spot_img

ಪುತ್ತೂರು: ಗಾಯಕಿಯ ವೈಯಕ್ತಿಕ ಜೀವನದ ಬಗ್ಗೆ ಮಾಧ್ಯಮಗಳಿಗೆ ನ್ಯಾಯಾಲಯದ ತಡೆಯಾಜ್ಞೆ

Date:

spot_img

ಪುತ್ತೂರು: ಒಬ್ಬ ಪ್ರಸಿದ್ಧ ಗಾಯಕಿಯ ವೈವಾಹಿಕ ಜೀವನ ಮತ್ತು ವಿಚ್ಛೇದನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಸುದ್ದಿ, ವೀಡಿಯೊ, ಆಡಿಯೋ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ನ್ಯಾಯಾಲಯವು ತಡೆಯಾಜ್ಞೆ ಜಾರಿ ಮಾಡಿದೆ.

ಗಾಯಕಿಯ ವೈಯಕ್ತಿಕ ಜೀವನದ ವಿಷಯಗಳನ್ನು ಮಾಧ್ಯಮಗಳು ಪ್ರಕಟಿಸುವುದನ್ನು ತಡೆಯಲು ಅವರ ವಕೀಲ್ ಮಹೇಶ್ ಕಜೆ ಮೂಲಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಮನವಿಯನ್ನು ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕೃತಿ ಕಲ್ಯಾಣ್ಪುರ್ ಗಂಭೀರವಾಗಿ ಪರಿಗಣಿಸಿ, ಎಲ್ಲಾ ಡಿಜಿಟಲ್, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ದೇಶನೆ ನೀಡಿದ್ದಾರೆ.

ನ್ಯಾಯಾಲಯವು ತೀರ್ಪಿನಲ್ಲಿ, “ಈ ಪ್ರಕರಣದ ವಿವರಗಳನ್ನು ನ್ಯಾಯಾಲಯದ ಅನುಮತಿಯಿಲ್ಲದೆ ಪ್ರಕಟಿಸಿದ್ದು, ಅರ್ಜಿದಾರರ ಗೌಪ್ಯತೆ ಮತ್ತು ಭಾವನೆಗಳನ್ನು ಉಲ್ಲಂಘಿಸಿದೆ” ಎಂದು ತಿಳಿಸಿದೆ. ಮಾಧ್ಯಮಗಳು ಈಗಾಗಲೇ ಹಂಚಿಕೆ ಮಾಡಿದ ವರದಿಗಳು, ವೀಡಿಯೊಗಳು, ಕಾಮೆಂಟ್ಗಳು ಅಥವಾ ಲೇಖನಗಳನ್ನು ತಕ್ಷಣ ತೆಗೆದುಹಾಕುವಂತೆ ಮತ್ತು ಭವಿಷ್ಯದಲ್ಲಿ ಯಾವುದೇ ಸಂಬಂಧಿತ ವಿಷಯವನ್ನು ಪ್ರಸಾರ ಮಾಡದಂತೆ ಆದೇಶಿಸಲಾಗಿದೆ. ಹೆಚ್ಚುವರಿಯಾಗಿ, ನ್ಯಾಯಾಲಯದ ಇ-ಕೋರ್ಟ್ ವ್ಯವಸ್ಥೆಯಲ್ಲಿ ಗಾಯಕಿಯ ವಿವರಗಳನ್ನು ಗೋಪ್ಯವಾಗಿಡುವಂತೆ ಕಚೇರಿಗೆ ಸೂಚನೆ ನೀಡಲಾಗಿದೆ.

ಈ ತಡೆಯಾಜ್ಞೆಯು ವೈಯಕ್ತಿಕ ಗೌಪ್ಯತೆ ಮತ್ತು ಮಾನಸಿಕ ಸುರಕ್ಷತೆಗೆ ಮಹತ್ವ ನೀಡುವ ನ್ಯಾಯಾಲಯದ ನಿಲುವನ್ನು ಎತ್ತಿ ತೋರಿಸುತ್ತದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸಿಂಗಾಪುರಕ್ಕೆ ಚೀನಾ ಮೂಲದ ಸೈಬರ್ ಭೀತಿ: ರಾಷ್ಟ್ರೀಯ ಮಹತ್ವದ ಮೂಲಸೌಕರ್ಯಗಳ ಮೇಲೆ ಗುರಿ

ಸಿಂಗಾಪುರ ಪ್ರಸ್ತುತ ಅತಿ ಸಂಕೀರ್ಣವಾದ ಸೈಬರ್ ಆಕ್ರಮಣವನ್ನು ಎದುರಿಸುತ್ತಿದೆ, ಇದು ದೇಶದ ಭದ್ರತೆ ಮತ್ತು ಪ್ರಮುಖ ಸೇವೆಗಳ ವ್ಯವಸ್ಥೆಗಳಿಗೆ ತೀವ್ರ ಅಪಾಯವನ್ನುಂಟುಮಾಡಿದೆ

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ – ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು

ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ ಮಾಡಿರುವ ಪ್ರತಿಭಟನೆಯು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸರಣಿ ವೈಫಲ್ಯವನ್ನು ಮರೆಮಾಚಲು ಮಾಡಿರುವ ನಾಟಕವಾಗಿದೆ.

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.

ತನಿಖೆಗೂ ಮುನ್ನ ಧರ್ಮಸ್ಥಳದ ತೇಜೋವಧೆ ಸಲ್ಲದು: ಸಿ.ಟಿ. ರವಿ ಎಚ್ಚರಿಕೆ!

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ನೇಮಕ ಮಾಡಿರುವುದನ್ನು ಸ್ವಾಗತಿಸುವುದಾಗಿ ಬಿಜೆಪಿ ನಾಯಕ ಸಿ.ಟಿ. ರವಿ ತಿಳಿಸಿದ್ದಾರೆ.