ಪುತ್ತೂರು: ಕೃಷಿ ಕಾರ್ಯದ ವೇಳೆ ಆಯತಪ್ಪಿ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್ ಸಾವು

Date:

spot_img

ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆ ಎಂಬಲ್ಲಿ ಜನವರಿ 19ರ ಸೋಮವಾರದಂದು ಈ ಆಕಸ್ಮಿಕ ಅವಘಡ ಸಂಭವಿಸಿದೆ. ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್ ಪೈಂಟಿಮುಗೇರು (62) ಅವರು ಮೃತಪಟ್ಟ ದುರ್ದೈವಿ. ಬಡಗನ್ನೂರು ಸರ್ಕಾರಿ ಶಾಲೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಇವರು, ತಮ್ಮ ನಿವಾಸದ ಅಂಗಳದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ.

ಘಟನೆಯ ವಿವರ: ಮನೆಯ ಅಂಗಳದಲ್ಲಿದ್ದ ತೆಂಗಿನ ಮರಕ್ಕೆ ಹಬ್ಬಿಸಲಾಗಿದ್ದ ಕಾಳುಮೆಣಸನ್ನು ಕೀಳಲು ನಾರಾಯಣ ನಾಯಕ್ ಅವರು ಅಲ್ಯೂಮಿನಿಯಂ ಏಣಿಯನ್ನು ಏರಿದ್ದರು. ಈ ಸಂದರ್ಭದಲ್ಲಿ ಏಣಿ ಆಯತಪ್ಪಿ ಜಾರಿದ ಪರಿಣಾಮ, ಅವರು ಮರದ ಮೇಲಿಂದ ಏಣಿಯ ಸಮೇತ ಕೆಳಕ್ಕೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ಯಶೋದಾ ಹಾಗೂ ಇಬ್ಬರು ಪುತ್ರರಾದ ತಿಲಕ್ ರಾಜ್ ಮತ್ತು ಯತಿನ್ ರಾಜ್ ಅವರನ್ನು ಅಗಲಿದ್ದಾರೆ. ಇವರು ಕೇವಲ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಪಡುಮಲೆ ಶ್ರೀ ಕೋವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ