ಮಂಗಳೂರು ಸಬ್ ಜೈಲಿನಲ್ಲಿ ಮತ್ತೆ ಕೈದಿಗಳ ಹೊಡೆದಾಟ! ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Date:

spot_img

ಮಂಗಳೂರು: ನಗರದ ಕೊಡಿಯಾಲ್ ಬೈಲಿನ ಸಬ್ ಜೈಲಿನಲ್ಲಿ ಎರಡು ಕೋಮಿನ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ಪುತ್ತೂರಿನ ಮೂಲದ ಕೈದಿ ಕೇಶವ ತೀವ್ರವಾಗಿ ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಳ್ಳಾಲದ ಧರ್ಮನಗರದ ನಟೋರಿಯಸ್ ರೌಡಿ ಮಹಮ್ಮದ್ ಮುಖ್ತಾರ್ ಮತ್ತು ಅವನ ಸಹಚರರು, ಕೇಶವ ಎಂಬ ಕೈದಿಯ ಮೇಲೆ ಕ್ರೂರ ಹಲ್ಲೆ ನಡೆಸಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದ್ದು, ಎದೆ ಭಾಗದಲ್ಲಿ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

ಕೇಶವನು 2023ರ ನವೆಂಬರ್ 6ರಂದು ಪುತ್ತೂರಿನಲ್ಲಿ ನಡೆದಿದ್ದ ಹುಲಿ ವೇಷದ ತಂಡದ ನಾಯಕ ಅಕ್ಷಯ್ ಕಲ್ಲೇಗನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ಬಂಧನದಲ್ಲಿದ್ದ.

ಹಲ್ಲೆ ನಡೆಸಿದ ಮಹಮ್ಮದ್ ಮುಖ್ತಾರ್, ಸುಮಾರು 15 ಪ್ರಕರಣಗಳಲ್ಲಿ ಶಾಮೀಲಾಗಿರುವ ಅಪರಾಧಿ. 2022ರ ಜುಲೈನಲ್ಲಿ ಪೊಲೀಸರ ಗುಂಡು ಹಾರಾಟದಿಂದ ಬಂಧಿತನಾಗಿದ್ದ.

ಈ ಸಂಬಂಧ ಬರ್ಕೆ ಠಾಣೆ ಪೊಲೀಸರು ಜೈಲಿಗೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಕಳೆದ ಕೆಲ ತಿಂಗಳಿನಿಂದ ಈ ಜೈಲಿನಲ್ಲಿ ಕೈದಿಗಳ ನಡುವಿನ ಘರ್ಷಣೆಗಳು ಕ್ರಮೇಣ ಹೆಚ್ಚುತ್ತಲೇ ಇವೆ ಎಂಬ ಆತಂಕ ಮೂಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ