spot_img

ಪ್ರಕಾಶ್ ರಾಜ್ ಕುಂಭಮೇಳದಲ್ಲಿ ಸ್ನಾನ ಮಾಡಿದ್ರಾ? ವೈರಲ್ ಫೋಟೋದ ಅಸಲಿಯತ್ತು ಇಲ್ಲಿದೆ!

Date:

ಇತ್ತೀಚೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎನ್ನುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ, ಈ ಫೋಟೋ AI ನಿಂದ ರಚಿತವಾಗಿದ್ದು, ಪ್ರಕಾಶ್ ರಾಜ್ ಅವರು ಸ್ವತಃ ಇದನ್ನು ನಕಲಿ ಎಂದು ಹೇಳಿದ್ದಾರೆ.

ವೈರಲ್ ಫೋಟೋದ ಸತ್ಯಾಸತ್ಯತೆ
ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಇದುವರೆಗೂ ಕೋಟ್ಯಂತರ ಮಂದಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ರಾಜಕಾರಣಿಗಳು, ಚಿತ್ರ ನಟರು ಸೇರಿದಂತೆ ದೇಶ – ವಿದೇಶದಿಂದ ಬಂದಿರುವ ಭಕ್ತರು ಪವಿತ್ರ ಸ್ನಾನವನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ಪ್ರಕಾಶ್ ರಾಜ್ ಅವರ ಫೋಟೋ ಒಂದು ವೈರಲ್ ಆಗಿದ್ದು, ಅವರು ಕುಂಭಮೇಳಕ್ಕೆ ಭೇಟಿ ನೀಡಿ ಸ್ನಾನ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದು AI ನಿಂದ ರಚಿತವಾದ ಫೋಟೋ ಎಂದು ತಿಳಿದುಬಂದಿದೆ.

ಪ್ರಕಾಶ್ ರಾಜ್ ಅವರ ಪ್ರತಿಕ್ರಿಯೆ
ಈ ಬಗ್ಗೆ ಪ್ರಕಾಶ್ ರಾಜ್ ಅವರು ಸ್ವತಃ ವೈರಲ್ ಆದ ಫೋಟೋವನ್ನು ಹಂಚಿಕೊಂಡು ಇದು ನಕಲಿ ಎಂದಿದ್ದು, ದೂರು ದಾಖಲಿಸಿರುವ ಬಗ್ಗೆ ಹೇಳಿಕೊಂಡಿದ್ದಾರೆ. “ಸುಳ್ಳು ಸುದ್ದಿ “ಸುಳ್ಳ ರಾಜ” ನ ಹೇಡಿಗಳ ಸೈನ್ಯಕ್ಕೆ .. ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ .. Police Complaint ದಾಖಲಾಗಿದೆ .. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ” ಎಂದು ‘ಎಕ್ಸ್’ ನಲ್ಲಿ ಬರೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.

ಇತರ ನಟರ ಭೇಟಿ
ಇನ್ನು ಚಿತ್ರರಂಗದ ನಟಿ ಅದಾ ಶರ್ಮಾ, ಗಾಯಕ ಗುರು ರಾಂಧವಾ, ಅನುಪಮ್ ಖೇರ್ ಮತ್ತು ಶಂಕರ್ ಮಹಾದೇವನ್, ನಟಿ ಹೇಮಾ ಮಾಲಿನಿ ಮುಂತಾದವರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಲೆ ಮಾಡಿ ದೇಹವನ್ನು ಆರು ತುಂಡುಗಳಾಗಿ ಕತ್ತರಿಸಿದ ಮಹಿಳೆ!

ಮೀರತ್‌ನ ಸಿಕಂದರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯನ್ನು ಕೊಲೆ ಮಾಡಿ ಆರು ತುಂಡುಗಳಾಗಿ ಕತ್ತರಿಸಿ ಎಸೆದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಯರ್ಲಪಾಡಿಗೆ KSRTC ಬಸ್ ಸಂಚಾರ ಶೀಘ್ರದಲ್ಲೇ ಆರಂಭ

ಯರ್ಲಪಾಡಿ ಗ್ರಾಮಸ್ಥರ ಬಹುದಿನದ ಬೇಡಿಕೆ ಸಾಕಾರಗೊಂಡಿದ್ದು, ಅತೀ ಶೀಘ್ರದಲ್ಲೇ ಯರ್ಲಪಾಡಿ ಗ್ರಾಮಕ್ಕೆ ಸರಕಾರಿ ಬಸ್ ಸಂಚಾರ ಸೇವೆಯು ಲಭ್ಯವಾಗಲಿದೆ.

ಮೈಕ್ರೋಸಾಫ್ಟ್‌ನಿಂದ 6,000 ಉದ್ಯೋಗಿಗಳು ವಜಾ !

ಟೆಕ್ ದಿಗ್ಗಜ ಮೈಕ್ರೋಸಾಫ್ಟ್ ವಿಶ್ವದಾದ್ಯಂತ ತನ್ನ ಸಿಬ್ಬಂದಿಯ ಶೇಕಡಾ 3 ರಷ್ಟು, ಅಂದರೆ ಸುಮಾರು 6,000 ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ಮಾಹಿತಿ ಹೊರಬಿದ್ದಿದೆ.

ಮುಂಗಾರಿನ ಮುನ್ನುಡಿ: ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯ Yellow Alert

ರಾಜ್ಯದ ವಾತಾವರಣದಲ್ಲಿ ಮುಂಗಾರು ಮಳೆಯ ಮುನ್ನುಡಿ ಕಾಣಿಸಿಕೊಳ್ಳುತ್ತಿರುವ ಮಧ್ಯೆ, ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿ ತೀವ್ರ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 13ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಣೆ ಮಾಡಿದೆ.