spot_img

ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್ ಬ್ಯಾನ್ ಮಾಡ್ತೇವೆ ಎಂದು ಎಚ್ಚರಿಕೆ ನೀಡಿದ ಪ್ರಿಯಾಂಕ್ ಖರ್ಗೆ

Date:

spot_img

ಬೆಂಗಳೂರು : “ನಾವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮೇಲೆ ನಿಷೇಧ ಹೇರಲಾಗುತ್ತದೆ” ಎಂಬ ತೀವ್ರವಾದ ಹೇಳಿಕೆಯನ್ನು ರಾಜ್ಯದ ಮಾಹಿತಿ ತಂತ್ರಜ್ಞಾನ ಹಾಗೂ ಡಿಜಿಟಲ್ ಸೇವಾ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿದ್ದಾರೆ.

ಬೆಂಗಳೂರು ನಗರದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖರ್ಗೆ, “ಇದಕ್ಕೂ ಮೊದಲು ಕಾಂಗ್ರೆಸ್ ನೇತೃತ್ವದ ಸರ್ಕಾರವು ಆರ್‌ಎಸ್‌ಎಸ್ ಅನ್ನು ಎರಡು ಬಾರಿ ನಿಷೇಧಿಸಿತ್ತು. ಆಗ ಅವರು ಬಂದು ಕೈಕಾಲು ಹಿಡಿದು, ನಿಷೇಧ ಹಿಂತೆಗೆದುಕೊಳ್ಳಲು ಬೇಡಿಕೊಂಡಿದ್ದರು. ಆ ವೇಳೆ ನಿಷೇಧ ಮಾಡುವುದು ತಪ್ಪು ಎಂದು ಅನಿಸಿತ್ತು. ಆದರೆ ಈಗ ನಾವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ಈ ಬಾರಿಗೆ ಆರ್‌ಎಸ್‌ಎಸ್ ಮೇಲೆ ಖಚಿತವಾಗಿ ನಿಷೇಧ ಹೇರಲಾಗುತ್ತದೆ” ಎಂದು ಹೇಳಿದರು.

RSS ಮುಖಂಡ ಹೊಸಬಾಳೆ ಹೇಳಿಕೆಗೆ ಕಿಡಿಕಾರಿಕೆ
ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರು ಸಂವಿಧಾನದಿಂದ “ಜಾತ್ಯಾತೀತ” ಮತ್ತು “ಸಮಾಜವಾದಿ” ಪದಗಳನ್ನು ತೆಗೆದುಹಾಕಬೇಕು ಎಂದು ಮಾಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, “ಹೊಸಬಾಳೆ ಯಾವ ಸ್ಕೂಲ್ ಆಫ್ ಥಾಟ್‌ನಿಂದ ಬರುತ್ತಾರೆ ಎಂಬುದು ಸ್ಪಷ್ಟವಾಗಬೇಕಿದೆ. ಆರ್‌ಎಸ್‌ಎಸ್ ಚಿಂತನೆಗೆ ನಮ್ಮ ವಿರೋಧ ಸದಾ ಇರುತ್ತದೆ. ಅವರ ದೃಷ್ಟಿಕೋನವೇ ಸಂವಿಧಾನದ ವಿರುದ್ಧವಾಗಿದೆ” ಎಂದು ಕಿಡಿಕಾರಿದರು.

ಅಂಬೇಡ್ಕರ್ ವಿರೋಧಿಗಳಾದ ಆರ್‌ಎಸ್‌ಎಸ್?
ಪ್ರಿಯಾಂಕ್ ಖರ್ಗೆ ಅವರು ಮತ್ತೊಂದು ಗಂಭೀರ ಆರೋಪವನ್ನೂ ಮಾಡಿದ್ದು, “ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಿಗೆ ಆರ್‌ಎಸ್‌ಎಸ್ ವಿರೋಧಿಯಾಗಿದೆ. ಈ ಕುರಿತು ನಾನು ಬಿಜೆಪಿ ನಾಯಕರಿಗೆ ದಾಖಲೆಗಳನ್ನೇ ಕೊಟ್ಟಿದ್ದೇನೆ. ಆದರೆ ಅವರು ನಾಯಿ ತರಹ ಬೊಗಳುತ್ತಾರೆ ಅಂತ ವಿಷಯ ಡೈವರ್ಟ್‌ ಮಾಡುತ್ತಾರೆ. ಇವರು ಮೊದಲು ಸಂವಿಧಾನ ಓದಿಕೊಳ್ಳಲಿ” ಎಂದು ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಏಷ್ಯಾ ಕಪ್‌ 2025: ಭಾರತ ತಂಡದಿಂದ ಗಿಲ್‌, ಸಿರಾಜ್‌, ಅಯ್ಯರ್‌ಗೆ ಕೊಕ್‌? ಆಯ್ಕೆ ಸಮಿತಿ ದಿಟ್ಟ ನಿರ್ಧಾರಕ್ಕೆ ಸಜ್ಜು

ಏಷ್ಯಾ ಕಪ್‌ 2025ರ ಭಾರತ ತಂಡದ ಆಯ್ಕೆ ಕುತೂಹಲ ಮೂಡಿಸಿದ್ದು, ಆಗಸ್ಟ್ 19ರಂದು ನಡೆಯಲಿರುವ ಆಯ್ಕೆ ಸಮಿತಿಯ ಸಭೆಯಲ್ಲಿ ಕೆಲವೊಂದು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಗೆಳೆಯರ ಬಳಗ ದಿಡಿಂಬಿರಿ ಇವರ ವತಿಯಿಂದ 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಬಜಗೋಳಿ ದಿಡಿಂಬಿರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ದಿನಾಂಕ 17/08/2025 ರಂದು ನಡೆಯಿತು.

ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ

ಧಾರ್ಮಿಕ ಕ್ಷೇತ್ರದ ಬಗ್ಗೆ ಯಾರೇ ಒಳ್ಳೆಯ ಮಾತುಗಳನ್ನಾಡಿದರೂ ಅವರ ಚಾರಿತ್ರ್ಯಹರಣ ಮಾಡುವ ಮೂಲಕ ಬಾಯಿ ಮುಚ್ಚಿಸುವ ಷಡ್ಯಂತ್ರ ರೂಪಿಸುತ್ತಿರುವ ಅಪಾಯಕಾರಿ ರೌಡಿ ಮನಸ್ಥಿತಿಯನ್ನು ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.

ಕಾರ್ಕಳ ಯುವ ಬ್ರಾಹ್ಮಣ ಪರಿಷತ್‌ನಿಂದ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ ಕಾರ್ಕಳ ಇದರ ವತಿಯಿಂದ ದಿನಾಂಕ 17.08.2025 ನೇ ಭಾನುವಾರ ಸಾಯಂಕಾಲ ಕಾರ್ಕಳ ಶ್ರೀ ಸೂರ್ಯನಾರಾಯಣ ಮಠದಲ್ಲಿ ನಡೆದಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳಾದ ಕೃಷ್ಣ ವೇಷ ಸ್ಪರ್ಧೆ, ಭಕ್ತಿಗೀತೆ, ರಸಪ್ರಶ್ನೆ ಹಾಗೂ ಮೊಸರು ಕುಡಿಕೆ ಕಾರ್ಯಕ್ರಮಗಳು ಬಹಳ ಅದ್ದೂರಿಯಿಂದ ಸಮಾಜದ ಹಿರಿಯರ, ಗಣ್ಯರ ಮತ್ತು ಸಮಾಜ ಬಾಂಧವರ ಪಾಲ್ಗೊಳ್ಳುವಿಕೆಯಿಂದ ನೆರವೇರಿತು.