
ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚೆಬೈಲು ಕುಂಗೂರು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಸಿಡಿಲು ಬಡಿತದಿಂದಾಗಿ ಮನೆಯೊಂದಕ್ಕೆ ಅಪಾರ ಪ್ರಮಾಣದ ಹಾನಿಯಾಗಿದೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಕಂಚಿಬೈಲು ಕುಂಗೂರು ನಿವಾಸಿ ವಾಸು ಮುಗೇರ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ, ಮನೆಯೊಳಗಿನ ವಿದ್ಯುತ್ ಉಪಕರಣಗಳು ಸೇರಿದಂತೆ ಇತರೆ ಸೊತ್ತುಗಳು ಸಿಡಿಲಾಘಾತದಿಂದ ಸಂಪೂರ್ಣವಾಗಿ ಹಾಳಾಗಿವೆ. ಘಟನೆಯಲ್ಲಿ ಮನೆಯ ಮಾಲೀಕರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಪುತ್ತಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ದಯಾನಂದ ಕೊಡ್ಯಡ್ಕ ಹಾಗೂ ಪಂಚಾಯಿತಿ ಸದಸ್ಯೆ ಸುಮಾ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.



































