿಚಾರಣೆ ಪದೇ ಪದೇ ಮುಂದೂಡಲ್ಪಡುತ್ತಿತ್ತು. ಇದೀಗ 10 ದಿನಗಳಲ್ಲಿಯೇ ತೀರ್ಮಾನ ಕೈಗೊಳ್ಳಲು ಸೂಚಿಸಿರುವುದರಿಂದ, ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಗುವ ಭರವಸೆ ಮೂಡಿದೆ. ಮುಂದಿನ ಹತ್ತು ದಿನಗಳಲ್ಲಿ ಜಾಮೀನು ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಲಿದೆ.

ಕಳೆದ ವರ್ಷ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್‌ಗಳು ಹಾಸನದಲ್ಲಿ ಭಾರೀ ಸಂಚಲನ ಮೂಡಿಸಿದ್ದವು. ಈ ಘಟನೆಯ ಬಳಿಕ ಪ್ರಜ್ವಲ್ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದರು. ಅಂತಿಮವಾಗಿ ಸ್ವತಃ ವಾಪಸಾದ ಪ್ರಜ್ವಲ್ ಪೊಲೀಸರಿಗೆ ಶರಣಾಗಿ ವಿಚಾರಣೆಗೆ ಒಳಪಟ್ಟಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹೊಸನಗರ: ಚಕ್ರಾ ಜಲಪಾತಕ್ಕೆ ಅಕ್ರಮ ಪ್ರವೇಶ, ಪ್ರವಾಸಿಗರಿಗೆ ಕಾದಿದೆ ಗಂಡಾಂತರ!

ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ಚಕ್ರಾ ಜಲಾಶಯದ ಸಮೀಪವಿರುವ ಅಪೂರ್ವ ಚಕ್ರಾ ಜಲಪಾತವೂ ಇಂತಹ ರಮಣೀಯ ಆದರೆ ಅಪಾಯಕಾರಿ ತಾಣಗಳಲ್ಲಿ ಒಂದು.

ಮಂಗಳೂರಲ್ಲಿ ಹೆಬ್ಬಾವು ಮಾರಾಟ ಜಾಲ ಭೇದಿಸಿದ ಅರಣ್ಯ ಇಲಾಖೆ: 4 ಆರೋಪಿಗಳ ಬಂಧನ

ಖಚಿತ ಮಾಹಿತಿ ಆಧರಿಸಿ ಮಂಗಳೂರಿನಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹೆಬ್ಬಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

₹200 ಕೋಟಿ ವಂಚನೆ: ‘ಮದ್ಯದ ದೊರೆ’ ರೋಹನ್ ಸಲ್ಡಾನಾ ಅಂದರ್!

ಕೋಟ್ಯಂತರ ರೂಪಾಯಿ ಸಾಲದ ಆಮಿಷವೊಡ್ಡಿ ದೇಶಾದ್ಯಂತದ ಉದ್ಯಮಿಗಳಿಗೆ ಸುಮಾರು ₹200 ಕೋಟಿಗೂ ಅಧಿಕ ಹಣ ವಂಚಿಸಿದ್ದ ಕುಖ್ಯಾತ ವಂಚಕ ರೋಹನ್ ಸಲ್ಡಾನಾನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅಮರನಾಥ ಯಾತ್ರೆಗೆ ಅಡ್ಡಿಯಾದ ಭೂಕುಸಿತ: ಓರ್ವ ಸಾವು, ಮೂವರಿಗೆ ಗಾಯ, ಯಾತ್ರೆ ತಾತ್ಕಾಲಿಕ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಪವಿತ್ರ ಅಮರನಾಥ ಯಾತ್ರೆಯ ಮಾರ್ಗದಲ್ಲಿ ಭೂಕುಸಿತಕ್ಕೆ ಕಾರಣವಾಗಿದ್ದು, ದುರದೃಷ್ಟವಶಾತ್ ಓರ್ವ ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ.