spot_img

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ : ಯುವತಿ ಗರ್ಭಿಣಿಯಾಗುತ್ತಿದ್ದಂತೆಯೇ ಮದುವೆಗೆ ನಿರಾಕರಿಸಿದ ಸಹಪಾಠಿ!

Date:

spot_img

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಬಳಿಕ ಯುವತಿ ಗರ್ಭಿಣಿಯಾಗುತ್ತಿದ್ದಂತೆಯೇ ಮದುವೆಗೆ ನಿರಾಕರಿಸಿದ ಯುವಕನ ವಿರುದ್ಧ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ನಂಬಿಕೆ ದ್ರೋಹದ ಗಂಭೀರ ಆರೋಪದೊಂದಿಗೆ ಪ್ರಕರಣ ದಾಖಲಾಗಿದೆ.

ಬಪ್ಪಳಿಗೆ ನಿವಾಸಿಯಾದ ಕೃಷ್ಣ ರಾವ್ (21) ಎಂಬ ಆರೋಪಿ, ಪುತ್ತೂರಿನ ಯುವತಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಇಬ್ಬರೂ ಸಹಪಾಠಿಗಳಾಗಿದ್ದು, ಯುವತಿ ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಯುವತಿಯ ದೂರಿನ ಪ್ರಕಾರ, 2024ರ ಅಕ್ಟೋಬರ್ 11 ರಂದು ಕೃಷ್ಣ ತನ್ನ ಮನೆಗೆ ಕರೆಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ ಎನ್ನಲಾಗಿದೆ.

ಈ ಘಟನೆ ಬಳಿಕ ಕೆಲ ತಿಂಗಳೊಳಗೆ ಯುವತಿ ಗರ್ಭಿಣಿಯಾಗಿದ್ದು, ತಾನು ಗರ್ಭಿಣಿಯಾಗಿರುವುದನ್ನು ಕೃಷ್ಣನಿಗೆ ತಿಳಿಸಿದ್ದಳು. ಆದರೆ ಆರೋಪಿ ಈ ವಿಷಯವನ್ನು ಕುಟುಂಬಸ್ಥರಿಗೆ ಹೇಳದಿದ್ದರೆ ಮದುವೆಯಾಗುವೆ ಎಂದು ಭರವಸೆ ನೀಡಿದ್ದ. ಆದರೆ ಯುವತಿ 9 ತಿಂಗಳ ಗರ್ಭಿಣಿಯಾಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದ್ದಾನೆ.

ಪ್ರಸ್ತುತ ಆರೋಪಿ ಕೃಷ್ಣ ರಾವ್ ತಲೆಮರೆಸಿಕೊಂಡಿದ್ದಾನೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಯುವತಿಯು ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಮನವಿ ಮಾಡಿದ್ದಾಳೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕದಲ್ಲಿ VIP ಗಳ ಸೈರನ್ ಹಾರ್ನ್ ಬಳಕೆ ನಿಷೇಧ: ಡಿಜಿಪಿಯಿಂದ ಮಹತ್ವದ ಆದೇಶ

ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ (VIP) ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಹಾರ್ನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ), ಡಾ. ಎಂ.ಎ. ಸಲೀಂ ಅವರು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಜಗದೀಪ್‌ ಧನ್ಕರ್‌ ಉಪರಾಷ್ಟ್ರಪತಿ ಸ್ಥಾನಕ್ಕೆ ಅನಿರೀಕ್ಷಿತ ರಾಜೀನಾಮೆ: ಆರೋಗ್ಯ ಕಾರಣ ನೀಡಿದ ಧನ್ಕರ್‌

ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನ್ಕರ್‌ ಅವರು ತಮ್ಮ ಸ್ಥಾನಕ್ಕೆ ಸೋಮವಾರ ದಿಢೀರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಡಾ. ವೀರೇಂದ್ರ ಹೆಗ್ಡೆ ಆಶೀರ್ವಾದದೊಂದಿಗೆ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ಶಿಬಿರ

ಹಿರಿಯಡಕದಲ್ಲಿ ಪರಿಸರ ಪ್ರಜ್ಞೆ ಮೂಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ರೋಟರಿ ಕ್ಲಬ್ ರಾಕ್ ಸಿಟಿ: ಇರುವತ್ತೂರು ಕೊಳಕೆ ಶಾಲೆಗೆ ಪ್ರಾಜೆಕ್ಟರ್ ಕೊಡುಗೆ, ಕಲಿಕೆಗೆ ಹೊಸ ಆಯಾಮ

ರೋಟರಿ ಕ್ಲಬ್ ರಾಕ್ ಸಿಟಿ ಕಾರ್ಕಳ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರುವತ್ತೂರು ಕೊಳಕೆ ಇಲ್ಲಿಗೆ ಪ್ರಾಜೆಕ್ಟರ್ ಕೊಡುಗೆ.