spot_img

ಪುತ್ತೂರು ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಧೈರ್ಯ ತುಂಬಿದ ಮಹಿಳಾ ಆಯೋಗದ ಅಧ್ಯಕ್ಷೆ, ಆಕೆಯನ್ನು ಗಂಡನ ಮನೆಗೆ ಸೇರಿಸುವ ಸಂಪೂರ್ಣ ಜವಾಬ್ದಾರಿ ತನ್ನದೆಂದ ಪ್ರತಿಭಾ ಕುಳಾಯಿ

Date:

spot_img

ಪುತ್ತೂರು : ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಸಂತ್ರಸ್ತ ಯುವತಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ನ್ಯಾಯ ಒದಗಿಸಲು ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ಮಧ್ಯೆ, ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಹಾಗೂ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರು ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮಹಿಳಾ ಆಯೋಗದ ಅಧ್ಯಕ್ಷರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ವಿಷಯದ ಗಂಭೀರತೆಯನ್ನು ವಿವರಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಿಭಾ ಕುಳಾಯಿ, ಸಂತ್ರಸ್ತ ಯುವತಿಯನ್ನು ಆಕೆಯ ಗಂಡನ ಮನೆಗೆ ಸೇರಿಸುವ ಸಂಪೂರ್ಣ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ಘೋಷಿಸಿದ್ದಾರೆ. “ಇಲ್ಲಿಯವರೆಗೆ ಸಂತ್ರಸ್ತೆಗೆ ಒಬ್ಬಳು ತಾಯಿ ಇದ್ದರು. ಇನ್ನು ಮುಂದೆ ನಾನು ಕೂಡ ಅವಳಿಗೆ ತಾಯಿ. ಸಂತ್ರಸ್ತ ಕುಟುಂಬದ ಎಲ್ಲ ಖರ್ಚು ವೆಚ್ಚಗಳನ್ನು ನಾನು ಭರಿಸುತ್ತೇನೆ” ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ ಅವರು, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಸಂತ್ರಸ್ತೆಯ ತಾಯಿಯೊಂದಿಗೆ ಮಾತನಾಡಿದ ಪ್ರತಿಭಾ ಕುಳಾಯಿ, “ನಾನು ನಿಮ್ಮೊಂದಿಗಿದ್ದೇನೆ, ಧೈರ್ಯ ಕಳೆದುಕೊಳ್ಳಬೇಡಿ. ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸಿಕೊಂಡು ಜೀವನ ಮಾಡಬೇಡಿ. ಅಂತಹ ದೊಡ್ಡ ತಪ್ಪು ನೀವೇನೂ ಮಾಡಿಲ್ಲ. ಇವತ್ತಿನಿಂದ ಮಾಸ್ಕ್ ತೆಗೆದು ಧೈರ್ಯದಿಂದ ಇರಬೇಕು” ಎಂದು ಹೇಳಿ, ಸಂತ್ರಸ್ತೆಯ ತಾಯಿ ಧರಿಸಿದ್ದ ಮಾಸ್ಕ್ ಅನ್ನು ತೆಗೆಸಿದರು. ಇಂತಹ ಘಟನೆಗಳು ನಡೆದಾಗ ಮಹಿಳೆಯರು ಧೈರ್ಯ ಕಳೆದುಕೊಳ್ಳಬಾರದು, ಬದಲಾಗಿ ಇಂತಹವರ ವಿರುದ್ಧ ಹೋರಾಡಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಅವರೊಂದಿಗೆ ಸಂತ್ರಸ್ತೆಯ ತಾಯಿ ನಮಿತಾ ಅವರು ದೂರವಾಣಿಯಲ್ಲಿ ಮಾತನಾಡಿದ್ದು, ನ್ಯಾಯ ಒದಗಿಸುವಂತೆ ಕೇಳಿಕೊಂಡಿದ್ದಾರೆ. ನಾಗಲಕ್ಷ್ಮಿ ಅವರು ಸಂತ್ರಸ್ತೆಯ ತಾಯಿಗೆ ಧೈರ್ಯ ಹೇಳಿ, ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜೇನು+ ಕಾಳು ಮೆಣಸಿನ ಅದ್ಭುತ: ಪ್ರತಿದಿನ ಬೆಳಿಗ್ಗೆ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿ!

ಜೇನುತುಪ್ಪ ಮತ್ತು ಕಾಳು ಮೆಣಸಿನ ಪುಡಿ, ಈ ಎರಡೂ ಪದಾರ್ಥಗಳು ಔಷಧೀಯ ಗುಣಗಳಿಂದ ಸಮೃದ್ಧವಾಗಿದ್ದು, ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತವೆ.

2026ರ ತಮಿಳುನಾಡು ಸಿಎಂ ಅಭ್ಯರ್ಥಿ ನಟ ವಿಜಯ್: ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಎಂದ ಟಿವಿಕೆ!

2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ವಿಜಯ್ ಅವರನ್ನು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಶುಕ್ರವಾರ ಘೋಷಿಸಲಾಗಿದೆ.

ಆಗಸ್ಟ್ 15 ರಿಂದ ‘ಫಾಸ್ಟ್ಯಾಗ್ ವಾರ್ಷಿಕ ಪಾಸ್’ ಜಾರಿ: ₹3000ಕ್ಕೆ 200 ಟ್ರಿಪ್‌ಗಳಿಗೆ ಟೋಲ್ ಫ್ರೀ!

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ, ಅಂದರೆ ಆಗಸ್ಟ್ 15, 2025 ರಿಂದ, ರಾಷ್ಟ್ರೀಯ ಹೆದ್ದಾರಿಗಳಲ್ಲಿ "ಫಾಸ್ಟ್ಯಾಗ್ ವಾರ್ಷಿಕ ಪಾಸ್" ಅನ್ನು ಜಾರಿಗೊಳಿಸಲಾಗುವುದು ಎಂದು ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.

ಉಳ್ಳಾಲದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತೇಜಸ್ : ಶವವಾಗಿ ರೈಲ್ವೇ ಹಳಿಯಲ್ಲಿ ಪತ್ತೆ, ಆತ್ಮಹತ್ಯೆಯ ಶಂಕೆ

ಬುಧವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಉಚ್ಚ ಶಿಕ್ಷಣ ಪಡೆಯುತ್ತಿದ್ದ ಯುವಕ ತೇಜಸ್ (24) ಅವರ ಛಿದ್ರಗೊಂಡ ಮೃತದೇಹ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ.