spot_img

ಮುಂಗಾರಿನ ಮುನ್ನುಡಿ: ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯ Yellow Alert

Date:

spot_img

ಬೆಂಗಳೂರು, ಮೇ 14: ರಾಜ್ಯದ ವಾತಾವರಣದಲ್ಲಿ ಮುಂಗಾರು ಮಳೆಯ ಮುನ್ನುಡಿ ಕಾಣಿಸಿಕೊಳ್ಳುತ್ತಿರುವ ಮಧ್ಯೆ, ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿ ತೀವ್ರ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 13ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಣೆ ಮಾಡಿದೆ. ಇದೇ ವೇಳೆ, ಮುಂಗಾರು ಮಳೆ ಜೂನ್ 5ರಂದು ಕರ್ನಾಟಕಕ್ಕೆ ಅಧಿಕೃತವಾಗಿ ಪ್ರವೇಶಿಸಲಿದೆ ಎಂಬ ಮಾಹಿತಿ ಕೂಡ ನೀಡಲಾಗಿದೆ.

ಈಗಾಗಲೇ ಪ್ರಾರಂಭವಾದ ಪೂರ್ವ ಮುಂಗಾರು ಮಳೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಭಾರಿತವಾಗುತ್ತಿರುವ ದೃಷ್ಠಿಯಿಂದ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಇದೇ ಸಂದರ್ಭ, ಹವಾಮಾನ ಇಲಾಖೆ ಮೇ 15ರಂದು ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಈ ನಿಯಮಿತ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮೇ 15ಕ್ಕೆ ಇನ್ನೂ ಕೆಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದ್ದು, ದಕ್ಷಿಣ ಕನ್ನಡ, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಿಗೂ ಮುನ್ನೆಚ್ಚರಿಕೆ ಪ್ರಕಟಿಸಿದೆ. ಆಗಾಗ್ಗೆ ಮೋಡಗಳು, ಗಾಳಿ ಸಹಿತ ಮಳೆ, ಕೆಲವೊಂದು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಬೇಸಿಗೆಯ ಅಂತ್ಯದ ಹಂತದಲ್ಲಿಯೇ ಮಳೆರಾಯ ತನ್ನ ಬೇಟೆ ಆರಂಭಿಸಿರುವುದು ಈ ವರ್ಷದ ಮುಂಗಾರು ಅಭಿವ್ಯಕ್ತಿಯನ್ನು ಪ್ರತಿಬಿಂಬಿಸುತ್ತಿದೆ. ಜನತೆ ಅನವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಶಾಲಾ ಕಾಲೇಜು ಮಕ್ಕಳಿಂದ ಹಿಡಿದು ರೈತಸಮುದಾಯವರೆಗೂ ಈ ಮಳೆಯ ಪ್ರಭಾವ ಸ್ಪಷ್ಟವಾಗಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಾಳೆ ಕಲಂಬಾಡಿಯಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜನನಿ ಮಿತ್ರ ಮಂಡಳಿ (ರಿ) ವಾoಟ್ರಾಯ್ ಪದವು, ರೋಟರಿ ಕ್ಲಬ್ ಕಾರ್ಕಳ, ಜೆಸಿಐ ಕಾರ್ಕಳ ಹಳೆ ವಿದ್ಯಾರ್ಥಿ ಸಂಘ, ಕಲಂಬಾಡಿ ಪದವು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ

ಶಿರೂರು ಮಠದ ಭಾವಿ ಪರ್ಯಾಯ ಶ್ರೀ ವೇದವರ್ಧನ ತೀರ್ಥರಿಗೆ ಬ್ರಾಹ್ಮಣ ಮಹಾಸಭಾದಿಂದ ಫಲ ಕಾಣಿಕೆ ಅರ್ಪಣೆ

ಶಿರೂರು ಮಠದ ಭಾವಿ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ, ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಗೌರವಪೂರ್ವಕವಾಗಿ ಫಲ ಕಾಣಿಕೆ ಅರ್ಪಿಸಿ ಅವರಿಂದ ಆಶೀರ್ವಾದ ಪಡೆಯಲಾಯಿತು.

ಬಿಜೆಪಿ ಟಿಕೆಟ್ ವಂಚನೆ: ಚೈತ್ರಾ ಕುಂದಾಪುರ ವಿರುದ್ಧದ ಪ್ರಕರಣಕ್ಕೆ ಮರುಜೀವ, ಹಣ ಬಿಡುಗಡೆಗೆ ಉದ್ಯಮಿ ಹೈಕೋರ್ಟ್ ಮೊರೆ

ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹5 ಕೋಟಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.

75 ವಿಐಪಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿದ ‘ಹನಿ ಮನಿ’ ಲೇಡಿ: ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದ ‘ಚಿತ್ರಾಂಗಿಣಿ’!

ಮಹಾರಾಷ್ಟ್ರದಲ್ಲಿ 75ಕ್ಕೂ ಹೆಚ್ಚು ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂ. ಸುಲಿಗೆ ಮಾಡಿದ ಮಹಿಳೆಯ ಪ್ರಕರಣ ಭಾರೀ ಕೋಲಾಹಲ ಸೃಷ್ಟಿಸಿದೆ.