spot_img

“ಬೈಲೂರಿನಲ್ಲಿ ಮತ್ತೆ ಕಂಚಿನ ಪರಶುರಾಮ ಪ್ರತಿಮೆ ಪ್ರತಿಷ್ಠಾಪಿಸಲು ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಉದಯ ಶೆಟ್ಟಿ ಮುನಿಯಾಲು ಕ್ರಮಕ್ಕೆ ಸುಧೀರ್ ಹೆಗ್ಡೆ ಬೆಂಬಲ”

Date:

spot_img

ಹಲವಾರು ವಿವಾದಗಳಿಗೆ ಕಾರಣವಾದ ಬೈಲೂರು ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಮತ್ತೆ ನೈಜ ಕಂಚಿನ ಪರಶುರಾಮ ಪ್ರತಿಮೆ ಪ್ರತಿಷ್ಟಾಪನೆಗಾಗಿ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಬೈಲೂರಿನ ಹಿರಿಯ ಮುಖಂಡರಾದ ಸುಧೀರ್ ಹೆಗ್ಡೆ ಸ್ವಾಗತಿಸಿದ್ದಾರೆ.

2023 ರ ಜನವರಿಯಲ್ಲಿ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆಯಾದಾಗ ನಮ್ಮೂರಿನಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರ ಉದ್ಘಾಟನೆಯಾಗಿದೆ ಎಂದು ಸ್ಥಳೀಯರಾದ ನಾವು ಅತ್ಯಂತ ಸಂತಸಪಟ್ಟಿದ್ದೆವು , ಆದರೆ ಪ್ರತಿಮೆ ನಿರ್ಮಾಣದಲ್ಲಾದ ಲೋಪ ದೋಷಗಳ ವಿವಾದದಿಂದಾಗಿ ಊರಿನವರಾದ ನಮ್ಮ ಸಂತಸವು ಹೆಚ್ಚು ಸಮಯ ಉಳಿಯದೆ ನಮಗೆ ಬೇಸರ ಉಂಟಾಗಿದೆ. ಪರಶುರಾಮ ಪ್ರತಿಮೆ ವಿವಾದದಿಂದಾಗಿ ನಮ್ಮೂರಿನ ಹೆಸರು ಪದೇ ಪದೇ ಮಾದ್ಯಮದಲ್ಲಿ ಬರುತ್ತಿರುವುದರಿಂದ ನಮಗೆ ತೀವ್ರ ಮುಜುಗರ ಉಂಟಾಗಿದೆ.

ಪ್ರತಿಮೆ ನಿರ್ಮಾಣದ ವಿಚಾರದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಆ ಬಗ್ಗೆ ನಮ್ಮ ಅಭ್ಯಂತರವಿಲ್ಲ. ಆದರೆ ಯಾರದ್ದೋ ತಪ್ಪಿನಿಂದಾಗಿ ಊರವರಾದ ನಮಗೆ ತೀವ್ರ ಮುಜುಗರ ಉಂಟಾಗುತ್ತಿದೆ. ಹಾಗಾಗಿ ಮತ್ತೆ ಅದೇ ಜಾಗದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಾಣ ಆಗಬೇಕು. ಆ ಮೂಲಕ ಊರಿಗೆ ಅಂಟಿದ ಕಳಂಕದ ಕೊಳೆ ತೊಳೆದು ಹೋಗಬೇಕು ಎನ್ನುವುದು ಸ್ಥಳೀಯರ ಹಾಗೂ ಗ್ರಾಮಸ್ಥರಾದ ನಮ್ಮೆಲ್ಲರ ಆಶಯವಾಗಿದೆ. ಮಾಧ್ಯಮಗಳಲ್ಲಿ ವರದಿಯಾದಂತೆ ಇಲ್ಲಿ ಮತ್ತೆ ಕಂಚಿನ ಪರಶುರಾಮ ಪ್ರತಿಮೆ ನಿರ್ಮಾಣವಾಗಬೇಕು ಎಂದು ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿರುವುದನ್ನು ನಾವೆಲ್ಲ ಸ್ವಾಗತಿಸುತ್ತೇವೆ ಮತ್ತು ತುಳುನಾಡಿನ ಸೃಷ್ಠಿಕರ್ತ ಮಹಾವಿಷ್ಣುವಿನ ಅವತಾರವಾಗಿರುವ ಭಗವಾನ್ ಪರಶುರಾಮನ ಕಂಚಿನ ಪ್ರತಿಮೆ ಪುನರ್ ಪ್ರತಿಷ್ಠಾಪನೆಯ ಕೆಲಸ ಕಾರ್ಯಗಳಿಗೆ ಊರವರಾಗಿ ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಸುಧೀರ್ ಹೆಗ್ಡೆ ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಗಸ್ಟ್ 12 ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಮುದ್ರಾಡಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಬಜಗೋಳಿ ಸಿ. ಆರ್. ಪಿ. ಕೃಷ್ಣಕುಮಾರ್ ಅವರು ಮುದ್ರಾಡಿಯ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಪರಶುರಾಮ ಥೀಮ್ ಪಾಕ್: ವಿವಿಧ ಹಂತದ ಹೋರಾಟ, ಜನಜಾಗೃತಿಗೆ ಬಿಜೆಪಿ ನಿರ್ಧಾರ; ತಾಲೂಕು, ಜಿಲ್ಲೆ, ರಾಜ್ಯಮಟ್ಟ ಮೂರು ಹಂತದಲ್ಲಿ ಹೋರಾಟಕ್ಕೆ ಸಿದ್ಧತೆ

ಮಾಜಿ ಸಚಿವ, ಶಾಸಕರಾದ ವಿ.ಸುನಿಲ್ ಕುಮಾರ್ ಅವರು ಕಾರ್ಕಳದ ವಿಕಾಸ ಕಚೇರಿಯಲ್ಲಿ ಶನಿವಾರ ನಡೆದ ಹೋರಾಟದ ರೂಪುರೇಷಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರಷ್ಯಾ-ಭಾರತ ಆರ್ಥಿಕತೆ ನಾಶವಾಗಲಿ ಎಂದ ಟ್ರಂಪ್; ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಕ್ಕೆ ಅಮೆರಿಕದಲ್ಲಿ ಅಸಮಾಧಾನ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಭಾರತ ಮತ್ತು ರಷ್ಯಾವನ್ನು "ಸತ್ತ ಆರ್ಥಿಕತೆಗಳು" ಎಂದು ಜರೆದಿದ್ದಾರೆ.